AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಆತಂಕ: ತಜ್ಞರ ತಂಡ ಹೇಳಿದ್ದೇನು? ಯಾವ ಪ್ರದೇಶಗಳ ಜನ ಎಚ್ಚರ ವಹಿಸಬೇಕು? ಇಲ್ಲಿದೆ ವಿವರ

ಭಾರಿ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸುತ್ತಿರುವ ಕಾರಣ, ಸೂಕ್ಷ್ಮ ಪ್ರದೇಶಗಳಿಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ತಂಡ ನೀಡಿರುವ ಎಚ್ಚರಿಕೆ ಏನು? ಉತ್ತರ ಕನ್ನಡ ಜಿಲ್ಲೆಯ ಯಾವ ಪ್ರದೇಶಗಳ ಜನ ಎಚ್ಚರಿಕೆ ವಹಿಸಬೇಕು? ಮಾಹಿತಿ ಇಲ್ಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಆತಂಕ: ತಜ್ಞರ ತಂಡ ಹೇಳಿದ್ದೇನು? ಯಾವ ಪ್ರದೇಶಗಳ ಜನ ಎಚ್ಚರ ವಹಿಸಬೇಕು? ಇಲ್ಲಿದೆ ವಿವರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಆತಂಕ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jun 16, 2025 | 12:54 PM

Share

ಕಾರವಾರ, ಜೂನ್ 16: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ತುಸು ಕಡಿಮೆಯಾಗಿದ್ದರೂ, ಅನೇಕ ಕಡೆಗಳಲ್ಲಿ ಭೂಕುಸಿತದ (Landslide) ಆತಂಕ ಮಾತ್ರ ಕಡಿಮೆಯಾಗಿಲ್ಲ. ಕಳೆದ ವರ್ಷ ಶಿರೂರಿನಲ್ಲಿ ಸಂಭವಿಸಿದ್ದ ಭೂಕುಸಿತದ ಕಹಿನೆನಪಿನಿಂದಲೇ ಜಿಲ್ಲೆಯ ಜನ ಇನ್ನೂ ಹೊರಬಂದಿಲ್ಲ. ಅಂಥದ್ದರಲ್ಲಿ ಈ ವರ್ಷ ಕೂಡ ಅನೇಕ ಕಡೆಗಳಲ್ಲಿ ಭೂಕುಸಿತ, ಗುಡ್ಡಕುಸಿತ ಸಂಭವಿಸಿವೆ. ಹೀಗಾಗಿ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ (GSI) ತಜ್ಞರ ತಂಡ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ತಜ್ಞರ ತಂಡ ಬಿಡು ಬಿಟ್ಟಿದೆ. ಕಾರವಾರ ತಾಲೂಕಿನಲ್ಲಿ ನಾಲ್ಕು ಕಡೆ ಗುಡ್ಡ ಕುಸಿತ ಆಗಿತ್ತು. ಹೀಗಾಗಿ ಕೆಲವೆಡೆ ಜನರನ್ನು ಸ್ಥಳಾಂತರಿಸಿದ್ದರೆ, ಇನ್ನು ಕೆಲವೆಡೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿತ್ತು.

ಕಾರವಾರ ಜನರಿಗೆ ಭೀತಿ ಬೇಡ: ತಜ್ಞರು

ಕಾರವಾರ ತಾಲೂಕಿನ ಬಹುತೇಕ ಕಡೆ ಜನರು ಗುಡ್ಡ ಕುಸಿತದ ಆತಂಕ ಪಡುವ ಅಗತ್ಯ ಇಲ್ಲ ಎಂದು ಇದೀಗ ತಜ್ಞರು ಹೇಳಿದ್ದಾರೆ. ಕಾರವಾರ ನಗರದ ಹಬುವಾಡ ಪ್ರದೇಶದ ಮನೆಗಳಲ್ಲಿ ಜನ ನೆಲೆಸಬಹುದು. ಅಲ್ಲಿ ಗುಡ್ಡ ಜಾಸ್ತಿ ಕುಸಿದರೂ ಮನೆಗಳಿಗೆ ಹೆಚ್ಚಿನ ಹಾನಿ ಆಗಲ್ಲ ಎಂದು ತಜ್ಞರು ವರದಿಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಸುರಂಗ ಬಳಿ ಗುಡ್ಡ ಕುಸಿಯುವ ಸಾಧ್ಯತೆ ಕಡಿಮೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಮಹಿಳೆಯ ಬೆತ್ತಲೆ ವಿಡಿಯೋ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಅರ್ಚಕ ಬಂಧನ
Image
NMMS ವಿದ್ಯಾರ್ಥಿವೇತನಕ್ಕೆ ಸಿದ್ದಗಂಗಾ ಮಠದ 6 ವಿದ್ಯಾರ್ಥಿಗಳು ಆಯ್ಕೆ
Image
ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು
Image
ಲಾಲ್ ಬಾಗ್ ಸುತ್ತೋದು ಇನ್ನಷ್ಟು ಸುಲಭ! ಸಿಗಲಿದೆ ಇ ಸ್ಕೂಟರ್ ಸೌಲಭ್ಯ

ದೇವಿಮನೆ ಘಟ್ಟ ಪ್ರದೇಶದಲ್ಲಿ ಎಚ್ಚರ ಅಗತ್ಯ ಎಂದ ತಜ್ಞರು

ಶಿರಸಿ ತಾಲೂಕಿನ ದೇವಿಮನೆ ಘಟ್ಟದಲ್ಲಿ ಮಾತ್ರ ಮುನ್ನೆಚ್ಚರಿಕೆ ವಹಿಸಲು ತಜ್ಞರು ಸೂಚನೆ ನೀಡಿದ್ದಾರೆ. ದೇವಿಮನೆ ಘಟ್ಟಭಾಗದ ಎಳು ಕಿ.ಮೀ ಅಂತರದಲ್ಲಿ ಐದು ಬಾರಿ ಗುಡ್ಡ ಕುಸಿತ ಆಗಿದೆ. ಗುಡ್ಡ ಕುಸಿತ ಆಗುತ್ತಿರುವ ಸ್ಥಳದಲ್ಲಿನ ಹೆಚ್ಚಿನ ಮಣ್ಣನ್ನು ತೆಗೆಯದಂತೆ ತಜ್ಞರು ಸಲಹೆ ನೀಡಿದ್ದಾರೆ.

ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ ರಾತ್ರಿ ಬಂದ್

ದೇವಿಮನೆ ಘಟ್ಟದ ಮೂಲಕ ಹಾದುಹೋಗುವ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯನ್ನು ರಾತ್ರಿ ಹೊತ್ತು ಬಂದ್ ಮಾಡುವಂತೆ ತಜ್ಞರು ಶಿಫಾರಸು ಮಾಡಿದ್ದಾರೆ. ಈ ರಸ್ತೆಯಲ್ಲಿ ಕಳೆದ 2 ವಾರದ ಅವಧಿಯಲ್ಲಿ ಕೆಲವು ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್