AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದಲ್ಲಿ ಮೀನುಗಾರರ ಬಲೆಗೆ ಬಿತ್ತು ಅಪರೂಪದ ಉದ್ದ ಕಣ್ಣಿನ ಏಡಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ಮೀನುಗಾರರು ಬಲೆ ಹಾಕಿದ್ದರು. ಈ ವೇಳೆ ಅಪರೂಪದ ಏಡಿಯೊಂದು ಬಲೆಗೆ ಬಿದ್ದಿದೆ. ಈ ಏಡಿ ತನ್ನ ದೇಹದಷ್ಟೇ ಉದ್ದವಿರುವ ಕಡ್ಡಿಯಂತ ರಚನೆಯ ತುದಿಯಲ್ಲಿ ಕಣ್ಣುಗಳನ್ನ ಹೊಂದಿದೆ.

ಕಾರವಾರದಲ್ಲಿ ಮೀನುಗಾರರ ಬಲೆಗೆ ಬಿತ್ತು ಅಪರೂಪದ ಉದ್ದ ಕಣ್ಣಿನ ಏಡಿ
ಉದ್ದ ಕಣ್ಣಿನ ಏಡಿ
TV9 Web
| Edited By: |

Updated on:May 21, 2022 | 2:59 PM

Share

ಕಾರವಾರ: ಸದ್ಯ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳ, ಹೊಳೆಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಹೊಸ ನೀರು ಹೆಚ್ಚಾದ್ದಂತೆ ಮೀನು (Fish), ಏಡಿಗಳ (Crab) ಸಂಖ್ಯೆಯೂ ಹೆಚ್ಚಾಗುತ್ತದೆ. ಮಳೆಗಾಲ ಬಂತೆಂದರೆ ಮಾಂಸ ಪ್ರಿಯರಿಗೆ ಅದರಲ್ಲೂ ಗ್ರಾಮೀಣ ಭಾಗದ ಜನರಿಗೆ ಖುಷಿಯೋ ಖುಷಿ. ಕಾರಣ ಮೀನು, ಏಡಿಗಳು ಹೆಚ್ಚಾಗಿ ಸಿಗುತ್ತವೆ. ಒಂದು ಕಡೆ ಮಳೆ, ಇನ್ನೊಂದು ಕಡೆ ಮೀನು, ಏಡಿ ಹಿಡಿಯುವುದೇ ಒಂದು ರೀತಿ ಹಬ್ಬ. ಇದೇನೇ ಇರಲಿ, ಇಂದು (ಮೇ 21) ಕಾರಾವಾರ ತಾಲೂಕಿನ ಮಾಜಾಳಿಯಲ್ಲಿ ಅತ್ಯಂತ ವಿರಳವಾದ ಉದ್ದ ಕಣ್ಣಿನ ಏಡಿ ಪತ್ತೆಯಾಗಿದೆ. ಈ ಏಡಿಯನ್ನು ನೋಡಿ ಮೀನುಗಾರರು ಆಶ್ಚರ್ಯಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ಮೀನುಗಾರರು ಬಲೆ ಹಾಕಿದ್ದರು. ಈ ವೇಳೆ ಅಪರೂಪದ ಏಡಿಯೊಂದು ಬಲೆಗೆ ಬಿದ್ದಿದೆ. ಈ ಏಡಿ ತನ್ನ ದೇಹದಷ್ಟೇ ಉದ್ದವಿರುವ ಕಡ್ಡಿಯಂತ ರಚನೆಯ ತುದಿಯಲ್ಲಿ ಕಣ್ಣುಗಳನ್ನ ಹೊಂದಿದೆ. ಸ್ಯುಡೊಪೊತಾಲಾಮಸ್ ವಿಜಿಲ್ ಎಂದು ಕರೆಯಲ್ಪಡುವ ಏಡಿ ಇದಾಗಿದೆ. ಇನ್ನು ಈ ಏಡಿ ಸಾಮಾನ್ಯವಾಗಿ ಹವಾಯಿ ದ್ವೀಪ, ಕೆಂಪು ಸಮುದ್ರ, ಜಪಾನ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಏಷ್ಯಾದ ದ್ವೀಪ ರಾಷ್ಟ್ರಗಳಲ್ಲಿ ಕಾಣಸಿಗುತ್ತದೆ. ಈ ಅಪರೂಪದ ಏಡಿಗೆ ಮಾರುಕಟ್ಟೆಯಲ್ಲಿ ಸಕತ್ ಬೇಡಿಕೆಯೂ ಇದೆ.

ಇದನ್ನೂ ಓದಿ: ಚಾಟ್ಸ್​ ತಿನ್ನುವುದರಿಂದ ಆರೋಗ್ಯಕ್ಕೆ ಅಪಾಯವೇ?: ತಜ್ಞರು ಹೇಳೋದೆ ಬೇರೆ

ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ: ಮಂಗಳೂರು: ಮೊಟ್ಟೆ ಎಂದಾಗ ಅದರ ಆಕಾರ ಎಲ್ಲರಿಗೂ ಗೊತ್ತಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಕೋಳಿಯೊಂದು ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ಈ ಘಟನೆ‌ ನಡೆದಿದೆ. ಲಾಯಿಲ ಗ್ರಾಮದ ಬೇಲಾಜೆ ಮನೆಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿ, ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿದೆ. ಈ ಮೊಟ್ಟೆಯನ್ನು ನೋಡಿದ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ. ಮೊಟ್ಟೆಯನ್ನು ನೋಡಲು ಪ್ರಶಾಂತ್ ಅವರ ಮನೆಗೆ ಜನರು ಆಗಮಿಸುತ್ತಿದ್ದಾರೆ. ಈವರೆಗೆ ಕೋಳಿ ಒಂದೇ ಆಕಾರದ ಸುಮಾರು 10 ಮೊಟ್ಟೆಗಳನ್ನ ಇಟ್ಟಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Sat, 21 May 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ