AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಮದುವೆಗೆ ಕರೆಯುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ಮನೆ ಕಳ್ಳತನಕ್ಕೆ ಯತ್ನ, ಬಂದೂಕು ತೋರಿಸುತ್ತಿದ್ದಂತೆ ಪರಾರಿ ವಿಡಿಯೋ ವೈರಲ್

ಅಪರಿಚಿತ ವ್ಯಕ್ತಿಯೊಬ್ಬ ಮದುವೆಗೆ ಕರೆಯಲು ಬಂದಿದ್ದಾಗಿ ಹೇಳಿಕೊಂಡು ಮನೆ ಬಾಗಿಲು ತಟ್ಟಿದ್ದಾನೆ. ಊರಿನವರು ಅಥವಾ ದೂರದ ಸಂಬಂಧಿಕರು ಇರಬಹುದು ಎಂದು ಮನೆಯವರು ಬಾಗಿಲು ತೆರೆದಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿ ಚಾಕುವಿನಿಂದ ದಾಳಿ ನಡೆಸಿದ್ದು ಬಂದೂಕು ತೋರಿಸುತ್ತಿದ್ದಂತೆ ಪರಾರಿಯಾಗಿದ್ದಾರೆ.

ಕಾರವಾರ: ಮದುವೆಗೆ ಕರೆಯುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ಮನೆ ಕಳ್ಳತನಕ್ಕೆ ಯತ್ನ, ಬಂದೂಕು ತೋರಿಸುತ್ತಿದ್ದಂತೆ ಪರಾರಿ ವಿಡಿಯೋ ವೈರಲ್
ಮನೆಯಿಂದ ಪಾರಾರಿಯಾಗುತ್ತಿರುವ ಕಳ್ಳ
ಆಯೇಷಾ ಬಾನು
|

Updated on: Mar 04, 2023 | 12:36 PM

Share

ಕಾರವಾರ: ಮದುವೆಗೆ ಕರೆಯುವ ನೆಪದಲ್ಲಿ ಚಾಕು ತೋರಿಸಿ ಮನೆ ಕಳ್ಳತನ ಮಾಡಲು ಯತ್ನ ನಡೆದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಿನ್ನೆ(ಮಾರ್ಚ್ 03) ರಾತ್ರಿ ನಡೆದಿದೆ. ವ್ಯಕ್ತಿಯೋರ್ವ ಮದುವೆಗೆ ಆಮಂತ್ರಣ ಕೊಡಲು ಬಂದಿದ್ದಾಗಿ ಹೇಳಿ ಮನೆಗೆ ನುಗ್ಗಿ ಬಳಿಕ ಕುಟುಂಬಸ್ಥರ ಮೇಲೆ ದಾಳಿ ನಡೆಸಿ ಮನೆ ಕಳ್ಳತನಕ್ಕೆ ಯತ್ನಿಸಿದ್ದಾನೆ.

ಶಿರಸಿ ತಾಲೂಕಿನ ಮಂಡೆಮನೆಯ ಜಿ.ಆರ್.ಹೆಗಡೆ ಎಂಬುವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಮದುವೆಗೆ ಕರೆಯಲು ಬಂದಿದ್ದಾಗಿ ಹೇಳಿಕೊಂಡು ಮನೆ ಬಾಗಿಲು ತಟ್ಟಿದ್ದಾನೆ. ಊರಿನವರು ಅಥವಾ ದೂರದ ಸಂಬಂಧಿಕರು ಇರಬಹುದು ಎಂದು ಮನೆಯವರು ಬಾಗಿಲು ತೆರೆದಿದ್ದಾರೆ. ಈ ವೇಳೆ ತಕ್ಷಣ ಚಾಕುವಿನಿಂದ ಮನೆಯ ಯಜಮಾನನ ಮೇಲೆ ಹಲ್ಲೆ ನಡೆಸಿದ್ದು ಜಿ.ಆರ್.ಹೆಗಡೆ ಅವರ ಕೈಗೆ ಗಾಯವಾಗಿದೆ. ಈ ಗಲಾಟೆ ಕೇಳಿ ಜಿ.ಆರ್.ಹೆಗಡೆಯವರ ಮಗ ಮನೆಯಲ್ಲಿದ್ದ ಬಂದೂಕನ್ನು ತೆಗೆದುಕೊಂಡು ಬಂದಿದ್ದಾರೆ. ಆಗ ಮಗ ಬಂದೂಕು ತರುತ್ತಿದ್ದಂತೇ ಕಳ್ಳ ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳ ಮನೆಗೆ ಬಂದು ಪರಾರಿಯಾಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮನೆ ಮಾಲೀಕ ಕೂಡಲೇ ಶಿರಸಿ ಗ್ರಾಮೀಣ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಸಿಟಿವಿ ದೃಶ್ಯಾವಳಿ ಹಾಗೂ ಚಾಕುವಿನಿಂದ ಉಂಟಾದ ಗಾಯದ ಚಿತ್ರಗಳು ಹರಿದಾಡುತ್ತಿವೆ. ಸದ್ಯ ಶಿರಸಿ ಗ್ರಾಮೀಣ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶೀಘ್ರವಾಗಿ ಆರೋಪಿಯನ್ನು ಬಂಧಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಕೃತ್ಯ ಎಸಗಿದ್ದ ಇಬ್ಬರು ಕಾಮುಕರ ಹೆಡೆಮುರಿ ಕಟ್ಟಿದ ಪೊಲೀಸರು

ಹೆಜ್ಜೇನು ದಾಳಿ, 50ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೆಟ್​​​ ಕ್ಯಾಂಪ್​​ನಲ್ಲಿ​​ ಹೆಜ್ಜೇನು ದಾಳಿ ನಡೆಸಿ 50ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಶಿಬಿರ ವೇಳೆ ಹೆಜ್ಜೇನು ದಾಳಿ ನಡೆಸಿದೆ. ದಲಿತ ಸಂಘರ್ಷ ಸಮಿತಿ 2 ದಿನಗಳ ಅಧ್ಯಯನ ಶಿಬಿರ ಹಮ್ಮಿಕೊಂಡಿತ್ತು. ಅಧ್ಯಯನ ಶಿಬಿರದಲ್ಲಿ 300ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಈ ವೇಳೆ ನಡೆದ ಹೆಜ್ಜೇನು ದಾಳಿಯಿಂದ 50ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​