AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ
ಆಯೇಷಾ ಬಾನು
|

Updated on: Oct 05, 2023 | 2:36 PM

Share

ಕಾರವಾರ, ಅಕ್ಟೋಬರ್ 5: ರಸ್ತೆಯಲ್ಲಿ ಗುಂಡಿಗಳು (Pathole) ಎದುರಾದ್ರೆ ಸಾಕು, ಸರ್ಕಾರಕ್ಕೆ ಶಾಪ ಹಾಕಿ ಬೈ ಕೊಂಡು ಮುಂದೆ ಹೋಗುವವರ ನಡುವೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೆ ರಸ್ತೆ ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವೃದ್ಧ ಕಾರವಾರದ (Karwar) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುತ್ತಿರುವ ಫೋಟೋ ಹಾಘೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕಾರವಾರದ ಹಬ್ಬುವಾಡ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಇದಿರಿಂದಾಗಿ ಪ್ರತಿ ನಿತ್ಯ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇದ್ದಾರೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕಣ್ಣು ಮುಚ್ಚಿ ಕೂತಿದೆ. ಇದನ್ನು ಗಮನಿಸಿದ ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಬೇಸತ್ತ ಜನ: “ಆಸ್ತಿ ತೆರಿಗೆ ಬಹಿಷ್ಕಾರ ಅಭಿಯಾನ” ಆರಂಭಿಸಿದ ಬೆಂಗಳೂರಿಗರು

ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ. ಜಾನ್ ಅವರು ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಬಂದು ರಸ್ತೆ ಪಕ್ಕ ಸಿಗುವ ಕಲ್ಲು- ಮಣ್ಣನ್ನ ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಮಾಡುತ್ತಿದ್ದಾರೆ.

ವೃದ್ಧನ ಈ ನಿಸ್ವಾರ್ಥ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುತ್ತಿರುವ ಈ ವೃದ್ಧನ ಶ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಕಾರವಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು