Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ
Follow us
ಆಯೇಷಾ ಬಾನು
|

Updated on: Oct 05, 2023 | 2:36 PM

ಕಾರವಾರ, ಅಕ್ಟೋಬರ್ 5: ರಸ್ತೆಯಲ್ಲಿ ಗುಂಡಿಗಳು (Pathole) ಎದುರಾದ್ರೆ ಸಾಕು, ಸರ್ಕಾರಕ್ಕೆ ಶಾಪ ಹಾಕಿ ಬೈ ಕೊಂಡು ಮುಂದೆ ಹೋಗುವವರ ನಡುವೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೆ ರಸ್ತೆ ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವೃದ್ಧ ಕಾರವಾರದ (Karwar) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುತ್ತಿರುವ ಫೋಟೋ ಹಾಘೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕಾರವಾರದ ಹಬ್ಬುವಾಡ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಇದಿರಿಂದಾಗಿ ಪ್ರತಿ ನಿತ್ಯ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇದ್ದಾರೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕಣ್ಣು ಮುಚ್ಚಿ ಕೂತಿದೆ. ಇದನ್ನು ಗಮನಿಸಿದ ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಬೇಸತ್ತ ಜನ: “ಆಸ್ತಿ ತೆರಿಗೆ ಬಹಿಷ್ಕಾರ ಅಭಿಯಾನ” ಆರಂಭಿಸಿದ ಬೆಂಗಳೂರಿಗರು

ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ. ಜಾನ್ ಅವರು ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಬಂದು ರಸ್ತೆ ಪಕ್ಕ ಸಿಗುವ ಕಲ್ಲು- ಮಣ್ಣನ್ನ ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಮಾಡುತ್ತಿದ್ದಾರೆ.

ವೃದ್ಧನ ಈ ನಿಸ್ವಾರ್ಥ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುತ್ತಿರುವ ಈ ವೃದ್ಧನ ಶ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಕಾರವಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ