AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ
ಆಯೇಷಾ ಬಾನು
|

Updated on: Oct 05, 2023 | 2:36 PM

Share

ಕಾರವಾರ, ಅಕ್ಟೋಬರ್ 5: ರಸ್ತೆಯಲ್ಲಿ ಗುಂಡಿಗಳು (Pathole) ಎದುರಾದ್ರೆ ಸಾಕು, ಸರ್ಕಾರಕ್ಕೆ ಶಾಪ ಹಾಕಿ ಬೈ ಕೊಂಡು ಮುಂದೆ ಹೋಗುವವರ ನಡುವೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೆ ರಸ್ತೆ ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವೃದ್ಧ ಕಾರವಾರದ (Karwar) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುತ್ತಿರುವ ಫೋಟೋ ಹಾಘೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕಾರವಾರದ ಹಬ್ಬುವಾಡ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಇದಿರಿಂದಾಗಿ ಪ್ರತಿ ನಿತ್ಯ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇದ್ದಾರೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕಣ್ಣು ಮುಚ್ಚಿ ಕೂತಿದೆ. ಇದನ್ನು ಗಮನಿಸಿದ ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಬೇಸತ್ತ ಜನ: “ಆಸ್ತಿ ತೆರಿಗೆ ಬಹಿಷ್ಕಾರ ಅಭಿಯಾನ” ಆರಂಭಿಸಿದ ಬೆಂಗಳೂರಿಗರು

ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ. ಜಾನ್ ಅವರು ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಬಂದು ರಸ್ತೆ ಪಕ್ಕ ಸಿಗುವ ಕಲ್ಲು- ಮಣ್ಣನ್ನ ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಮಾಡುತ್ತಿದ್ದಾರೆ.

ವೃದ್ಧನ ಈ ನಿಸ್ವಾರ್ಥ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುತ್ತಿರುವ ಈ ವೃದ್ಧನ ಶ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಕಾರವಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ