AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ
ಆಯೇಷಾ ಬಾನು
|

Updated on: Oct 05, 2023 | 2:36 PM

Share

ಕಾರವಾರ, ಅಕ್ಟೋಬರ್ 5: ರಸ್ತೆಯಲ್ಲಿ ಗುಂಡಿಗಳು (Pathole) ಎದುರಾದ್ರೆ ಸಾಕು, ಸರ್ಕಾರಕ್ಕೆ ಶಾಪ ಹಾಕಿ ಬೈ ಕೊಂಡು ಮುಂದೆ ಹೋಗುವವರ ನಡುವೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೆ ರಸ್ತೆ ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವೃದ್ಧ ಕಾರವಾರದ (Karwar) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುತ್ತಿರುವ ಫೋಟೋ ಹಾಘೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕಾರವಾರದ ಹಬ್ಬುವಾಡ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಇದಿರಿಂದಾಗಿ ಪ್ರತಿ ನಿತ್ಯ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇದ್ದಾರೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕಣ್ಣು ಮುಚ್ಚಿ ಕೂತಿದೆ. ಇದನ್ನು ಗಮನಿಸಿದ ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಬೇಸತ್ತ ಜನ: “ಆಸ್ತಿ ತೆರಿಗೆ ಬಹಿಷ್ಕಾರ ಅಭಿಯಾನ” ಆರಂಭಿಸಿದ ಬೆಂಗಳೂರಿಗರು

ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ. ಜಾನ್ ಅವರು ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಬಂದು ರಸ್ತೆ ಪಕ್ಕ ಸಿಗುವ ಕಲ್ಲು- ಮಣ್ಣನ್ನ ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಮಾಡುತ್ತಿದ್ದಾರೆ.

ವೃದ್ಧನ ಈ ನಿಸ್ವಾರ್ಥ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುತ್ತಿರುವ ಈ ವೃದ್ಧನ ಶ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಕಾರವಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!