AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 05, 2023 | 2:36 PM

Share

ಕಾರವಾರ, ಅಕ್ಟೋಬರ್ 5: ರಸ್ತೆಯಲ್ಲಿ ಗುಂಡಿಗಳು (Pathole) ಎದುರಾದ್ರೆ ಸಾಕು, ಸರ್ಕಾರಕ್ಕೆ ಶಾಪ ಹಾಕಿ ಬೈ ಕೊಂಡು ಮುಂದೆ ಹೋಗುವವರ ನಡುವೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೆ ರಸ್ತೆ ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವೃದ್ಧ ಕಾರವಾರದ (Karwar) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುತ್ತಿರುವ ಫೋಟೋ ಹಾಘೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕಾರವಾರದ ಹಬ್ಬುವಾಡ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಇದಿರಿಂದಾಗಿ ಪ್ರತಿ ನಿತ್ಯ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇದ್ದಾರೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕಣ್ಣು ಮುಚ್ಚಿ ಕೂತಿದೆ. ಇದನ್ನು ಗಮನಿಸಿದ ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಬೇಸತ್ತ ಜನ: “ಆಸ್ತಿ ತೆರಿಗೆ ಬಹಿಷ್ಕಾರ ಅಭಿಯಾನ” ಆರಂಭಿಸಿದ ಬೆಂಗಳೂರಿಗರು

ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ. ಜಾನ್ ಅವರು ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಬಂದು ರಸ್ತೆ ಪಕ್ಕ ಸಿಗುವ ಕಲ್ಲು- ಮಣ್ಣನ್ನ ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಮಾಡುತ್ತಿದ್ದಾರೆ.

ವೃದ್ಧನ ಈ ನಿಸ್ವಾರ್ಥ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುತ್ತಿರುವ ಈ ವೃದ್ಧನ ಶ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಕಾರವಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ