AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 05, 2023 | 2:36 PM

Share

ಕಾರವಾರ, ಅಕ್ಟೋಬರ್ 5: ರಸ್ತೆಯಲ್ಲಿ ಗುಂಡಿಗಳು (Pathole) ಎದುರಾದ್ರೆ ಸಾಕು, ಸರ್ಕಾರಕ್ಕೆ ಶಾಪ ಹಾಕಿ ಬೈ ಕೊಂಡು ಮುಂದೆ ಹೋಗುವವರ ನಡುವೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೆ ರಸ್ತೆ ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವೃದ್ಧ ಕಾರವಾರದ (Karwar) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುತ್ತಿರುವ ಫೋಟೋ ಹಾಘೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕಾರವಾರದ ಹಬ್ಬುವಾಡ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಇದಿರಿಂದಾಗಿ ಪ್ರತಿ ನಿತ್ಯ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇದ್ದಾರೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕಣ್ಣು ಮುಚ್ಚಿ ಕೂತಿದೆ. ಇದನ್ನು ಗಮನಿಸಿದ ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಬೇಸತ್ತ ಜನ: “ಆಸ್ತಿ ತೆರಿಗೆ ಬಹಿಷ್ಕಾರ ಅಭಿಯಾನ” ಆರಂಭಿಸಿದ ಬೆಂಗಳೂರಿಗರು

ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ. ಜಾನ್ ಅವರು ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಬಂದು ರಸ್ತೆ ಪಕ್ಕ ಸಿಗುವ ಕಲ್ಲು- ಮಣ್ಣನ್ನ ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಮಾಡುತ್ತಿದ್ದಾರೆ.

ವೃದ್ಧನ ಈ ನಿಸ್ವಾರ್ಥ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುತ್ತಿರುವ ಈ ವೃದ್ಧನ ಶ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಕಾರವಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ