AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಭೂಮಿ ಒತ್ತುವರಿ ಖಂಡಿಸಿ ಸಚಿವ ಮಂಕಾಳು ವೈದ್ಯ ವಿರುದ್ಧ ಬೃಹತ್ ಪ್ರತಿಭಟನೆ

ಇಂದು (ಜೂ.01) ಬಿಜೆಪಿ ಕಾರ್ಯಕರ್ತರಿಂದ ಭಟ್ಕಳ(Bhatkal) ಎಸಿ ಕಚೇರಿ ಮುಂದೆ ಬೃಹತ್​ ಪ್ರತಿಭಟನೆ ನಡೆಸಲಾಗಿದೆ. ಸಚಿವ ಮಂಕಾಳು ವೈದ್ಯ ಅವರು ಸುಮಾರು 2.5 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುನೀಲ್ ಕುಮಾರ ಗಂಭೀರ ಆರೋಪ ಮಾಡಿದ್ದು, ಈ ಹಿನ್ನಲೆ ಬೃಹತ್​ ಹೋರಾಟ ನಡೆಸಿದ್ದಾರೆ.

ಭಟ್ಕಳದಲ್ಲಿ ಭೂಮಿ ಒತ್ತುವರಿ ಖಂಡಿಸಿ ಸಚಿವ ಮಂಕಾಳು ವೈದ್ಯ ವಿರುದ್ಧ ಬೃಹತ್ ಪ್ರತಿಭಟನೆ
ಭಟ್ಕಳದಲ್ಲಿ ಭೂಮಿ ಒತ್ತುವರಿ ಖಂಡಿಸಿ ಸಚಿವ ಮಂಕಾಳು ವೈದ್ಯ ವಿರುದ್ಧ ಬೃಹತ್ ಪ್ರತಿಭಟನೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jun 01, 2024 | 8:02 PM

Share

ಉತ್ತರ ಕನ್ನಡ, ಜೂ.01: ಭಟ್ಕಳದಲ್ಲಿ ಆಕ್ರಮ ಗೋವು ಸಾಗಾಣಿಕೆ ಹಾಗೂ ಸಚಿವ ಮಂಕಾಳು ವೈದ್ಯ (Mankal Vaidya)ರಿಂದ ಭೂಮಿ ಒತ್ತುವರಿ ಖಂಡಿಸಿ ಇಂದು (ಜೂ.01) ಬಿಜೆಪಿ ಕಾರ್ಯಕರ್ತರಿಂದ ಭಟ್ಕಳ(Bhatkal) ಎಸಿ ಕಚೇರಿ ಮುಂದೆ ಬೃಹತ್​ ಪ್ರತಿಭಟನೆ ನಡೆಸಲಾಗಿದೆ. ಸಚಿವರು ಸುಮಾರು 2.5 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುನೀಲ್ ಕುಮಾರ ಗಂಭೀರ ಆರೋಪ ಮಾಡಿದ್ದು, ಸುನೀಲ್ ನಾಯ್ಕ್ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.

ಸಚಿವರ ವಿರುದ್ದ ಮಾಜಿ ಶಾಸಕ ಗಂಭೀರ ಆರೋಪ

ಈ ಕುರಿತು ಮಾತನಾಡಿದ ಮಾಜಿ ಶಾಸಕ ಸುನೀಲ್ ನಾಯ್ಕ್, ‘ಸಚಿವ ಮಂಕಾಳು ವೈದ್ಯ ಒಡೆತನದ ಬಿನಾ ಇಂಟರನ್ಯಾಶನಲ್ ಶಾಲೆ ಬಳಿಯ ಅರಣ್ಯ ಭೂಮಿ ಒತ್ತುವರಿ ಮಾಡಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರಿಗೆ ನಾಚಿಗೆ ಆಗಬೇಕು. ಜಿಲ್ಲೆಯ ರಕ್ಷಣೆ ಮಾಡಬೇಕಾದವರೆ ಕೊಳ್ಳೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಸಚಿವರ ಬೇಟಾಲಿಯನ್ ಜಿಲ್ಲೆಯಲ್ಲಿ ಹಲವು ಕಡೆ ಲ್ಯಾಂಡ್ ಮಾಫಿಯಾ ಮಾಡುತ್ತಿದೆ. ಎಷ್ಟೊ ಕುಟುಂಬಗಳು ವಾಸಿಸಲು ಸೂಕ್ತ ಮನೆ ಇರದೆ ಪರದಾಡುತ್ತಿದ್ದು, ಅಂತವರಿಗೆ ಭೂಮಿ ಒದಗಿಸುವುದನ್ನ ಬಿಟ್ಟು, ಇವರಿಗೆ ಬೇಕಾದ ಉದ್ಯಮ ಮಾಡಲು ಅತಿಕ್ರಮಣ ಮಾಡಲಾಗುತ್ತಿದೆ ಎಂದರು.

ಗೋವು ಸಾಗಾಣಿಕೆ ತಡೆಯಬೇಕು

ಇದನ್ನೂ ಓದಿ:ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ

ಜಿಲ್ಲೆಯಲ್ಲಿ ನಡೆಯುತ್ತಿರುವ ಆಕ್ರಮ ಗೋವು ಸಾಗಾಣಿಕೆಗೆ ಕಡಿವಾಣ ಹಾಕಬೇಕು. ಸಂಬಂಧ ಪಟ್ಟ ಅಧಿಕಾರಿಗಳು ಆಕ್ರಮ ಗೋವು ಸಾಗಾಣಿಕೆಗೆ ನಡೆಯದಂತೆ ತಡೆಯಬೇಕು. ಜೊತೆಗೆ ಜಿಲ್ಲೆಯಲ್ಲಿ ಅಕ್ರಮ ಗೋವು ಸಾಗಾಣಿಕೆ ಹೆಚ್ಚಾಗಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಅಕ್ರಮ ಗೋವು ಸಾಗಾಣಿಕೆ ತಡೆಯಬೇಕು ಎಂದು ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸುನೀಲ್ ನಾಯ್ಕ್ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ