AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಭೂಮಿ ಒತ್ತುವರಿ ಖಂಡಿಸಿ ಸಚಿವ ಮಂಕಾಳು ವೈದ್ಯ ವಿರುದ್ಧ ಬೃಹತ್ ಪ್ರತಿಭಟನೆ

ಇಂದು (ಜೂ.01) ಬಿಜೆಪಿ ಕಾರ್ಯಕರ್ತರಿಂದ ಭಟ್ಕಳ(Bhatkal) ಎಸಿ ಕಚೇರಿ ಮುಂದೆ ಬೃಹತ್​ ಪ್ರತಿಭಟನೆ ನಡೆಸಲಾಗಿದೆ. ಸಚಿವ ಮಂಕಾಳು ವೈದ್ಯ ಅವರು ಸುಮಾರು 2.5 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುನೀಲ್ ಕುಮಾರ ಗಂಭೀರ ಆರೋಪ ಮಾಡಿದ್ದು, ಈ ಹಿನ್ನಲೆ ಬೃಹತ್​ ಹೋರಾಟ ನಡೆಸಿದ್ದಾರೆ.

ಭಟ್ಕಳದಲ್ಲಿ ಭೂಮಿ ಒತ್ತುವರಿ ಖಂಡಿಸಿ ಸಚಿವ ಮಂಕಾಳು ವೈದ್ಯ ವಿರುದ್ಧ ಬೃಹತ್ ಪ್ರತಿಭಟನೆ
ಭಟ್ಕಳದಲ್ಲಿ ಭೂಮಿ ಒತ್ತುವರಿ ಖಂಡಿಸಿ ಸಚಿವ ಮಂಕಾಳು ವೈದ್ಯ ವಿರುದ್ಧ ಬೃಹತ್ ಪ್ರತಿಭಟನೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jun 01, 2024 | 8:02 PM

Share

ಉತ್ತರ ಕನ್ನಡ, ಜೂ.01: ಭಟ್ಕಳದಲ್ಲಿ ಆಕ್ರಮ ಗೋವು ಸಾಗಾಣಿಕೆ ಹಾಗೂ ಸಚಿವ ಮಂಕಾಳು ವೈದ್ಯ (Mankal Vaidya)ರಿಂದ ಭೂಮಿ ಒತ್ತುವರಿ ಖಂಡಿಸಿ ಇಂದು (ಜೂ.01) ಬಿಜೆಪಿ ಕಾರ್ಯಕರ್ತರಿಂದ ಭಟ್ಕಳ(Bhatkal) ಎಸಿ ಕಚೇರಿ ಮುಂದೆ ಬೃಹತ್​ ಪ್ರತಿಭಟನೆ ನಡೆಸಲಾಗಿದೆ. ಸಚಿವರು ಸುಮಾರು 2.5 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುನೀಲ್ ಕುಮಾರ ಗಂಭೀರ ಆರೋಪ ಮಾಡಿದ್ದು, ಸುನೀಲ್ ನಾಯ್ಕ್ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.

ಸಚಿವರ ವಿರುದ್ದ ಮಾಜಿ ಶಾಸಕ ಗಂಭೀರ ಆರೋಪ

ಈ ಕುರಿತು ಮಾತನಾಡಿದ ಮಾಜಿ ಶಾಸಕ ಸುನೀಲ್ ನಾಯ್ಕ್, ‘ಸಚಿವ ಮಂಕಾಳು ವೈದ್ಯ ಒಡೆತನದ ಬಿನಾ ಇಂಟರನ್ಯಾಶನಲ್ ಶಾಲೆ ಬಳಿಯ ಅರಣ್ಯ ಭೂಮಿ ಒತ್ತುವರಿ ಮಾಡಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರಿಗೆ ನಾಚಿಗೆ ಆಗಬೇಕು. ಜಿಲ್ಲೆಯ ರಕ್ಷಣೆ ಮಾಡಬೇಕಾದವರೆ ಕೊಳ್ಳೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಸಚಿವರ ಬೇಟಾಲಿಯನ್ ಜಿಲ್ಲೆಯಲ್ಲಿ ಹಲವು ಕಡೆ ಲ್ಯಾಂಡ್ ಮಾಫಿಯಾ ಮಾಡುತ್ತಿದೆ. ಎಷ್ಟೊ ಕುಟುಂಬಗಳು ವಾಸಿಸಲು ಸೂಕ್ತ ಮನೆ ಇರದೆ ಪರದಾಡುತ್ತಿದ್ದು, ಅಂತವರಿಗೆ ಭೂಮಿ ಒದಗಿಸುವುದನ್ನ ಬಿಟ್ಟು, ಇವರಿಗೆ ಬೇಕಾದ ಉದ್ಯಮ ಮಾಡಲು ಅತಿಕ್ರಮಣ ಮಾಡಲಾಗುತ್ತಿದೆ ಎಂದರು.

ಗೋವು ಸಾಗಾಣಿಕೆ ತಡೆಯಬೇಕು

ಇದನ್ನೂ ಓದಿ:ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ

ಜಿಲ್ಲೆಯಲ್ಲಿ ನಡೆಯುತ್ತಿರುವ ಆಕ್ರಮ ಗೋವು ಸಾಗಾಣಿಕೆಗೆ ಕಡಿವಾಣ ಹಾಕಬೇಕು. ಸಂಬಂಧ ಪಟ್ಟ ಅಧಿಕಾರಿಗಳು ಆಕ್ರಮ ಗೋವು ಸಾಗಾಣಿಕೆಗೆ ನಡೆಯದಂತೆ ತಡೆಯಬೇಕು. ಜೊತೆಗೆ ಜಿಲ್ಲೆಯಲ್ಲಿ ಅಕ್ರಮ ಗೋವು ಸಾಗಾಣಿಕೆ ಹೆಚ್ಚಾಗಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಅಕ್ರಮ ಗೋವು ಸಾಗಾಣಿಕೆ ತಡೆಯಬೇಕು ಎಂದು ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸುನೀಲ್ ನಾಯ್ಕ್ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More