Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋರ್ಟ್ಸ್ ಅಂಗಡಿಗೆ ಪಾಕಿಸ್ತಾನ ಉಲ್ಲೇಖಿತ ಬರಹ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು​: ಸ್ಥಳೀಯರಲ್ಲಿ ಆತಂಕ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಅಪರಿಚಿತ ನಿಗೂಢ ಬರಹದ ಪೋಸ್ಟರ್ ಅಂಟಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸ್ಥಳೀಯರ ಆತಂಕಕ್ಕೂ ಕಾರಣವಾಗಿದೆ.

ಸ್ಪೋರ್ಟ್ಸ್ ಅಂಗಡಿಗೆ ಪಾಕಿಸ್ತಾನ ಉಲ್ಲೇಖಿತ ಬರಹ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು​: ಸ್ಥಳೀಯರಲ್ಲಿ ಆತಂಕ
ಅಪರಿಚಿತ ನಿಗೂಢ ಬರಹದ ಪೋಸ್ಟರ್
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 04, 2023 | 5:38 PM

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಅಪರಿಚಿತ ನಿಗೂಢ ಬರಹದ ಪೋಸ್ಟರ್ (poster) ಅಂಟಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸ್ಥಳೀಯರ ಆತಂಕಕ್ಕೂ ಕಾರಣವಾಗಿದೆ. ನಗರದ ಬಂಡೀಬಜಾರದ ಸ್ಪೋರ್ಟ್ಸ್ ಅಂಗಡಿಯೊಂದರ ಗೋಡೆಯ ಮೇಲೆ ಮೂರು ಪೋಸ್ಟರಗಳನ್ನ ಅಂಟಿಸಿದ್ದು, ಬೆಳಿಗ್ಗೆ ಸ್ಥಳೀಯರು ಗಮನಿಸಿದ ಬಳಿಕ ಈ ಸುದ್ದಿ ನಗರದಾದ್ಯಂತ ಹರಡಿದೆ. ಬಿಳಿ ಹಾಳೆಯ ಮೇಲೆ ಕೆಂಪು ಬಣ್ಣದ ಮಾರ್ಕರ್‌ನಿಂದ ಇಂಗ್ಲೀಷ್ ಹಾಗೂ ಕನ್ನಡ ಮಿಶ್ರಿತವಾಗಿ ಬರೆದಿರುವ ಬರಹ ನಿಗೂಢವಾಗಿದ್ದು, ಓದಿದರೆ ಸರಿಯಾಗಿ ಅರ್ಥವಾಗುತ್ತಿಲ್ಲ.

ಬರಹದಲ್ಲಿ ಸಂಗ್ಲಾನಿ ವೆಲಫೇರ್ ಟ್ರಸ್ಟ್ ಎಂದು ಬರೆದಿದ್ದು, ಅದರ ಕೆಳಗೆ ಬ್ರ್ಯಾಕೆಟ್‌ನಲ್ಲಿ ಪಾಕಿಸ್ತಾನ ಕಾಂಟ್ರಾಕ್ಟ್ ಎಂದು ಬರೆಯಲಾಗಿದೆ. ಜೊತೆಗೆ ಪಟ್ಟಣದ ಪಿ.ಎಂ ಹೈಸ್ಕೂಲ್, ಜೈ ಹಿಂದ್ ಹೈಸ್ಕೂಲ್ ಹೆಸರನ್ನ ಉಲ್ಲೇಖಿಸಿದ್ದು ಫಾರೆಸ್ಟ್, ಪೊಲೀಸ್ ಶಬ್ದಗಳನ್ನೂ ಬರೆಯಲಾಗಿದೆ. ಕೊನೆಯಲ್ಲಿ ಇಂತಿ ನಿಮ್ಮ ನಾಗರಿಕ ಎಂದು ಬರೆದಿದ್ದು ಯಾವುದೇ ಹೆಸರನ್ನ ಉಲ್ಲೇಖಿಸಿಲ್ಲ.

ಇದನ್ನೂ ಓದಿ: Uttara Kannada: ಜಿಲ್ಲಾಕೇಂದ್ರಕ್ಕೆ ಸಂಪರ್ಕಿಸುವ ಮೂರ್ನಾಲ್ಕು ರಸ್ತೆಗಳಲ್ಲೇ ಗುಡ್ಡಕುಸಿತದ ಭಯ; ಜೀವ ಕೈಯಲ್ಲಿ ಹಿಡಿದು ವಾಹನ ಸವಾರರ ಸಂಚಾರ

ನೂರು ಬಿಲಿಯನ್ ಡಾಲರ್

ಇನ್ನೊಂದು ಪೋಸ್ಟರನಲ್ಲಿ ಬರೆದಿದ್ದು ಅಲ್ಪ ಸ್ವಲ್ಪ ಅಳಿಸಿ ಹೋಗಿದೆ. ಮೂರನೇ ಪೋಸ್ಟರನಲ್ಲಿ ಹೈಸ್ಕೂಲ್ ಗರ್ಲ್ಸ್ ಎಂಡ್ ಬಾಯ್ಸ ಎಂದು ಬರೆಯಲಾಗಿದೆ. ಹಾಗೂ ನೂರು ಬಿಲಿಯನ್ ಡಾಲರ್ ಎಂದೂ ಬರೆಯಲಾಗಿದೆ. ಮೇಲ್ನೋಟಕ್ಕೆ ಯಾರೋ ಮಾನಸಿಕ ಅಸ್ವಸ್ಥರು ಬರೆದು ಅಂಟಿಸಿದಂತಿದ್ದು ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ಈ ಬರಹ ಅಂಟಿಸಿದವರನ್ನ ಪತ್ತೆಹಚ್ಚಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಜೂ.1ರಿಂದ ಜು.31ರ ವರೆಗೆ ಮೀನುಗಾರಿಕೆ ನಿಷೇಧ: ಪ್ರತಿ ವರ್ಷ 2 ತಿಂಗಳು ಬಂದ್ ಆಗುವುದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಜನರಲ್ಲಿ ಆತಂಕ

ಅಪರಿಚಿತ ನಿಗೂಢ ಬರಹದ ಬಗ್ಗೆ ಸದ್ಯ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಇದನ್ನು ಯಾರು ಬರೆದರು ಮತ್ತು ಯಾವಾಗ ಅಂಟಿಸಿದರು ಎಂಬುದು ತಿಳಿದಿಲ್ಲ. ಆದರೆ ಬರಹದಲ್ಲಿ ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಲಾಗಿದೆ. ಹಾಗಾಗಿ ಇದನ್ನು ಇಲ್ಲಿಗೆ ಬಿಡದೆ ಸೂಕ್ತ ತನಿಖೆ ನಡೆಸಿ ಪೋಸ್ಟರ್​ ಬರೆದು ಅಂಟಿಸಿದವರನ್ನು ಪತ್ತೆ ಹಚ್ಚಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ