AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ಕುಮಾರ್​ ಹೆಗಡೆ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಪಕ್ಷ ಹೇಳಿದ್ರೆ ನಾನು​ ಅವರ ವಿರುದ್ಧ ಸ್ಪರ್ಧಿಸಲು ಸಿದ್ಧ -ಭೀಮಣ್ಣ ನಾಯ್ಕ್

ಕಾಂಗ್ರೆಸ್​ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅನಂತಕುಮಾರ್​ ಹೆಗಡೆ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಗುಡ್ಡ ಕಾಡು ಪ್ರದೇಶ ಹೊಂದಿರುವ ನಮ್ಮ ಜಿಲ್ಲೆಗೆ ಕೇಂದ್ರದಿಂದ ಹೆಚ್ಚಿನ ಅನುದಾನ ತರಬೇಕಿತ್ತು ಎಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಪ್ರಶ್ನೆ ಮಾಡಿದ್ದಾರೆ.

ಅನಂತ್ ಕುಮಾರ್​ ಹೆಗಡೆ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಪಕ್ಷ ಹೇಳಿದ್ರೆ ನಾನು​ ಅವರ ವಿರುದ್ಧ ಸ್ಪರ್ಧಿಸಲು ಸಿದ್ಧ -ಭೀಮಣ್ಣ ನಾಯ್ಕ್
ಶಾಸಕ ಭೀಮಣ್ಣ ನಾಯ್ಕ್
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಆಯೇಷಾ ಬಾನು

Updated on: Jan 16, 2024 | 9:17 AM

ಕಾರವಾರ, ಜ.16: ಲೋಕಸಭೆ ಚುನಾವಣೆ (Lok Sabha Election) ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ಮತ್ತೊಂದು ಮಗ್ಗಲು ಹೊರಳುತ್ತಿದೆ (Karnataka Politics). ಹೆಜ್ಜೆ ಹೆಜ್ಜೆಗೂ ಎದುರಾಳಿಗಳ ಎದೆಚುಚ್ಚುವಂತೆ ಮಾತಿನ ಬಾಣಗಳು ಅತ್ತಿಂದಿತ್ತ ಇತ್ತಿಂದತ್ತ ಶರವೇಗದಲ್ಲಿ ಹೋಗ್ತಿವೆ. ರಾಮಮಂದಿರ ವಿಚಾರವಾಗಿ ಮಾತನಾಡುತ್ತಿದ್ದಾಗ ಸಂಸದ ಅನಂತಕುಮಾರ್ (Ananth Kumar Hegde) ಆಡಿದ ಮಾತು ಕಾಂಗ್ರೆಸ್ಸಿಗರನ್ನ ಕೆರಳುವಂತೆ ಮಾಡಿದೆ. ಹೀಗಾಗಿಯೇ ಕೈ ನಾಯಕರು ಹೋದಲ್ಲಿ ಬಂದಲ್ಲಿ ಅನಂತಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಕಾಂಗ್ರೆಸ್​ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅನಂತಕುಮಾರ್​ ಹೆಗಡೆ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಎಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಶಾಸಕ ಭೀಮಣ್ಣ ನಾಯ್ಕ್ (Bhimanna Naik) ಪ್ರಶ್ನೆ ಮಾಡಿದ್ದಾರೆ.

ನಮ್ಮ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅನಂತ್ ಕುಮಾತ್ ಹೆಗಡೆ ಸಂಸದರಾಗಿ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಗುಡ್ಡ ಕಾಡು ಪ್ರದೇಶ ಹೊಂದಿರುವ ನಮ್ಮ ಜಿಲ್ಲೆಗೆ ಕೇಂದ್ರದಿಂದ ಹೆಚ್ಚಿನ ಅನುದಾನ ತರಬೇಕಿತ್ತು. ಸಿದ್ದರಾಮಯ್ಯ ಸರ್ಕಾರವನ್ನು ಎದುರಿಸುವುದಕ್ಕೆ ಬಿಜೆಪಿಯವರಿಗೆ ಆಗುತ್ತಿಲ್ಲ. ನಮ್ಮ ಐದು ಗ್ಯಾರಂಟಿಗಳನ್ನು ಜಾರಿಗೆ ತಂದ ಬಳಿಕ ಬಿಜೆಪಿ ನಮ್ಮನ್ನ ಎದುರಿಸೊಕೆ ಆಗುತ್ತಿಲ್ಲ. ಎದುರಿಸೊಕೆ ಆಗದಿದ್ದಾಗ ಇಂತಹ ಮಾತುಗಳು ಬರೊದು ಸಹಜ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲ ಸಲ್ಲದ ಹೇಳಿಕೆ ಕೊಡುವಂತಹದ್ದು, ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳುವಂತಹದ್ದು, ಅನೇಕ ಸೈನಿಕರನ್ನು ಕೊಂದು ಚುನಾವಣೆ ಮಾಡಿರುವಂತ ಬಿಜೆಪಿಯವರು ಇವರು.

ಪೆರೆಶ್ ಮೆಸ್ತಾ ವಿಷಯ ಇಟ್ಕೊಂಡು ಇಡೀ ಜಿಲ್ಲೆಯಲ್ಲಿ ದಂಗೆ ಎಬ್ಬಿಸಿದ್ರು

ವಿಧಾನಸಭೆ ಚುನಾವಣೆಯಲ್ಲಿ ಪೆರೆಶ ಮೆಸ್ತಾ ಸಾವಿನ ಹಿನ್ನಲೆ ಇಟ್ಕೊಂಡು ಬಿಜೆಪಿಯವರು ಚುನಾವಣೆ ಮಾಡಿದ್ರು. ಪೆರೆಶ್ ಮೆಸ್ತಾ ವಿಷಯ ಇಟ್ಕೊಂಡು ಇಡೀ ಜಿಲ್ಲೆಯಲ್ಲಿ ದಂಗೆ ಎಬ್ಬಿಸಿದ್ರು. ಅನೇಕ ಕಡೆ ಬೆಂಕಿ ಹಾಕಿ ಗಲಭೆ ಸೃಷ್ಟಿ ಮಾಡಿಸಿದ್ರು. ಅವರದೆ ಸರ್ಕಾರದ ಪೊಲೀಸರಿಂದ ತನಿಖೆ ಆದಾಗ ಸಹಜ ಸಾವು ಎಂದು ವರದಿ ಬಂತು. ಸಹಜ ಸಾವು ಎಂಬ ವರದಿ ಬಂದ ಬಳಿಕ ಪೆರೆಷ ಮೆಸ್ತಾ ಮನೆಯವರನ್ನ ಇವರು ನೋಡಿದ್ರಾ? ಗಲಭೆ ಮಾಡಿದ ಅನೇಕ ಯುವಕರ ಮೇಲೆ ಹಾಕಿರುವ ಕೇಸ್ ಗಳ ಬಗ್ಗೆ ಯೋಚನೆ ಮಾಡಿದ್ರಾ? ಅನೇಕರು ಇವತ್ತಿಗೂ ಕೋರ್ಟ್, ಕಚೇರಿ ಅಂತಾ ಅಲೆದಾಡುತ್ತಿದ್ದಾರೆ. ಅವರ ಬೈಕ್​ಗಳನ್ನು ಬಿಡಿಸಿಕೊಳ್ಳುವ ಕೆಲಸ ಕೂಡ ಬಿಜೆಪಿಯವರು ಮಾಡಲಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಅವನೊಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ? ಅನಂತ್ ಕುಮಾರ್ ಹೆಗಡೆ ವಿರುದ್ಧ ಹೆಚ್.ಆಂಜನೇಯ ವಾಗ್ದಾಳಿ

ಬಿಜೆಪಿಯವರು ಅಧಿಕಾರಕ್ಕೆ ಬರಲು ಸಮಯಕ್ಕೆ ತಕ್ಕಂತೆ ಹಿಂದೂತ್ವ ಬಳಸಿಕೊಳ್ಳುತ್ತಾರೆ. ಚುನಾವಣೆ ಸಮೀಪ ಇದ್ದಾಗ ಹಿಂದುತ್ವದ ಬಗ್ಗೆ ಎಲ್ಲಿಲ್ಲದ ಅಭಿಮಾನ ಬರುತ್ತೆ. ಯಾಕೆ ನಾವು ಹಿಂದೂ ಅಲ್ವಾ? ಹಿಂದೂ ಧರ್ಮ ಕಾಪಾಡುವುದು ಈ ದೇಶದ ಪ್ರತಿಯೊಬ್ಬರ ಕರ್ತವ್ಯ. ಈ ದೇಶದ ಪ್ರತಿಯೊಬ್ಬರೂ ಹಿಂದೂ ಧರ್ಮ ಕಾಪಾಡುವ ಕೆಲಸ ಮಾಡುತ್ತಿದ್ದಾರೆ. ನಾನೂ ಕೂಡ ಹೌದು. ನಮ್ಮ ಪಕ್ಷ ಮಾಡುವ ತಿರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

ಅನಂತಕುಮಾರ್​ ಹೆಗಡೆ ವಿರುದ್ಧ ಸ್ಪರ್ಧಿಸಲು ನಾನು ಸಿದ್ಧ

ಇನ್ನು ಇದೇ ವೇಳೆ ಶಾಸಕ ಭೀಮಣ್ಣ ನಾಯ್ಕ್ ಅವರು ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದ್ದಾರೆ. ನನಗೆ ಲೋಕಸಭೆಗೆ ಸ್ಪರ್ದಿಸುವಂತೆ ಸೂಚಿಸಿದ್ರೆ ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಲು ನಾನು ಸಿದ್ಧ. ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ನಾನು ಬಿಜೆಪಿಯವರಿಗೆ ಶರಣಾಗಿದ್ದೇನೆ ಎಂಬುದು ಉಹಾಪೋಹ. ಇವತ್ತೇ ಶಾಸಕ ಸ್ಥಾನ ಬಿಟ್ಟು ಲೋಕಸಭೆಗೆ ಸ್ಪರ್ಧಿಸಲು ಸೂಚಿಸಿದ್ರೆ ನಾನು ರೆಡಿ. 3 ಚುನಾವಣೆಯಲ್ಲಿ ನಾನು ಸೋತರೂ ಪಕ್ಷ ಸಂಘಟನೆ ಮಾಡಿದ್ದೇನೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ