AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತರಾಮ ಸಿದ್ದಿ ಬಸ್ ಸ್ಟ್ಯಾಂಡಿನಲ್ಲಿ ಕುಳಿತ ಫೋಟೊ ವೈರಲ್; ಬೇಸರ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ

ಸಂಘದ ಸ್ವಯಂ ಸೇವಕರಿಗೆ ಈ ಥರದ್ದು ಹೊಸದಲ್ಲ. ಮೊದಲು ಹೀಗೆ ಓಡಾಡ್ತಿದ್ದೆ. ಈಗಲೂ ಓಡಾಡ್ತಿದ್ದೇನೆ. ಮುಂದೆ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಮುಗಿದ ಮೇಲೆ ಮತ್ತೆ ಹೀಗೆ ಓಡಾಡಲೇಬೇಕು ಎಂದು ಹೇಳಿದ್ದಾರೆ.

ಶಾಂತರಾಮ ಸಿದ್ದಿ ಬಸ್ ಸ್ಟ್ಯಾಂಡಿನಲ್ಲಿ ಕುಳಿತ ಫೋಟೊ ವೈರಲ್; ಬೇಸರ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ
ಶಾಂತರಾಮ ಸಿದ್ದಿ
TV9 Web
| Updated By: ganapathi bhat|

Updated on:Dec 28, 2021 | 8:25 PM

Share

ಯಲ್ಲಾಪುರ: ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕುಳಿತುಕೊಂಡಿರುವ ಫೋಟೊ ಒಂದು ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಂತಾರಾಮ ಸಿದ್ದಿ ಅವರ ಈ ಸರಳತೆಗೆ ಮೆಚ್ಚುಗೆ ಸೂಚಿಸಿ ಹಲವು ಮಂದಿ ಫೋಟೊ ಹಂಚಿಕೊಂಡಿದ್ದರು. ವಿಧಾನ ಪರಿಷತ್ ಸದಸ್ಯರ ಸರಳತೆ, ಜೀವನಶೈಲಿಯ ಬಗ್ಗೆ ಹೊಗಳಿಕೆಯ ನುಡಿಗಳನ್ನು ಬರೆದುಕೊಂಡಿದ್ದರು. ಈ ಫೋಟೊ ವೈರಲ್ ಆಗಿರುವುದರ ಬಗ್ಗೆ ಇದೀಗ ಶಾಂತರಾಮ ಸಿದ್ದಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗೆ ಫೋಟೊ ವೈರಲ್ ಆಗಿರುವುದು ಸರಿ ಕಂಡಿಲ್ಲ, ಇದರಿಂದ ಬೇಸರವಾಗಿದೆ ಎಂದು ಹೇಳಿದ್ದಾರೆ. ಅವರ ಮಾತಿನ ವಿವರ ಇಲ್ಲಿ ನೀಡಲಾಗಿದೆ.

ಕಳೆದ ಎರಡು ದಿನಗಳಿಂದ ರಾಣೆಬೆನ್ನೂರಿನ ಬಸ್ ಸ್ಟಾಂಡ್​ನಲ್ಲಿ ಬಸ್​ಗೆ ಕಾಯುತ್ತಿರುವ ಫೋಟೊ ಹಾಕಿ ಹೊಗಳಿಕೆ ಮಾತು ಬರೆದಿದ್ದೀರಿ. ನನಗೆ ಅದು ಅಷ್ಟೊಂದು ಖುಷಿ ಕೊಟ್ಟಿಲ್ಲ. ಸಂಘದ ಸ್ವಯಂ ಸೇವಕರಿಗೆ ಈ ಥರದ್ದು ಹೊಸದಲ್ಲ. ಮೊದಲು ಹೀಗೆ ಓಡಾಡ್ತಿದ್ದೆ. ಈಗಲೂ ಓಡಾಡ್ತಿದ್ದೇನೆ. ಮುಂದೆ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಮುಗಿದ ಮೇಲೆ ಮತ್ತೆ ಹೀಗೆ ಓಡಾಡಲೇಬೇಕು ಎಂದು ಶಾಂತರಾಮ ಸಿದ್ದಿ ಹೇಳಿದ್ದಾರೆ.

ನಮ್ಮ ಹಿರಿಯರ ಬಗ್ಗೆ ನಾವು ಅನೇಕ ಘಟನೆಗಳನ್ನು ಕೇಳಿದ್ದೇವೆ. ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೈಕ್​ನಲ್ಲಿ ಮುಖ್ಯಮಂತ್ರಿಗಳ ಮನೆಗೆ ಬಂದದ್ದನ್ನು ನೋಡಿದ್ದೇವೆ. ಈಗಿನ ಶಿಕ್ಷಣ ಸಚಿವ ಬಿಸಿ ನಾಗೇಶ್ ಬ್ಯಾಗ್ ಹಿಡಿದುಕೊಂಡು ರೈಲು ಹತ್ತಿದ್ದನ್ನು ನೋಡಿದ್ದೇವೆ. ಅದಕ್ಕೂ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಲೋಕಸಭೆಗೆ ಸೈಕಲ್​ನಲ್ಲಿ ಬರುತ್ತಿದ್ದರು ಎಂಬುದನ್ನು ನಾವು ಕೇಳಿ ತಿಳಿದಿದ್ದೇವೆ ಎಂದು ಹಿರಿಯ ನಾಯಕರನ್ನು ನೆನಪಿಸಿಕೊಂಡಿದ್ದಾರೆ.

ಇಷ್ಟೆಲ್ಲಾ ಇರುವಾಗ ನಾನು ಬಸ್​ನಲ್ಲಿ ಹೋಗಿರುವುದನ್ನು ವಿಶೇಷವಾಗಿ, ಸರಳತೆ ಸರಳತೆ ಅನ್ನುವುದು ಸರಿ ಇಲ್ಲ ಅಂತ ಅನಿಸುತ್ತದೆ. ನಾವೆಲ್ಲಾ ಸಂಘದ ಸ್ವಯಂ ಸೇವಕರು ಹೀಗೇ ಇರುತ್ತೇವೆ ಮತ್ತು ಹೀಗೆ ಇರಬೇಕು. ಅವಶ್ಯಕತೆ ಇದ್ದಲ್ಲಿ ಕಾರ್ ಬಳಸುತ್ತೇವೆ. ಇಲ್ಲವಾದಲ್ಲಿ ಬಸ್ ಇದೆ. ಸರ್ಕಾರ ಉಚಿತವಾಗಿ ಟಿಕೆಟ್ ಕೊಟ್ಟಿದೆ. ಅದನ್ನು ನಾವು ಬಳಸುತ್ತೇವೆ. ಅದನ್ನು ಹೊಗಳುವಂಥದ್ದು ಏನೂ ಇಲ್ಲ ಎಂದು ಅನಿಸುತ್ತದೆ ಎಂದು ಹೇಳಿ ಪ್ರಬುದ್ಧತೆ ತೋರಿದ್ದಾರೆ.

ಅನೇಕ ಒಳ್ಳೆಯ ಜನರಿಗೆ ಇದು ಮನಸಿಗೆ ನೋವಾಗಿರಬಹುದು. ನಾವೂ ಹೀಗೇ ಇದ್ದೇವೆ ಆದ್ರೆ ಇವ್ರನ್ನು ಹೈಲೈಟ್ ಮಾಡಿದ್ದಾರೆ ಎಂದು. ಹೀಗೆ ಫೋಟೊ ತೆಗೆದು ಹಾಕಿರುವುದು ಈ ಪ್ರಚಾರದಿಂದ ಅನೇಕ ಹಿರಿಯರಿಗೆ ಸಂಘದ ಕಾರ್ಯಕರ್ತರಿಗೆ ಇದರಿಂದ ನೋವಾಗಿರಬಹುದು. ಅವರೆಲ್ಲರಲ್ಲೂ ಹೀಗೇ ಆಗಿರುವುದಕ್ಕೆ ಕ್ಷಮೆ ಕೇಳುತ್ತೇನೆ. ಮತ್ತು ಇದನ್ನು ಇನ್ನು ಹೈಲೈಟ್ ಮಾಡಬಾರದು ಎಂದು ಕೇಳಿಕೊಳ್ಳುತ್ತೇನೆ. ನಮ್ಮ ಸರಳತೆಗೆ ಅದೆಲ್ಲೋ ಅಡ್ಡಿ ಆಗಬಹುದು ಎಂಬ ಆತಂಕ ಅಷ್ಟೇ ಎಂದು ಕಾಳಜಿಯ ನುಡಿಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ ‘ಕಿತ್ತೂರು ಕರ್ನಾಟಕಕ್ಕೆ: ಕರಾವಳಿ ಸೌಲಭ್ಯಗಳಿಂದ ವಂಚಿತ?

ಇದನ್ನೂ ಓದಿ: ಸ್ವಾತಿ ನಕ್ಷತ್ರದ ಮಳೆ ನೀರಿಗಿದೆ ಔಷಧೀಯ ಮಹತ್ವ; ಉತ್ತರ ಕನ್ನಡ ಜನರ ಪಾಲಿಗಂತೂ ಇದು ಅಮೃತಕ್ಕೆ ಸಮಾನ !

Published On - 8:12 pm, Tue, 28 December 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!