Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮದ ಜನರ ನಿದ್ದೆಗೆಡಿಸಿದೆ ಈ ಮಂಗ; 10 ಕ್ಕೂ ಹೆಚ್ಚು ಜನರ ಮೇಲೆ ದಾಳಿ, ಕೋತಿ ಓಡಿಸಲು ಹರ ಸಾಹಸಪಡುತ್ತಿರುವ ಇಡೀ ಊರು

ಉತ್ತರಕನ್ನಡ ಜಿಲ್ಲೆ ಅಂಕೋಲದ ಬಬ್ರೂವಾಡ ಗ್ರಾಮದಲ್ಲಿ ಒಂದೇ ಒಂದು ಕೋತಿ ಗ್ರಾಮದ ಜನರ ನಿದ್ದೆ ಹಾಳು ಮಾಡಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಈ ಊರಿಗೆ ಏಕಾಏಕಿ ಕೋತಿ ಎಂಟ್ರಿ ಕೊಟ್ಟಿದೆ.

ಗ್ರಾಮದ ಜನರ ನಿದ್ದೆಗೆಡಿಸಿದೆ ಈ ಮಂಗ; 10 ಕ್ಕೂ ಹೆಚ್ಚು ಜನರ ಮೇಲೆ ದಾಳಿ, ಕೋತಿ ಓಡಿಸಲು ಹರ ಸಾಹಸಪಡುತ್ತಿರುವ ಇಡೀ ಊರು
ಕೋತಿ ಓಡಿಸಲು ಹರ ಸಾಹಸಪಡುತ್ತಿರುವ ಊರಿನ ಜನ
Follow us
TV9 Web
| Updated By: ಆಯೇಷಾ ಬಾನು

Updated on: Apr 29, 2022 | 8:22 AM

ಕಾರವಾರ: ಕಳೆದ ಒಂದು ವಾರದಿಂದ ಈ ಗ್ರಾಮದಲ್ಲಿ ಕೋತಿಯ ಕಾಟ ಹೆಚ್ಚಾಗಿದೆ. ಊರಿನ ಜನರ ಮೇಲೆ ಕೋತಿ ದಾಳಿ ಮಾಡಿದ್ದು ಭಯ ಹುಟ್ಟುವಂತೆ ಮಾಡಿದೆ. ಹೀಗಾಗಿ ಆಂತಕಗೊಂಡ ಅಲ್ಲಿಯ ಜನ ಗುಂಪು ಗುಂಪಾಗಿ ಕೈಯಲ್ಲಿ ಕೋಲು ಹಿಡಿದು ಕೋತಿಯನ್ನು ಮಟ್ಟ ಹಾಕಲು ರೆಡಿಯಾಗಿದ್ದಾರೆ.

10 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ ಕೋತಿ ಉತ್ತರಕನ್ನಡ ಜಿಲ್ಲೆ ಅಂಕೋಲದ ಬಬ್ರೂವಾಡ ಗ್ರಾಮದಲ್ಲಿ ಒಂದೇ ಒಂದು ಕೋತಿ ಗ್ರಾಮದ ಜನರ ನಿದ್ದೆ ಹಾಳು ಮಾಡಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಈ ಊರಿಗೆ ಏಕಾಏಕಿ ಕೋತಿ ಎಂಟ್ರಿ ಕೊಟ್ಟಿದೆ. ಒಂದು ವಾರದಿಂದ ಬಿಟ್ಟೂ ಬಿಡದೆ ಜನರ ಮೇಲೆ ಅಟ್ಯಾಕ್ ಮಾಡ್ತಿದೆ. ಹತ್ತಾರು ಜನರಿಗೆ ಕಚ್ಚಿ ರಕ್ತಸ್ರಾವವಾಗುವಂತೆ ತೀವ್ರವಾಗಿ ಗಾಯ ಮಾಡಿದೆ. ಲಕ್ಷ್ಮಿ ಎಂಬ ವೃದ್ಧೆಯ ಮಂಗನ ದಾಳಿಯಿಂದ ನರಳುವಂತಾಗಿದೆ. ಇನ್ನೂ ಮಂಗನ ಭಯಕ್ಕೆ ಚಿಕ್ಕ ಮಕ್ಕಳು, ವೃದ್ಧರು, ಮಹಿಳೆಯರು ಮನೆಯಿಂದ ಆಚೆ ಬರುವುದಕ್ಕು ಭಯ ಪಡುವಂತಾಗಿದೆ.

ಒಂದು ವಾರದಿಂದ ಯಾವುದೇ ಕೆಲಸಕ್ಕೆ ಹೋಗದೆ ಮಂಗನನ್ನು ಹಿಡಿಯುವುದೇ ಇಲ್ಲಿಯ ಜನ್ರಿಗೆ ದೊಡ್ಡ ಕಾಯಕವಾಗಿದೆ. ಕೈಯಲ್ಲಿ ಕೋಲು ಹಿಡಿದು, ಪಟಾಕಿ ಹಚ್ಚುತ್ತ ಒಂದು ಕಡೆಯಿಂದ ಮತ್ತೊಂದು ಕಡೆ ಮಂಗನನ್ನು ಓಡಿಸುತ್ತಿದ್ದಾರೆ. ಅರಣ್ಯ ಸಿಬ್ಬಂದಿ, ಅರವಳಿಕೆ ತಜ್ಞರು, ಡೇರಿಂಗ್ ಟೀಮ್ ಎಲ್ಲರೂ ಮಂಗನನ್ನು ಹಿಡಿಯಲು ಪ್ರಯತ್ನ ಪಡ್ತಿದ್ದಾರೆ. ವಿಶೇಷ ಅಂದ್ರೆ ಒಂಟಿಯಾಗಿ ಓಡಾಡೋ ಮಹಿಳೆಯರನ್ನೇ ಕೋತಿ ಟಾರ್ಗೆಟ್ ಮಾಡಿ ಕಚ್ಚುತ್ತಿದೆ. ಒಟ್ಟಾರೆ, ಕೋತಿ ಕಾಟದಿಂದ ಗ್ರಾಮಸ್ಥರು ಹೈರಾಣಾಗಿದ್ದು, ಹೇಗಾದ್ರು ಮಂಗ ಸೆರೆ ಸಿಕ್ರೆ ಸಾಕಪ್ಪ ಅಂತ ಅಂದುಕೊಳ್ತಿದ್ದಾರೆ.

ವರದಿ: ವಿನಾಯಕ ಬಡಿಗೇರ, ಟಿವಿ 9 ಕಾರವಾರ

ಇದನ್ನೂ ಓದಿ: ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ಗೀತಮ್ ಕಾಲೇಜಿನ ಮೇಲೆ ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದ್ದಕ್ಕೆ ವಿದ್ಯಾರ್ಥಿನಿ ಸಾವು ಬಿಟ್ಟು ಬೇರೆ ಕಾರಣಗಳಿವೆಯೇ?

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ