AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮದ ಜನರ ನಿದ್ದೆಗೆಡಿಸಿದೆ ಈ ಮಂಗ; 10 ಕ್ಕೂ ಹೆಚ್ಚು ಜನರ ಮೇಲೆ ದಾಳಿ, ಕೋತಿ ಓಡಿಸಲು ಹರ ಸಾಹಸಪಡುತ್ತಿರುವ ಇಡೀ ಊರು

ಉತ್ತರಕನ್ನಡ ಜಿಲ್ಲೆ ಅಂಕೋಲದ ಬಬ್ರೂವಾಡ ಗ್ರಾಮದಲ್ಲಿ ಒಂದೇ ಒಂದು ಕೋತಿ ಗ್ರಾಮದ ಜನರ ನಿದ್ದೆ ಹಾಳು ಮಾಡಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಈ ಊರಿಗೆ ಏಕಾಏಕಿ ಕೋತಿ ಎಂಟ್ರಿ ಕೊಟ್ಟಿದೆ.

ಗ್ರಾಮದ ಜನರ ನಿದ್ದೆಗೆಡಿಸಿದೆ ಈ ಮಂಗ; 10 ಕ್ಕೂ ಹೆಚ್ಚು ಜನರ ಮೇಲೆ ದಾಳಿ, ಕೋತಿ ಓಡಿಸಲು ಹರ ಸಾಹಸಪಡುತ್ತಿರುವ ಇಡೀ ಊರು
ಕೋತಿ ಓಡಿಸಲು ಹರ ಸಾಹಸಪಡುತ್ತಿರುವ ಊರಿನ ಜನ
TV9 Web
| Edited By: |

Updated on: Apr 29, 2022 | 8:22 AM

Share

ಕಾರವಾರ: ಕಳೆದ ಒಂದು ವಾರದಿಂದ ಈ ಗ್ರಾಮದಲ್ಲಿ ಕೋತಿಯ ಕಾಟ ಹೆಚ್ಚಾಗಿದೆ. ಊರಿನ ಜನರ ಮೇಲೆ ಕೋತಿ ದಾಳಿ ಮಾಡಿದ್ದು ಭಯ ಹುಟ್ಟುವಂತೆ ಮಾಡಿದೆ. ಹೀಗಾಗಿ ಆಂತಕಗೊಂಡ ಅಲ್ಲಿಯ ಜನ ಗುಂಪು ಗುಂಪಾಗಿ ಕೈಯಲ್ಲಿ ಕೋಲು ಹಿಡಿದು ಕೋತಿಯನ್ನು ಮಟ್ಟ ಹಾಕಲು ರೆಡಿಯಾಗಿದ್ದಾರೆ.

10 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ ಕೋತಿ ಉತ್ತರಕನ್ನಡ ಜಿಲ್ಲೆ ಅಂಕೋಲದ ಬಬ್ರೂವಾಡ ಗ್ರಾಮದಲ್ಲಿ ಒಂದೇ ಒಂದು ಕೋತಿ ಗ್ರಾಮದ ಜನರ ನಿದ್ದೆ ಹಾಳು ಮಾಡಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಈ ಊರಿಗೆ ಏಕಾಏಕಿ ಕೋತಿ ಎಂಟ್ರಿ ಕೊಟ್ಟಿದೆ. ಒಂದು ವಾರದಿಂದ ಬಿಟ್ಟೂ ಬಿಡದೆ ಜನರ ಮೇಲೆ ಅಟ್ಯಾಕ್ ಮಾಡ್ತಿದೆ. ಹತ್ತಾರು ಜನರಿಗೆ ಕಚ್ಚಿ ರಕ್ತಸ್ರಾವವಾಗುವಂತೆ ತೀವ್ರವಾಗಿ ಗಾಯ ಮಾಡಿದೆ. ಲಕ್ಷ್ಮಿ ಎಂಬ ವೃದ್ಧೆಯ ಮಂಗನ ದಾಳಿಯಿಂದ ನರಳುವಂತಾಗಿದೆ. ಇನ್ನೂ ಮಂಗನ ಭಯಕ್ಕೆ ಚಿಕ್ಕ ಮಕ್ಕಳು, ವೃದ್ಧರು, ಮಹಿಳೆಯರು ಮನೆಯಿಂದ ಆಚೆ ಬರುವುದಕ್ಕು ಭಯ ಪಡುವಂತಾಗಿದೆ.

ಒಂದು ವಾರದಿಂದ ಯಾವುದೇ ಕೆಲಸಕ್ಕೆ ಹೋಗದೆ ಮಂಗನನ್ನು ಹಿಡಿಯುವುದೇ ಇಲ್ಲಿಯ ಜನ್ರಿಗೆ ದೊಡ್ಡ ಕಾಯಕವಾಗಿದೆ. ಕೈಯಲ್ಲಿ ಕೋಲು ಹಿಡಿದು, ಪಟಾಕಿ ಹಚ್ಚುತ್ತ ಒಂದು ಕಡೆಯಿಂದ ಮತ್ತೊಂದು ಕಡೆ ಮಂಗನನ್ನು ಓಡಿಸುತ್ತಿದ್ದಾರೆ. ಅರಣ್ಯ ಸಿಬ್ಬಂದಿ, ಅರವಳಿಕೆ ತಜ್ಞರು, ಡೇರಿಂಗ್ ಟೀಮ್ ಎಲ್ಲರೂ ಮಂಗನನ್ನು ಹಿಡಿಯಲು ಪ್ರಯತ್ನ ಪಡ್ತಿದ್ದಾರೆ. ವಿಶೇಷ ಅಂದ್ರೆ ಒಂಟಿಯಾಗಿ ಓಡಾಡೋ ಮಹಿಳೆಯರನ್ನೇ ಕೋತಿ ಟಾರ್ಗೆಟ್ ಮಾಡಿ ಕಚ್ಚುತ್ತಿದೆ. ಒಟ್ಟಾರೆ, ಕೋತಿ ಕಾಟದಿಂದ ಗ್ರಾಮಸ್ಥರು ಹೈರಾಣಾಗಿದ್ದು, ಹೇಗಾದ್ರು ಮಂಗ ಸೆರೆ ಸಿಕ್ರೆ ಸಾಕಪ್ಪ ಅಂತ ಅಂದುಕೊಳ್ತಿದ್ದಾರೆ.

ವರದಿ: ವಿನಾಯಕ ಬಡಿಗೇರ, ಟಿವಿ 9 ಕಾರವಾರ

ಇದನ್ನೂ ಓದಿ: ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ಗೀತಮ್ ಕಾಲೇಜಿನ ಮೇಲೆ ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದ್ದಕ್ಕೆ ವಿದ್ಯಾರ್ಥಿನಿ ಸಾವು ಬಿಟ್ಟು ಬೇರೆ ಕಾರಣಗಳಿವೆಯೇ?

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ