AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲಾ ತಾಲೂಕಿಗೆ ವ್ಯಾಪಿಸಿದ ಮಂಗನ ಕಾಯಿಲೆ- ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ

ಇಷ್ಟು ದಿನ ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಮಂಗನ ಕಾಯಿಲೆ, ಇದೀಗ ಅಂಕೋಲಾ(Ankola) ತಾಲೂಕಿಗೆ ವ್ಯಾಪಿಸಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ.

ಅಂಕೋಲಾ ತಾಲೂಕಿಗೆ ವ್ಯಾಪಿಸಿದ ಮಂಗನ ಕಾಯಿಲೆ- ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ
ಅಂಕೋಲಾದಲ್ಲಿ ಮಂಗನ ಕಾಯಿಲೆ ಹೆಚ್ಚಳ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Feb 29, 2024 | 4:17 PM

Share

ಉತ್ತರ ಕನ್ನಡ,ಫೆ.29: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ. ಅದು ಅಲ್ಲದೆ ಇಷ್ಟು ದಿನ ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಮಂಗನ ಕಾಯಿಲೆ, ಇದೀಗ ಅಂಕೋಲಾ(Ankola) ತಾಲೂಕಿಗೆ ವ್ಯಾಪಿಸಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ 2 ಸಾವು, 46 ಪ್ರಕರಣ ಪತ್ತೆ

ಇನ್ನು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಂಗನ ಕಾಯಿಲೆಯಿಂದ ಇಬ್ಬರು ಸಾವನ್ನಪ್ಪಿದ್ದರೆ, 46 ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲಿ ಸಿದ್ದಾಪುರ ತಾಲೂಕಿನಲ್ಲಿಯೇ 45 ಹಾಗೂ ಅಂಕೊಲಾ ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನಲೆ ಆರೋಗ್ಯ ಇಲಾಖೆ ಸಿಬ್ಬಂದಿ, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮುಂದುವರೆಸಿದ್ದಾರೆ. ಆದರೆ, ಸಾರ್ವಜನಿಕರು ಮಾತ್ರ, ‘ನಿಮ್ಮ ಮುಂಜಾಗೃತೆ ಬೇಡ ನಮಗೆ, ಲಸಿಕೆ ಕೊಡಿ ಎನ್ನುತ್ತಿದ್ದಾರೆ.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ, ಹೆಚ್ಚಾದ ಆತಂಕ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇದೇ ಫೆ.26 ರಂದು ಮಂಗನ ಕಾಯಿಲೆಗೆ 2ನೇ ಬಲಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದರು. 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯನ್ನು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಎರಡನೇ ಸಾವು ಸಂಭವಿಸಿತ್ತು.

ಅರಣ್ಯಕ್ಕೆ ಹೋದವರಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಯಿಲೆ

ಅರಣ್ಯಕ್ಕೆ ಹೋದ ಜನರಿಗೆ ಉಣ್ಣೆಗಳು ಕಚ್ಚಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಕೊಪ್ಪ ತಾಲ್ಲೂಕಿನಲ್ಲಿ ಹರಡಿರುವ ಮಂಗನ ಕಾಯಿಲೆಗೆ ಮರ ಕಡಿತವೇ ಕಾರಣ ಎಂಬುದನ್ನು ಸ್ಥಳೀಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!