AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox Virus: ಉತ್ತರ ಕನ್ನಡದಲ್ಲಿ ಹೆಚ್ಚಿದ ಮಂಗನ ಕಾಯಿಲೆ; ಒಂದೇ ದಿನ 8 ಜನರಲ್ಲಿ ಪತ್ತೆ

Kyasanur Forest Disease: ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ (KFD) ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಸಿದ್ದಾಪುರ (Siddapura)ದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಬೆಳಕಿಗೆ ಬಂದಿದೆ. ಇನ್ನು 10 ವರ್ಷದ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Monkeypox Virus: ಉತ್ತರ ಕನ್ನಡದಲ್ಲಿ ಹೆಚ್ಚಿದ ಮಂಗನ ಕಾಯಿಲೆ; ಒಂದೇ ದಿನ 8 ಜನರಲ್ಲಿ ಪತ್ತೆ
ಸಿದ್ದಾಪುರದಲ್ಲಿ ಮಂಗನ ಕಾಯಿಲೆ
ಸೂರಜ್​, ಮಹಾವೀರ್​ ಉತ್ತರೆ
| Updated By: Digi Tech Desk|

Updated on:Feb 02, 2024 | 11:25 AM

Share

ಉತ್ತರ ಕನ್ನಡ, ಜ.31: ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ (KFD) ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಸಿದ್ದಾಪುರ (Siddapura)ದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಮೂಲಕ 10 ದಿನದಲ್ಲಿ ಇದರ ಸಂಖ್ಯೆ 16 ಕ್ಕೇರಿದೆ. ಇನ್ನು 10 ವರ್ಷದ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಹೆಚ್ಚಾದ ಮಂಗನ ಕಾಯಿಲೆಗೆ ಆರೋಗ್ಯ ಇಲಾಖೆ ಬಳಿ ಇಲ್ಲ ಲಸಿಕೆ

ಜಿಲ್ಲೆಯಲ್ಲಿ‌ ಮಂಗನ ಕಾಯಿಲೆ ಪಸರಿಸುತ್ತಿದೆ. ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದ್ದು, ಇದು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಪರದಾಡುತ್ತಿದೆ. ಅದರಲ್ಲೂ ಚಳಿಗಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರಿಗೆ ಮಂಗನ ಕಾಯಿಲೆ ಆತಂಕ ಕಾಡುತ್ತಿದೆ.

ಇದನ್ನೂ ಓದಿ:ಮಲೆನಾಡಿನಲ್ಲಿ ಹೆಚ್ಚಾದ ಮಂಗನ ಕಾಯಿಲೆ; ಆರೋಗ್ಯ ಇಲಾಖೆ ಬಳಿ ಇಲ್ಲ ಲಸಿಕೆ

ಕಳೆದ ಐದು ವರ್ಷದಲ್ಲಿ ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಜನ ಸೋಂಕಿತರಾಗಿದ್ದು,  8 ಜನ ಈ ಕಾಯಿಲೆಯಿಂದ ಮೃತರಾಗಿದ್ದರು. ಇದೀಗ ಶಿವಮೊಗ್ಗ ಜಿಲ್ಲೆಯ ಗಡಿಯನ್ನು ಹೊಂದುಕೊಂಡಿರುವ ಸಿದ್ದಾಪುರದ ಕೊರ್ಲಕೈ, ಬಿಳಗಿ ಗ್ರಾಮದ ಒಟ್ಟು 7 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡರೇ ಹಲವು ಜನರಲ್ಲಿ ಈ ಸೊಂಕಿನ ಲಕ್ಷಣ ಕಂಡುಬಂದಿದೆ. ಇನ್ನು ಈ ಭಾಗದ ಜನರ ರಕ್ತ ಮಾದರಿ ಸಹ ಪಡೆಯಲಾಗುತ್ತಿದ್ದು, ಈ ಭಾಗದಲ್ಲಿ ಎರಡು ಮಂಗಳು ಸಾವನ್ನಪ್ಪಿದೆ.

ಸಧ್ಯ ಮಾರಣಾಂತಿಕ ಮಂಗನ ಕಾಯಿಲೆ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರನ್ನು ಬೆಂಬಿಡದೇ ಕಾಡುತಿದ್ದು, ಎರಡು ವರ್ಷದಿಂದ ಲಸಿಕೆ ಇಲ್ಲದೇ “ತೈಲವೇ ಗತಿ” ಎನ್ನುವಂತಾಗಿದೆ. ದೊಡ್ಡ ಮಟ್ಟದ ಸಾವು-ನೋವುಗಳು ಆಗುವುದರೊಳಗೆ ಸರ್ಕಾರ ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 31 January 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!