AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ಮಂಗನ ಕಾಯಿಲೆಗೆ ಸಿದ್ದಾಪುರದ ಬಾಲಕಿ ಬಲಿ

ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಗ ವೈಫಲ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲೂಕೊಂದರಲ್ಲೇ ಸುಮಾರು 90 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ.

Monkeypox: ಮಂಗನ ಕಾಯಿಲೆಗೆ ಸಿದ್ದಾಪುರದ ಬಾಲಕಿ ಬಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 06, 2024 | 7:10 AM

Share

ಸಿದ್ದಾಪುರ, ಮೇ 6: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ (Siddapur) ತಾಲೂಕಿನ ಅರೆಂದೂರಿನ 5 ವರ್ಷದ ಬಾಲಕಿ ಮಂಗನ ಕಾಯಿಲೆಯಿಂದ (Monkeypox) ಮೃತಪಟ್ಟಿದ್ದಾಳೆ. ಇದರೊಂದಿಗೆ, ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ ಇತ್ತೀಚೆಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾದಂತಾಗಿದೆ. ಮಲೆನಾಡು ಪ್ರದೇಶದಲ್ಲಿ ಮಂಗನ ಕಾಯಿಲೆ ಮತ್ತೆ ಉಲ್ಬಣಗೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಗ ವೈಫಲ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ.

ಸಿದ್ದಾಪುರ ತಾಲೂಕೊಂದರಲ್ಲೇ ಸುಮಾರು 90 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಹತ್ತರಗಿ ನವಿಲಗಾರ ಗ್ರಾಮದ ವೃದ್ಧ ರಾಮಚಂದ್ರಗೌಡ ಎಂಬವರು ಮಾರ್ಚ್​​ನಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದರು.

ಏನಿದು ಮಂಗನ ಕಾಯಿಲೆ?

ಮಂಗನ ಕಾಯಿಲೆಯನ್ನು ಮಂಕಿಫಾಕ್ಸ್​ ಅಥವಾ ಕೆಎಫ್‌ಡಿ ಎಂದೂ ಕರೆಯಲಾಗುತ್ತದೆ. ಇದೊಂದು ವೈರಲ್ ಹೆಮರಾಜಿಕ್ ಕಾಯಿಲೆಯಾಗಿದ್ದು, ಇದನ್ನು ಮೊದಲು 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಅರಣ್ಯದಲ್ಲಿ ಗುರುತಿಸಲಾಯಿತು. ಅಂದಿನಿಂದ ಇದನ್ನು ಕ್ಯಾಸನೂರ್ ಫಾರೆಸ್ಟ್ ಡಿಸೀಸ್ (ಕೆಎಫ್​ಡಿ) ಎಂದೇ ಕರೆಯಲಾಗುತ್ತಿದೆ.

ಹಠಾತ್ ಜ್ವರ, ತಲೆನೋವು, ವಾಂತಿ, ಹೊಟ್ಟೆ ನೋವು, ಸ್ನಾಯು ನೋವು ಮತ್ತು ಬೆನ್ನುನೋವು, ಚಳಿ, ಸುಸ್ತು ಮತ್ತು ಅತಿಸಾರ ಇವು ಮಂಗನ ಕಾಯಿಲೆಯ ಆರಂಭಿಕ ಲಕ್ಷಣಗಳಾಗಿವೆ. ರಕ್ತಸ್ರಾವದ ರೋಗಲಕ್ಷಣಗಳೊಂದಿಗೆ ತೀವ್ರವಾಗುವ ಈ ರೋಗವು ಜೀವಕ್ಕೆ ಆಪತ್ತು ಉಂಟುಮಾಡಬಹುದು. ಈ ವೈರಸ್‌ನ ಲಕ್ಷಣಗಳು ಸಾಮಾನ್ಯವಾಗಿ ಸೋಂಕು ತಗುಲಿದ 2ರಿಂದ 7 ದಿನಗಳ ನಂತರ ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ ಮೂರಕ್ಕೇರಿಕೆ

ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಂಕಿಗೆ ಒಳಗಾದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಥವಾ ಮಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು