AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?

ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
TV9 Web
| Updated By: ಸಾಧು ಶ್ರೀನಾಥ್​|

Updated on:Apr 26, 2022 | 4:52 PM

Share

ಕಾರವಾರ: ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಜಿಂಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿದ್ದು, ಅದು ಸ್ಥಳದಲ್ಲೇ ಅಸುನೀಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ರಾಜ್ಯ ಹೆದ್ದಾರಿ-93ರ ಕಲ್ಕುಣಿ ಕ್ರಾಸ್ ಬಳಿ ಈ ಆಕಸ್ಮಿಕ ಘಟನೆ ನಡೆದಿದೆ. ಅಂದಾಜು 10 ವರ್ಷ ಪ್ರಾಯದ ಗಂಡು ಜಿಂಕೆ ಅಪಘಾತದಲ್ಲಿ ಕೊನೆಯುಸಿರೆಳೆದಿದೆ. ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸುನೀಗಿದ ಜಿಂಕೆಯನ್ನು ಶವಪರೀಕ್ಷೆಗಾಗಿ ಅರಣ್ಯ ಸಿಬ್ಬಂದಿ ಸಿದ್ಧಾಪುರದ ಅರಣ್ಯಾಧಿಕಾರಿ ಕಚೇರಿಗೆ ಕೊಂಡೊಯ್ದಿದ್ದಾರೆ.

ಹಸು ಮೇಯಿಸುವಾಗ ಮಹಿಳೆ ಮೇಲೆ ಆನೆ ದಾಳಿ: ಮೈಸೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ಮುಂದುವರಿದಿದ್ದು, ಹಾಡಿ ಮಹಿಳೆಯ ಮೇಲೆ ಆನೆಯೊಂದು ದಾಳಿ‌ ಮಾಡಿದೆ. ಕಾಡಿನಿಂದ ನಾಡಿಗೆ ಬಂದಿರುವ ಆನೆಗಳು ದಿಕ್ಕಾಪಾಲಾಗಿ ಗ್ರಾಮದಲ್ಲಿ ಓಡಾಡುತ್ತಿವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅದ್ವಾಳ ಗ್ರಾಮದ ಕೆರೆ ಬಳಿ ಹಸು ಮೇಯಿಸುತ್ತಿದ್ದಾಗ ಮಹಿಳೆಯ ಮೇಲೆ ಆನೆ ದಾಳಿ ಮಾಡಿ, ಗಾಯಗೊಳಿಸಿದೆ. ಹರಳಳ್ಳಿ ಗ್ರಾಮದ 55 ವರ್ಷ ಮಹಿಳೆ ಪುಟ್ಟಲಕ್ಷ್ಮಮ್ಮ ಗಯಗೊಂಡವರು. ಈ ಮಧ್ಯೆ, ಆನೆಯನ್ನು ಕಾಡಿಗೆ ವಾಪಸ್ಸು ಕಳುಹಿಸಲು ಅರಣ್ಯ‌ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ದುಬಾರೆ ಬಳಿ ಕಾವೇರಿ ನದಿಯಲ್ಲಿ ಸುಳಿಗೆ ಸಿಲುಕಿ ಮಹಾರಾಷ್ಟ್ರ ಮೂಲದ ಬಾಲಕ ದುರ್ಮರಣ: ಸೋಮವಾರಪೇಟೆ (ಮಡಿಕೇರಿ): ಮಹಾರಾಷ್ಟ್ರದಿಂದ ಕುಟುಂಬಸ್ಥರ ಜತೆ ಪ್ರವಾಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಬಾಲಕ ದುಬಾರೆ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಹಾರಾಷ್ಟ್ರ ಮೂಲದ ಅಮಿತ್ ಮಹಾಜನ್(17) ಸಾವನ್ನಪ್ಪಿದ ನತದೃಷ್ಟ ಬಾಲಕ. ಈತ ನಾಸಿಕ್ ಜಿಲ್ಲೆಯ ಅನಂತಪುರ ಗ್ರಾಮದವ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ದುಬಾರೆ ಬಳಿ ನದಿಯಲ್ಲಿ ಈಜಲು ಇಳಿದಾಗ ಅಮಿತ್ ಮಹಾಜನ್ ಸುಳಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಕ್ತಿಯಲ್ಲಿ ಘಟನೆ ನಡೆದಿದೆ.

Published On - 4:28 pm, Tue, 26 April 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?