AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?

ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
TV9 Web
| Edited By: |

Updated on:Apr 26, 2022 | 4:52 PM

Share

ಕಾರವಾರ: ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಜಿಂಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿದ್ದು, ಅದು ಸ್ಥಳದಲ್ಲೇ ಅಸುನೀಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ರಾಜ್ಯ ಹೆದ್ದಾರಿ-93ರ ಕಲ್ಕುಣಿ ಕ್ರಾಸ್ ಬಳಿ ಈ ಆಕಸ್ಮಿಕ ಘಟನೆ ನಡೆದಿದೆ. ಅಂದಾಜು 10 ವರ್ಷ ಪ್ರಾಯದ ಗಂಡು ಜಿಂಕೆ ಅಪಘಾತದಲ್ಲಿ ಕೊನೆಯುಸಿರೆಳೆದಿದೆ. ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸುನೀಗಿದ ಜಿಂಕೆಯನ್ನು ಶವಪರೀಕ್ಷೆಗಾಗಿ ಅರಣ್ಯ ಸಿಬ್ಬಂದಿ ಸಿದ್ಧಾಪುರದ ಅರಣ್ಯಾಧಿಕಾರಿ ಕಚೇರಿಗೆ ಕೊಂಡೊಯ್ದಿದ್ದಾರೆ.

ಹಸು ಮೇಯಿಸುವಾಗ ಮಹಿಳೆ ಮೇಲೆ ಆನೆ ದಾಳಿ: ಮೈಸೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ಮುಂದುವರಿದಿದ್ದು, ಹಾಡಿ ಮಹಿಳೆಯ ಮೇಲೆ ಆನೆಯೊಂದು ದಾಳಿ‌ ಮಾಡಿದೆ. ಕಾಡಿನಿಂದ ನಾಡಿಗೆ ಬಂದಿರುವ ಆನೆಗಳು ದಿಕ್ಕಾಪಾಲಾಗಿ ಗ್ರಾಮದಲ್ಲಿ ಓಡಾಡುತ್ತಿವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅದ್ವಾಳ ಗ್ರಾಮದ ಕೆರೆ ಬಳಿ ಹಸು ಮೇಯಿಸುತ್ತಿದ್ದಾಗ ಮಹಿಳೆಯ ಮೇಲೆ ಆನೆ ದಾಳಿ ಮಾಡಿ, ಗಾಯಗೊಳಿಸಿದೆ. ಹರಳಳ್ಳಿ ಗ್ರಾಮದ 55 ವರ್ಷ ಮಹಿಳೆ ಪುಟ್ಟಲಕ್ಷ್ಮಮ್ಮ ಗಯಗೊಂಡವರು. ಈ ಮಧ್ಯೆ, ಆನೆಯನ್ನು ಕಾಡಿಗೆ ವಾಪಸ್ಸು ಕಳುಹಿಸಲು ಅರಣ್ಯ‌ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ದುಬಾರೆ ಬಳಿ ಕಾವೇರಿ ನದಿಯಲ್ಲಿ ಸುಳಿಗೆ ಸಿಲುಕಿ ಮಹಾರಾಷ್ಟ್ರ ಮೂಲದ ಬಾಲಕ ದುರ್ಮರಣ: ಸೋಮವಾರಪೇಟೆ (ಮಡಿಕೇರಿ): ಮಹಾರಾಷ್ಟ್ರದಿಂದ ಕುಟುಂಬಸ್ಥರ ಜತೆ ಪ್ರವಾಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಬಾಲಕ ದುಬಾರೆ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಹಾರಾಷ್ಟ್ರ ಮೂಲದ ಅಮಿತ್ ಮಹಾಜನ್(17) ಸಾವನ್ನಪ್ಪಿದ ನತದೃಷ್ಟ ಬಾಲಕ. ಈತ ನಾಸಿಕ್ ಜಿಲ್ಲೆಯ ಅನಂತಪುರ ಗ್ರಾಮದವ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ದುಬಾರೆ ಬಳಿ ನದಿಯಲ್ಲಿ ಈಜಲು ಇಳಿದಾಗ ಅಮಿತ್ ಮಹಾಜನ್ ಸುಳಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಕ್ತಿಯಲ್ಲಿ ಘಟನೆ ನಡೆದಿದೆ.

Published On - 4:28 pm, Tue, 26 April 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು