AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?

ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
TV9 Web
| Edited By: ಸಾಧು ಶ್ರೀನಾಥ್​|

Updated on:Apr 26, 2022 | 4:52 PM

Share

ಕಾರವಾರ: ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಜಿಂಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿದ್ದು, ಅದು ಸ್ಥಳದಲ್ಲೇ ಅಸುನೀಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ರಾಜ್ಯ ಹೆದ್ದಾರಿ-93ರ ಕಲ್ಕುಣಿ ಕ್ರಾಸ್ ಬಳಿ ಈ ಆಕಸ್ಮಿಕ ಘಟನೆ ನಡೆದಿದೆ. ಅಂದಾಜು 10 ವರ್ಷ ಪ್ರಾಯದ ಗಂಡು ಜಿಂಕೆ ಅಪಘಾತದಲ್ಲಿ ಕೊನೆಯುಸಿರೆಳೆದಿದೆ. ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸುನೀಗಿದ ಜಿಂಕೆಯನ್ನು ಶವಪರೀಕ್ಷೆಗಾಗಿ ಅರಣ್ಯ ಸಿಬ್ಬಂದಿ ಸಿದ್ಧಾಪುರದ ಅರಣ್ಯಾಧಿಕಾರಿ ಕಚೇರಿಗೆ ಕೊಂಡೊಯ್ದಿದ್ದಾರೆ.

ಹಸು ಮೇಯಿಸುವಾಗ ಮಹಿಳೆ ಮೇಲೆ ಆನೆ ದಾಳಿ: ಮೈಸೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ಮುಂದುವರಿದಿದ್ದು, ಹಾಡಿ ಮಹಿಳೆಯ ಮೇಲೆ ಆನೆಯೊಂದು ದಾಳಿ‌ ಮಾಡಿದೆ. ಕಾಡಿನಿಂದ ನಾಡಿಗೆ ಬಂದಿರುವ ಆನೆಗಳು ದಿಕ್ಕಾಪಾಲಾಗಿ ಗ್ರಾಮದಲ್ಲಿ ಓಡಾಡುತ್ತಿವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅದ್ವಾಳ ಗ್ರಾಮದ ಕೆರೆ ಬಳಿ ಹಸು ಮೇಯಿಸುತ್ತಿದ್ದಾಗ ಮಹಿಳೆಯ ಮೇಲೆ ಆನೆ ದಾಳಿ ಮಾಡಿ, ಗಾಯಗೊಳಿಸಿದೆ. ಹರಳಳ್ಳಿ ಗ್ರಾಮದ 55 ವರ್ಷ ಮಹಿಳೆ ಪುಟ್ಟಲಕ್ಷ್ಮಮ್ಮ ಗಯಗೊಂಡವರು. ಈ ಮಧ್ಯೆ, ಆನೆಯನ್ನು ಕಾಡಿಗೆ ವಾಪಸ್ಸು ಕಳುಹಿಸಲು ಅರಣ್ಯ‌ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ದುಬಾರೆ ಬಳಿ ಕಾವೇರಿ ನದಿಯಲ್ಲಿ ಸುಳಿಗೆ ಸಿಲುಕಿ ಮಹಾರಾಷ್ಟ್ರ ಮೂಲದ ಬಾಲಕ ದುರ್ಮರಣ: ಸೋಮವಾರಪೇಟೆ (ಮಡಿಕೇರಿ): ಮಹಾರಾಷ್ಟ್ರದಿಂದ ಕುಟುಂಬಸ್ಥರ ಜತೆ ಪ್ರವಾಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಬಾಲಕ ದುಬಾರೆ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಹಾರಾಷ್ಟ್ರ ಮೂಲದ ಅಮಿತ್ ಮಹಾಜನ್(17) ಸಾವನ್ನಪ್ಪಿದ ನತದೃಷ್ಟ ಬಾಲಕ. ಈತ ನಾಸಿಕ್ ಜಿಲ್ಲೆಯ ಅನಂತಪುರ ಗ್ರಾಮದವ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ದುಬಾರೆ ಬಳಿ ನದಿಯಲ್ಲಿ ಈಜಲು ಇಳಿದಾಗ ಅಮಿತ್ ಮಹಾಜನ್ ಸುಳಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಕ್ತಿಯಲ್ಲಿ ಘಟನೆ ನಡೆದಿದೆ.

Published On - 4:28 pm, Tue, 26 April 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?