AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?

ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ.

Car- Deer Accident: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಜಿಂಕೆ, ಮುಂದೇನಾಯ್ತು?
TV9 Web
| Edited By: |

Updated on:Apr 26, 2022 | 4:52 PM

Share

ಕಾರವಾರ: ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಜಿಂಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿದ್ದು, ಅದು ಸ್ಥಳದಲ್ಲೇ ಅಸುನೀಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ರಾಜ್ಯ ಹೆದ್ದಾರಿ-93ರ ಕಲ್ಕುಣಿ ಕ್ರಾಸ್ ಬಳಿ ಈ ಆಕಸ್ಮಿಕ ಘಟನೆ ನಡೆದಿದೆ. ಅಂದಾಜು 10 ವರ್ಷ ಪ್ರಾಯದ ಗಂಡು ಜಿಂಕೆ ಅಪಘಾತದಲ್ಲಿ ಕೊನೆಯುಸಿರೆಳೆದಿದೆ. ಟಾಟಾ ಕಂಪನಿಯ ಕಾರು ಕಲ್ಕುಣಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಜಿಂಕೆ ಏಕಾಏಕಿ ರಸ್ತೆಯಲ್ಲಿ ಅಡ್ಡಬಂದಿದೆ. ಕಾರಿಗೆ ಡಿಕ್ಕಿ ಹೊಡೆದು, ಜಿಂಕೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಹೆಚ್ಚು ಡ್ಯಾಮೇಜ್ ಆಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸುನೀಗಿದ ಜಿಂಕೆಯನ್ನು ಶವಪರೀಕ್ಷೆಗಾಗಿ ಅರಣ್ಯ ಸಿಬ್ಬಂದಿ ಸಿದ್ಧಾಪುರದ ಅರಣ್ಯಾಧಿಕಾರಿ ಕಚೇರಿಗೆ ಕೊಂಡೊಯ್ದಿದ್ದಾರೆ.

ಹಸು ಮೇಯಿಸುವಾಗ ಮಹಿಳೆ ಮೇಲೆ ಆನೆ ದಾಳಿ: ಮೈಸೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ಮುಂದುವರಿದಿದ್ದು, ಹಾಡಿ ಮಹಿಳೆಯ ಮೇಲೆ ಆನೆಯೊಂದು ದಾಳಿ‌ ಮಾಡಿದೆ. ಕಾಡಿನಿಂದ ನಾಡಿಗೆ ಬಂದಿರುವ ಆನೆಗಳು ದಿಕ್ಕಾಪಾಲಾಗಿ ಗ್ರಾಮದಲ್ಲಿ ಓಡಾಡುತ್ತಿವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅದ್ವಾಳ ಗ್ರಾಮದ ಕೆರೆ ಬಳಿ ಹಸು ಮೇಯಿಸುತ್ತಿದ್ದಾಗ ಮಹಿಳೆಯ ಮೇಲೆ ಆನೆ ದಾಳಿ ಮಾಡಿ, ಗಾಯಗೊಳಿಸಿದೆ. ಹರಳಳ್ಳಿ ಗ್ರಾಮದ 55 ವರ್ಷ ಮಹಿಳೆ ಪುಟ್ಟಲಕ್ಷ್ಮಮ್ಮ ಗಯಗೊಂಡವರು. ಈ ಮಧ್ಯೆ, ಆನೆಯನ್ನು ಕಾಡಿಗೆ ವಾಪಸ್ಸು ಕಳುಹಿಸಲು ಅರಣ್ಯ‌ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ದುಬಾರೆ ಬಳಿ ಕಾವೇರಿ ನದಿಯಲ್ಲಿ ಸುಳಿಗೆ ಸಿಲುಕಿ ಮಹಾರಾಷ್ಟ್ರ ಮೂಲದ ಬಾಲಕ ದುರ್ಮರಣ: ಸೋಮವಾರಪೇಟೆ (ಮಡಿಕೇರಿ): ಮಹಾರಾಷ್ಟ್ರದಿಂದ ಕುಟುಂಬಸ್ಥರ ಜತೆ ಪ್ರವಾಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಬಾಲಕ ದುಬಾರೆ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಹಾರಾಷ್ಟ್ರ ಮೂಲದ ಅಮಿತ್ ಮಹಾಜನ್(17) ಸಾವನ್ನಪ್ಪಿದ ನತದೃಷ್ಟ ಬಾಲಕ. ಈತ ನಾಸಿಕ್ ಜಿಲ್ಲೆಯ ಅನಂತಪುರ ಗ್ರಾಮದವ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ದುಬಾರೆ ಬಳಿ ನದಿಯಲ್ಲಿ ಈಜಲು ಇಳಿದಾಗ ಅಮಿತ್ ಮಹಾಜನ್ ಸುಳಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಕ್ತಿಯಲ್ಲಿ ಘಟನೆ ನಡೆದಿದೆ.

Published On - 4:28 pm, Tue, 26 April 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ