AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಡಗೋಡ: ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆ

ಜಿಲ್ಲೆಯ ಮಂಡಗೋಡ ಪಟ್ಟಣದ ಹುಬ್ಬಳ್ಳಿ ಮಾರ್ಗದ ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆಯಾಗಿದ್ದು, ನಾಯಿಗಳು ಬಹುತೇಕ ಭಾಗವನ್ನ ತಿಂದಿವೆ.

ಮುಂಡಗೋಡ: ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆ
ಮಗುವಿನ ಕಳೆಬರಹ ಪತ್ತೆ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 21, 2023 | 2:27 PM

Share

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡದ ಹುಬ್ಬಳ್ಳಿ ಮಾರ್ಗದ ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆಯಾಗಿದೆ. ಶಿಶುವಿನ ಕಳೆಬರಹ ಕಂಡು ನೆರೆದಿದ್ದ ಜನ ಮರುಗಿದ್ದಾರೆ. ರಟ್ಟಿನ ಬಾಕ್ಸ್​ನಲ್ಲಿ ಪತ್ತೆಯಾದ ಈ ಕಳೆಬರಹವನ್ನ ಬೀದಿ ನಾಯಿಗಳು ಎಳೆದು ತಂದು ರಸ್ತೆಯ ಮೇಲೆ ಹಾಕಿದ್ದು, ಶಿಶುವಿನ ದೇಹದ ಬಹುತೇಕ ಭಾಗವನ್ನ ತಿಂದು ಹಾಕಿವೆ. ಗಂಡು ಶಿಶುವಿನ ಕಳೆಬರಹ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಈ ಕುರಿತು ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಇಂತಹ ಘಟನೆ ಇದೇ ಮೊದಲಲ್ಲ ಈ ಘಟನೆಯು ಸೇರಿ ತಿಂಗಳಿನಲ್ಲಿ ಎರಡನೇ ಘಟನೆ ಇದಾಗಿದೆ. ಶುಕ್ರವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ರಾಮಪಟ್ಟಣ ಸರ್ಕಲ್​ರಸ್ತೆಯ ಪುಟ್ ಪಾತ್ ಮೇಲೆ ಆಗತಾನೆ ಹೆರಿಗೆ ಆಗಿರುವ ನವಜಾತ ಶಿಶುವಿನ ಕಳೆ ಬರಹ ಪತ್ತೆಯಾಗಿತ್ತು. ಶುಕ್ರವಾರ ಬೆಳಿಗ್ಗೆ ಗುಡಿಬಂಡೆ ಪಟ್ಟಣ ಪಂಚಾಯತಿ ಪೌರ ಕಾರ್ಮಿಕರು ಪಟ್ಟಣದಲ್ಲಿ ಕಸ ಗುಡಿಸಲು ಹೋದಾಗ ಶಿಶುವಿನ ಕಳೆ ಬರಹ ಪತ್ತೆಯಾಗಿದೆ. ಮೊದಲು ಕೋತಿ ಸತ್ತಿರಬಹುದು ಎಂದು ಕೊಂಡಿದ್ದರು. ನಂತರ ನೋಡಿದಾಗ ಅದು ನವಜಾತ ಹೆಣ್ಣು ಶಿಶು ಎಂದು ತಿಳಿದುಬಂದಿತ್ತು.

ಇದನ್ನೂ ಓದಿ:ವಿಜಯಪುರ: ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ ಎಂಬ ಕಾರಣಕ್ಕೆ ಸಂಬಂಧಿಯನ್ನೇ ಕೊಲೆ ಮಾಡಿದ ಗಂಡ

ನವಜಾತ ಹೆಣ್ಣುಮಗುವನ್ನು ಕಂಡ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಗುಡಿಬಂಡೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು, ತಕ್ಷಣ ಸ್ಥಳಕ್ಕೆ ಬಂದ ಅಧಿಕಾರಿಗಳು ನವಜಾತ ಹೆಣ್ಣು ಶಿಶು ಪರಿಶೀಲನೆ ನಡೆಸಿದರು. ಆದರೆ ಶಿಶು ಸ್ಥಳದಲ್ಲಿ ಮೃತಪಟ್ಟಿದ್ದು, ಸ್ಥಳದಲ್ಲಿ ಹೆರಿಗೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್