AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಡಗೋಡ: ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆ

ಜಿಲ್ಲೆಯ ಮಂಡಗೋಡ ಪಟ್ಟಣದ ಹುಬ್ಬಳ್ಳಿ ಮಾರ್ಗದ ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆಯಾಗಿದ್ದು, ನಾಯಿಗಳು ಬಹುತೇಕ ಭಾಗವನ್ನ ತಿಂದಿವೆ.

ಮುಂಡಗೋಡ: ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆ
ಮಗುವಿನ ಕಳೆಬರಹ ಪತ್ತೆ
TV9 Web
| Edited By: |

Updated on: Jan 21, 2023 | 2:27 PM

Share

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡದ ಹುಬ್ಬಳ್ಳಿ ಮಾರ್ಗದ ರಸ್ತೆಯ ಮೇಲೆ ನವಜಾತ ಶಿಶುವಿನ ಕಳೆಬರಹ ಪತ್ತೆಯಾಗಿದೆ. ಶಿಶುವಿನ ಕಳೆಬರಹ ಕಂಡು ನೆರೆದಿದ್ದ ಜನ ಮರುಗಿದ್ದಾರೆ. ರಟ್ಟಿನ ಬಾಕ್ಸ್​ನಲ್ಲಿ ಪತ್ತೆಯಾದ ಈ ಕಳೆಬರಹವನ್ನ ಬೀದಿ ನಾಯಿಗಳು ಎಳೆದು ತಂದು ರಸ್ತೆಯ ಮೇಲೆ ಹಾಕಿದ್ದು, ಶಿಶುವಿನ ದೇಹದ ಬಹುತೇಕ ಭಾಗವನ್ನ ತಿಂದು ಹಾಕಿವೆ. ಗಂಡು ಶಿಶುವಿನ ಕಳೆಬರಹ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಈ ಕುರಿತು ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಇಂತಹ ಘಟನೆ ಇದೇ ಮೊದಲಲ್ಲ ಈ ಘಟನೆಯು ಸೇರಿ ತಿಂಗಳಿನಲ್ಲಿ ಎರಡನೇ ಘಟನೆ ಇದಾಗಿದೆ. ಶುಕ್ರವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ರಾಮಪಟ್ಟಣ ಸರ್ಕಲ್​ರಸ್ತೆಯ ಪುಟ್ ಪಾತ್ ಮೇಲೆ ಆಗತಾನೆ ಹೆರಿಗೆ ಆಗಿರುವ ನವಜಾತ ಶಿಶುವಿನ ಕಳೆ ಬರಹ ಪತ್ತೆಯಾಗಿತ್ತು. ಶುಕ್ರವಾರ ಬೆಳಿಗ್ಗೆ ಗುಡಿಬಂಡೆ ಪಟ್ಟಣ ಪಂಚಾಯತಿ ಪೌರ ಕಾರ್ಮಿಕರು ಪಟ್ಟಣದಲ್ಲಿ ಕಸ ಗುಡಿಸಲು ಹೋದಾಗ ಶಿಶುವಿನ ಕಳೆ ಬರಹ ಪತ್ತೆಯಾಗಿದೆ. ಮೊದಲು ಕೋತಿ ಸತ್ತಿರಬಹುದು ಎಂದು ಕೊಂಡಿದ್ದರು. ನಂತರ ನೋಡಿದಾಗ ಅದು ನವಜಾತ ಹೆಣ್ಣು ಶಿಶು ಎಂದು ತಿಳಿದುಬಂದಿತ್ತು.

ಇದನ್ನೂ ಓದಿ:ವಿಜಯಪುರ: ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ ಎಂಬ ಕಾರಣಕ್ಕೆ ಸಂಬಂಧಿಯನ್ನೇ ಕೊಲೆ ಮಾಡಿದ ಗಂಡ

ನವಜಾತ ಹೆಣ್ಣುಮಗುವನ್ನು ಕಂಡ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಗುಡಿಬಂಡೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು, ತಕ್ಷಣ ಸ್ಥಳಕ್ಕೆ ಬಂದ ಅಧಿಕಾರಿಗಳು ನವಜಾತ ಹೆಣ್ಣು ಶಿಶು ಪರಿಶೀಲನೆ ನಡೆಸಿದರು. ಆದರೆ ಶಿಶು ಸ್ಥಳದಲ್ಲಿ ಮೃತಪಟ್ಟಿದ್ದು, ಸ್ಥಳದಲ್ಲಿ ಹೆರಿಗೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?