AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ಯುವಕನ ಕೊಲೆ; ಠಾಣೆ ಮುಂದೆ ಶವ ಇಟ್ಟು ಸಿದ್ಧಿ ಸಮುದಾಯದಿಂದ ಪ್ರತಿಭಟನೆ

ಬೈಕ್ ಓವರ್ ಟೇಕ್ ವಿಷಯದಲ್ಲಿ ಆರು ಮಂದಿ ಇದ್ದ ತಂಡವೊಂದು ಯುವಕನೊಬ್ಬನ್ನ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಯಿಂದ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದನು. ಈ ಘಟನೆ ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದಿತ್ತು. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅತ್ಯಾಪ್ತರೊಬ್ಬರ ಪುತ್ರನ ವಿರುದ್ಧ ಈ ಕೊಲೆ ಆರೋಪ ಕೇಳಿಬಂದಿದೆ.

ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ಯುವಕನ ಕೊಲೆ; ಠಾಣೆ ಮುಂದೆ ಶವ ಇಟ್ಟು ಸಿದ್ಧಿ ಸಮುದಾಯದಿಂದ ಪ್ರತಿಭಟನೆ
ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ಯುವಕನ ಕೊಲೆ; ಠಾಣೆ ಮುಂದೆ ಶವ ಇಟ್ಟು ಸಿದ್ಧಿ ಸಮುದಾಯದಿಂದ ಪ್ರತಿಭಟನೆ
ಸೂರಜ್​, ಮಹಾವೀರ್​ ಉತ್ತುರೆ
| Edited By: Rakesh Nayak Manchi|

Updated on: Feb 26, 2024 | 2:54 PM

Share

ಕಾರವಾರ, ಫೆ.26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (Yellapur) ತಾಲೂಕಿನ ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದ ಪ್ರಜ್ವಲ್ ಎಂಬ ಯುವಕನ ಕೊಲೆ (Murder) ಪ್ರಕರಣದ ಸಂಬಂಧ ಯಲ್ಲಾಪುರ ಠಾಣೆ ಮುಂದೆ ಶವ ಇಟ್ಟು ಸಿದ್ಧಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ಅಲ್ಲದೆ, ಬಿಜೆಪಿ (BJP) ಮುಖಂಡರೊಬ್ಬರ ಪುತ್ರನ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಅತ್ಯಾಪ್ತರಾಗಿರುವ ವಿಜಯ ಮಿರಾಸಿ ಪುತ್ರ ಅನಿಕೇತ್ ಮಿರಾಸಿ ವಿರುದ್ಧ ಕೊಲೆ ಆರೋಪ ಮಾಡಲಾಗಿದ್ದು, ಪ್ರಮುಖ ಆರೋಪಿ ಅನಿಕೇತ ಬಂಧಿಸುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ಧಾರವಾಡ: ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ

ಪ್ರಕರಣದಲ್ಲಿ ಎಂಟು ಮಂದಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ಪೈಕಿ ಏಳು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅನಿಕೇತನನ್ನು ಬಂಧಿಸಿಲ್ಲ ಎಂದು ಆರೋಪಿಸಲಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದು ಆರೋಪಿ ಅನಿಕೇತನನ್ನು ಬಂಧಿಸಿಲ್ಲ ಎಂದು ಠಾಣೆ ಮುಂದೆ ಸಿದ್ಧಿ ಸಮುದಾಯದ ಮುಖಂಡರು ಆರೋಪಿಸಿದ್ದು, ಅನಿಕೇತ ಬಂಧನ ಆಗುವವರೆಗೂ ಮೃತ ದೇಹ ತೆಗೆದುಕೊಳ್ಳಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಶನಿವಾರ ರಾತ್ರಿ ಹುಣಶೆಟ್ಟಿಕೊಪ್ಪ ಜಾತ್ರೆಗೆ ಬಂದಿದ್ದ ಸಿದ್ಧಿ ಸಮುದಾಯದ ಯುವಕ ಪ್ರಜ್ವಲ್​​, ಅನಿಕೇತ್ ಮಿರಾಸಿ ಕಾರನ್ನು ಓವರ್​ಟೇಕ್ ಮಾಡಿದ್ದನು. ಈ ವಿಚಾರವಾಗಿ ತಂಡವೊಂದು ಪ್ರಜ್ವಲ್ ಮೇಲೆ ಮಾರಣಾಂತಿವಾಗಿ ಹಲ್ಲೆ ನಡೆಸಿತ್ತು. ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಮೃತಪಟ್ಟಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ?
NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ?
ಸಿಇಟಿ 2026: ಸೀಟ್​​ ಹಂಚಿಕೆ ಹೇಗೆ ನಡೆಯುತ್ತೆ? 
ಸಿಇಟಿ 2026: ಸೀಟ್​​ ಹಂಚಿಕೆ ಹೇಗೆ ನಡೆಯುತ್ತೆ? 
ಎಸ್​ಸಿ ಒಳ ಮೀಸಲಾತಿ ಗೊಂದಲ ಬಗ್ಗೆ KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು?
ಎಸ್​ಸಿ ಒಳ ಮೀಸಲಾತಿ ಗೊಂದಲ ಬಗ್ಗೆ KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ಬಾಮೈದನ ಸ್ನೇಹಿತೆಯ ನಿವಾಸದಲ್ಲೂ ಇಡಿ ಪರಿಶೀಲನೆ
ಸತೀಶ್ ಜಾರಕಿಹೊಳಿ ಬಾಮೈದನ ಸ್ನೇಹಿತೆಯ ನಿವಾಸದಲ್ಲೂ ಇಡಿ ಪರಿಶೀಲನೆ