AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್

ಹೊಸ ವರ್ಷಾಚರಣೆಗೆ ಮುರ್ಡೇಶ್ವರ ಕಡಲ ತೀರ ಓಪನ್ ಇರಲಿದೆ. ನಾಳೆ ಪ್ರವಾಸಿಗರಿಗೆ ಮುರ್ಡೇಶ್ವರ ಕಡಲ ತೀರ ಓಪನ್ ಇರಲಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ. ಈ ಮೊದಲು ನಾಲ್ವರು ಯುವತಿಯರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮುರುಡೇಶ್ವರ ಬೀಚ್​ನ ಕಡಲ ತೀರದಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ, ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್
Murudeshwar Beach
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Dec 30, 2024 | 6:28 PM

Share

ಮುರುಡೇಶ್ವರ: ನಾಳೆ (ಡಿಸೆಂಬರ್ 31) ರಾತ್ರಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಬೀಚ್​​ನ ಕಡಲ ತೀರ ಓಪನ್ ಇರುತ್ತದೆ. ಮುರುಡೇಶ್ವರ ಸಮುದ್ರತೀರದಲ್ಲಿ ಹೊಸ ವರ್ಷದ ಸಂಭ್ರಮವನ್ನು ಆಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ. ಈ ಬಗ್ಗೆ ಕಾರವಾರದಲ್ಲಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಕಡಿಮೆ ಸ್ಥಳದಲ್ಲಿ ನಾವು ಸ್ವಿಮ್ಮಿಂಗ್​​ ಜೋನ್​ ಮಾಡಿದ್ದೇವೆ. ನಾಳೆಯಿಂದ ಎಷ್ಟು ಜನ ಬರುತ್ತಾರೆಂದು ನೋಡಿ ಸ್ವಿಮ್ಮಿಂಗ್ ಜೋನ್ ವಿಸ್ತರಣೆ ಮಾಡುತ್ತೇವೆ ಎಂದಿದ್ದಾರೆ.

ಮಂಗಳವಾರದಿಂದ ಮುರುಡೇಶ್ವರದಲ್ಲಿ ಸ್ವಿಮ್ಮಿಂಗ್​​ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಗೆ ಬರುವಂಥ ಪ್ರವಾಸಿಗರ ರಕ್ಷಣೆಯೇ ನಮ್ಮ ಆದ್ಯತೆ. ಸದ್ಯಕ್ಕೆ ಕಡಲ ತೀರದಲ್ಲಿ ಸುರಕ್ಷತೆ ಕ್ರಮ ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ತಿಳಿಸಲಾಗಿದೆ ಎಂದು ಕಾರವಾರದಲ್ಲಿ ಉತ್ತರ ಕನ್ನಡ ಡಿಸಿ ಲಕ್ಷ್ಮೀ ಪ್ರಿಯಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧವಿತ್ತು. ಕಳೆದ 20 ದಿನಗಳಿಂದ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಈ ಹಿಂದೆ ನಾಲ್ವರು ವಿದ್ಯಾರ್ಥಿನಿಯರ ಸಾವು ಉಂಟಾದ ಹಿನ್ನೆಲೆಯಲ್ಲಿ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ, ಇದೀಗ ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿ: ನಾಲ್ವರು ವಿದ್ಯಾರ್ಥಿಗಳ ಸಾವು ಬೆನ್ನಲ್ಲೇ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ನಾಲ್ವರು ವಿದ್ಯಾರ್ಥಿನಿಯರ ಸಾವಿನ ಬಳಿಕ ಸುರಕ್ಷತೆ ಕೈಗೊಳ್ಳಲು ತಿರ್ಮಾನಿಸಲಾಗಿತ್ತು. ಹಾಗಾಗಿ ಕಳೆದ 20 ದಿನಗಳಿಂದ ಮುರ್ಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಇತ್ತು. ಸದ್ಯಕ್ಕೆ ನಾವು ಕಡಲ ತೀರದಲ್ಲಿ ಸುರಕ್ಷತೆ ಕ್ರಮ ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ತಿಳಿಸಲಾಗಿದೆ. ನಾಳೆ ಪೊಲೀಸ್ ಭದ್ರತೆ ಒದಗಿಸಿದರೆ ನಾಳೆಯೇ ಕಡಲ ತೀರ ಓಪನ್ ಮಾಡಲಾಗುವುದು. ಸದ್ಯಕ್ಕೆ ನಮ್ಮ ಬಳಿ ಇದ್ದ ಸಾಧನಗಳನ್ನ ಬಳಸಿ ಕಡಿಮೆ ಸ್ಥಳದಲ್ಲಿ ಸ್ವಿಮಿಂಗ್ ಝೋನ್ ಮಾಡಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ