AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghatiana Dvivarna: ಯಲ್ಲಾಪುರದ ಅರಣ್ಯವಲಯದಲ್ಲಿ ಹೊಸ ಪ್ರಬೇಧದ ಏಡಿ ಪತ್ತೆ

ಘಟಿಯಾನ ದ್ವಿವರ್ಣ ಪ್ರಭೇದದ ಏಡಿ: ಅತೀ ಸುಂದರವಾಗಿರುವ ಈ ಏಡಿ ನೋಡಲು ಗುಂಡನೇ ಕಪ್ಪು ಕಣ್ಣು, ಬಿಳಿ ಬಣ್ಣದ ಕೊಕ್ಕೆ, ನೇರಳೆ ಬಣ್ಣದ ನೀಳ ಕಾಲುಗಳನ್ನು ಹೊಂದಿರುವ ಅಪರೂಪದ ಏಡಿಯಾಗಿದೆ.

Ghatiana Dvivarna: ಯಲ್ಲಾಪುರದ ಅರಣ್ಯವಲಯದಲ್ಲಿ ಹೊಸ ಪ್ರಬೇಧದ ಏಡಿ ಪತ್ತೆ
ಘಟಿಯಾನ ದ್ವಿವರ್ಣ ಪ್ರಭೇದದ ಏಡಿ
TV9 Web
| Edited By: |

Updated on: Aug 17, 2022 | 10:31 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಣ್ಯವಲಯದಲ್ಲಿ ಹೊಸ ಪ್ರಬೇಧದ ಸಿಹಿ ನೀರಿನ ಏಡಿ ಪತ್ತೆಯಾಗಿದೆ. ಬಿಳಿ ಮೈ ಬಣ್ಣ ಮತ್ತು ನೇರಳೆ ಬಣ್ಣದ ಕಾಲುಗಳನ್ನ ಹೊಂದಿರುವ ಈ ಏಡಿಯನ್ನು ಘಾಟಿಯಾನ ದ್ವೀವರಣ(Ghatiana Dvivarna) ಎಂದು ಸೈಂಟಿಫಿಕ್ ಹೆಸರು ನಾಮಕರಣ ಮಾಡಲಾಗಿದೆ.

ಅತೀ ಸುಂದರವಾಗಿರುವ ಈ ಏಡಿ ನೋಡಲು ಗುಂಡನೇ ಕಪ್ಪು ಕಣ್ಣು, ಬಿಳಿ ಬಣ್ಣದ ಕೊಕ್ಕೆ, ನೇರಳೆ ಬಣ್ಣದ ನೀಳ ಕಾಲುಗಳನ್ನು ಹೊಂದಿರುವ ಅಪರೂಪದ ಏಡಿಯಾಗಿದೆ. ಹೊಸ ಪ್ರಬೇಧದ ಏಡಿ ಕಂಡು ಅರಣ್ಯ ಅಧಿಕಾರಿಗಳು ತಮ್ಮ ಕ್ಯಾಮಾರದಲ್ಲಿ ಏಡಿಯ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ, ನಿಸರ್ಗ ತಜ್ಞರಾದ ಗೋಪಾಲಕೃಷ್ಣ ಹೆಗಡೆ, ಸಮೀರಕುಮಾರ ಪಾಟಿ ಮತ್ತು ತೇಜಸ್ ಥಾಕರೆ ತಂಡದವರು ಈ ಘಟಿಯಾನ ಪ್ರಭೇದದ ಹೊಸ ಜಾತಿಯ ಸಿಹಿ ನೀರಿನ ಏಡಿಯನ್ನು ಪತ್ತೆ ಹಚ್ಚಿದ್ದಾರೆ.

ವಿಜ್ಞಾನಿಗಳ ಅಧ್ಯಯನದ ಪ್ರಕಾರ ವಿಶ್ವದಲ್ಲಿ ಇದುವರೆಗೂ 4000 ಜಾತಿಯ ಏಡಿಗಳಿವೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿಯೇ 125 ವಿವಿಧ ಜಾತಿಯ ಏಡಿಗಳನ್ನು ಗುರುತಿಸಲಾಗಿದೆ. ಘಟಿಯಾನ ಪ್ರಭೇದದಲ್ಲಿ ಇಲ್ಲಿಯವರೆಗೆ 13 ವಿವಿಧ ಜಾತಿಯ ಸಿಹಿ ನೀರಿನ ಏಡಿಗಳನ್ನು ಗುರುತಿಸಲಾಗಿದ್ದು, ಘಟಿಯಾನ ದ್ವಿವರ್ಣ 14ನೇ ಸಿಹಿ ನೀರಿನ ಏಡಿಯಾಗಿದೆ. ವಿಶ್ವದಲ್ಲಿಯೇ ಜೀವವೈವಿಧ್ಯದ ಹಾಟ್ ಸ್ಪಾಟ್ ಎಂಬ ಖ್ಯಾತಿ ಹೊಂದಿರುವ ಭಾರತದ ಪಶ್ಚಿಮ ಘಟ್ಟಗಳಲ್ಲಿ ಒಟ್ಟು 74 ವಿವಿಧ ಜಾತಿಯ ಏಡಿಗಳನ್ನು ಗುರುತಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಪಶ್ಚಿಮ ಘಟ್ಟದ ಪ್ರದೇಶದಲ್ಲಿ 75ನೇ ಏಡಿ ಪತ್ತೆ ಹಚ್ಚಿರುವುದು ವಿಶೇಷ ಸಂಗತಿಯಾಗಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್