AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಐಸಿಸ್ ನಂಟಿದ್ದ ವ್ಯಕ್ತಿ ವಶಕ್ಕೆ: ನೇಮಕಾತಿಗೆ ಸಹಕರಿಸುತ್ತಿದ್ದ ಆರೋಪ

ಭಟ್ಕಳದಲ್ಲಿ ಐಸಿಸ್ ಉಗ್ರರೊಂದಿಗೆ ನಂಟು ಹೊಂದಿದ್ದ ಎಂಬ ಆರೋಪ ಹೊತ್ತಿರುವ ಜಫ್ರಿ ಜಹ್ವಾರ್​ ದಾಮುದಿ ಎಂಬಾತನನ್ನು ಬಂಧಿಸಿದ್ದಾರೆ.

ಭಟ್ಕಳದಲ್ಲಿ ಐಸಿಸ್ ನಂಟಿದ್ದ ವ್ಯಕ್ತಿ ವಶಕ್ಕೆ: ನೇಮಕಾತಿಗೆ ಸಹಕರಿಸುತ್ತಿದ್ದ ಆರೋಪ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 06, 2021 | 7:59 PM

Share

ಕಾರವಾರ: ರಾಷ್ಟ್ರೀಯ ತನಿಖಾ ದಳ (National Investigating Agency – NIA) ಮತ್ತು ಕರ್ನಾಟಕ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಐಸಿಸ್ ಉಗ್ರರೊಂದಿಗೆ ನಂಟು ಹೊಂದಿದ್ದ ಎಂಬ ಆರೋಪ ಹೊತ್ತಿರುವ ಜಫ್ರಿ ಜಹ್ವಾರ್​ ದಾಮುದಿ ಎಂಬಾತನನ್ನು ಬಂಧಿಸಿದ್ದಾರೆ.

ಐಸಿಸ್ ಸಂಘಟನೆಗೆ ಭಾರತದಿಂದ ಯುವಕರು ಸೇರಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಈತನ ಮೇಲಿದೆ. ಈತ ಅಬು ಹಾಜಿರ್ ಅಲ್ ಬದ್ರಿ ಎಂಬ ಹೆಸರಿನ ಪ್ರತ್ಯೇಕ ಸೈಬರ್ ಘಟಕದ ಮೂಲಕ ಐಸಿಸ್ ವಿಚಾರಧಾರೆಗಳನ್ನು ದಕ್ಷಿಣ ಭಾರತದ ವಿವಿಧ ಭಾಷೆಗಳಿಗೆ ಭಾಷಾಂತರಿಸುತ್ತಿದ್ದ. ಎನ್​ಕ್ರಿಪ್ಟೆಡ್​ ಚಾಟಿಂಗ್ ಸಿಸ್ಟಂಗಳಲ್ಲಿ‌ ಸಕ್ರಿಯನಾಗಿದ್ದ ಎಂದು ಹೇಳಲಾಗಿದೆ. ದಾಳಿ ವೇಳೆ ಮೊಬೈಲ್, ಹಾರ್ಡ್​ಡಿಸ್ಕ್ ಹಾಗೂ ಎಸ್​ಡಿ ಕಾರ್ಡುಗಳನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಭಟ್ಕಳದಲ್ಲಿ ಎನ್​ಐಎ ದಾಳಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಶುಕ್ರವಾರ ದಾಳಿ ನಡೆಸಿ, ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.

ವಿವಿಧೆಡೆ ಕಾರ್ಯಾಚರಣೆ ದೇಶದ ವಿವಿಧೆಡೆ ಇತ್ತೀಚೆಗೆ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ಭದ್ರತಾ ಸಿಬ್ಬಂದಿ ಹಲವು ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿಯೂ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್, ಮಂಗಳೂರಿನ ಅಮರ್ ಅಬ್ದುಲ್ ರೆಹಮಾನ್ ಬಂಧಿತರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿದೆ.

(NIA takes custody a person who allegedly had links with ISIS)

ಇದನ್ನೂ ಓದಿ: ಭಟ್ಕಳದಲ್ಲಿ ಎನ್​ಐಎ ದಾಳಿ: ಐಸಿಸ್ ನಂಟು ಶಂಕೆಯ ಮೇಲೆ ಮೂವರು ವಶಕ್ಕೆ

ಇದನ್ನೂ ಓದಿ: Bajrang Dal: ಕರಾವಳಿಯಲ್ಲಿ ಶಾಶ್ವತ ಎನ್​ಐಎ ಕಚೇರಿ ಸ್ಥಾಪಿಸುವಂತೆ ಭಜರಂಗದಳ ಆಗ್ರಹ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!