AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ನಿರ್ಲಕ್ಷ್ಯ: ಅಭಿವೃದ್ಧಿಯಾಗದ ತೀಳಮಾತಿ ಕಡಲ ತೂಗು ಸೇತುವೆ!

ಕಾರವಾರ: ಕಡಲತೀರಕ್ಕೆ ಬಂದು ಅಪ್ಪಳಿಸುತ್ತಿರುವ ಅಲೆಗಳು. ಅಲೆಗಳ ಜೊತೆ ಕಡಲತೀರದ ಅಂದ ಹೆಚ್ಚಿಸಿರುವ ಕಪ್ಪು ಮರಳಿನ ರಾಶಿ. ಕಣ್ಣು ಹಾಯಿಸಿದ ಕಡೆಯೆಲ್ಲಾ ಕಾಣ್ತಿರುವ ಕಪ್ಪು ಮರಳಿಗೆ ಮತ್ತಷ್ಟು ರಂಗು ನೀಡುತ್ತಿರುವ ಕಪ್ಪು ಕಲ್ಲುಗಳು. ಅಬ್ಬಬ್ಬಾ ಈ ದೃಶ್ಯವನ್ನ ನೋಡೋಕೆ ಎಷ್ಟು ಸೊಗಸಾಗಿದೆ ಅಲ್ವಾ. ನಾವು ಸಮುದ್ರದ ದಡದಲ್ಲಿ ಬಿಳಿ ಮರಳನ್ನು ನೋಡಿರ್ತೀವಿ. ಆದ್ರೆ, ವಿಶೇಷವಾಗಿರುವ ಕಪ್ಪು ಮರಳಿನ ರಾಶಿ ತೀಳಮಾತಿ ಕಡಲತೀರದಲ್ಲಿ ಕಾಣಸಿಗುತ್ತೆ. ಈ ತೀಳಮಾತಿ ಕಡಲತೀರ ಇರೋದು ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋವಾ ಗಡಿ […]

ಅಧಿಕಾರಿಗಳ ನಿರ್ಲಕ್ಷ್ಯ: ಅಭಿವೃದ್ಧಿಯಾಗದ ತೀಳಮಾತಿ ಕಡಲ ತೂಗು ಸೇತುವೆ!
ಸಾಧು ಶ್ರೀನಾಥ್​
|

Updated on: Mar 01, 2020 | 6:41 PM

Share

ಕಾರವಾರ: ಕಡಲತೀರಕ್ಕೆ ಬಂದು ಅಪ್ಪಳಿಸುತ್ತಿರುವ ಅಲೆಗಳು. ಅಲೆಗಳ ಜೊತೆ ಕಡಲತೀರದ ಅಂದ ಹೆಚ್ಚಿಸಿರುವ ಕಪ್ಪು ಮರಳಿನ ರಾಶಿ. ಕಣ್ಣು ಹಾಯಿಸಿದ ಕಡೆಯೆಲ್ಲಾ ಕಾಣ್ತಿರುವ ಕಪ್ಪು ಮರಳಿಗೆ ಮತ್ತಷ್ಟು ರಂಗು ನೀಡುತ್ತಿರುವ ಕಪ್ಪು ಕಲ್ಲುಗಳು. ಅಬ್ಬಬ್ಬಾ ಈ ದೃಶ್ಯವನ್ನ ನೋಡೋಕೆ ಎಷ್ಟು ಸೊಗಸಾಗಿದೆ ಅಲ್ವಾ. ನಾವು ಸಮುದ್ರದ ದಡದಲ್ಲಿ ಬಿಳಿ ಮರಳನ್ನು ನೋಡಿರ್ತೀವಿ. ಆದ್ರೆ, ವಿಶೇಷವಾಗಿರುವ ಕಪ್ಪು ಮರಳಿನ ರಾಶಿ ತೀಳಮಾತಿ ಕಡಲತೀರದಲ್ಲಿ ಕಾಣಸಿಗುತ್ತೆ.

ಈ ತೀಳಮಾತಿ ಕಡಲತೀರ ಇರೋದು ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋವಾ ಗಡಿ ಪ್ರದೇಶವಾದ ಮಾಜಾಳಿ ಗ್ರಾಮದಲ್ಲಿ. ಪ್ರವಾಸಿಗರಿಗೆ ಅಷ್ಟೊಂದು ಪರಿಚಯವಿಲ್ಲದ ತೀಳಮಾತಿ ಕಡಲತೀರಕ್ಕೆ ಮಾಜಾಳಿಯಿಂದ ಗುಡ್ಡವನ್ನ ಹತ್ತಿ ಸುಮಾರು ಅರ್ಧ ಕಿಲೋ ಮೀಟರ್ ನಡೆದು ಸಾಗಬೇಕು. ಆದ್ರೆ ಈ ಕಡಲ ತೀರ ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿದೆ.

ಅಧಿಕಾರಿಗಳ ನಿರ್ಲಕ್ಷ್ಯ, ಪ್ರಾರಂಭವಾಗದ ತೂಗು ಸೇತುವೆ ಕಾಮಗಾರಿ: ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಆರ್.ವಿ.ದೇಶಪಾಂಡೆ 2014ರಲ್ಲಿ ಕಡಲತೀರದಲ್ಲಿ ಸಂಪರ್ಕ ಕಲ್ಪಿಸಲು ತೂಗು ಸೇತುವೆ ನಿರ್ಮಿಸಲು ಹಣ ಮಂಜೂರು ಮಾಡಿದ್ದರು. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಿ ಯೋಜನೆ ರೂಪಿಸಲಾಗಿತ್ತು. ಇನ್ನೇನು ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಸಹ ಹೇಳಲಾಗಿತ್ತು. ಆದ್ರೆ ಹಣ ಮಂಜೂರಾಗಿ ಐದು ವರ್ಷ ಕಳೆದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂದಿಗೂ ಕಾಮಗಾರಿ ಪ್ರಾರಂಭಿಸಿಲ್ಲ. ಇದು ಸ್ಥಳೀಯರು ಮತ್ತು ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ತೀಳಮಾತಿ ಕಡಲತೀರದಲ್ಲಿ ಸಾಕಷ್ಟು ಸಿನಿಮಾ ಶೂಟಿಂಗ್ ಸಹ ನಡೆದಿದ್ದು, ನಾನಾ ಭಾಗದಿಂದ ಪ್ರವಾಸಿಗರು ಕಡಲತೀರದತ್ತ ಬರ್ತಾರೆ. ಆದ್ರೆ, ಸರಿಯಾದ ರಸ್ತೆ ಇಲ್ಲದ ಕಾರಣ ತೂಗು ಸೇತುವೆ ನಿರ್ಮಾಣಕ್ಕೆ ಆಗಿನ ಸಚಿವರು ಆಸಕ್ತಿ ವಹಿಸಿ ಹಣ ಬಿಡುಗಡೆ ಮಾಡಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಹಣ ವಾಪಾಸ್ ಹೋಗಿದೆ.

ಒಟ್ಟಾರೆ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತೆ, ತೀಳಮಾತಿ ಕಡಲತೀರ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಅಭಿವೃದ್ಧಿ ಕಾಣದಂತಾಗಿದೆ. ಇನ್ನಾದ್ರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಮತ್ತೆ ಕಾಮಗಾರಿಗೆ ಚಾಲನೆ ಕೊಡುವ ಮೂಲಕ ಅಪರೂಪದ ಪ್ರವಾಸಿ ತಾಣವನ್ನು ಉಳಿಸಬೇಕಾಗಿದೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ