AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೇಶ್ ಮೇಸ್ತ ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ: ಸಿಬಿಐ ವರದಿಯಲ್ಲಿ ಉಲ್ಲೇಖ

ದಿವಂಗತ ಪರೇಶ್ ಮೇಸ್ತ ಸಾವಿನ ಬಗ್ಗೆ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಹಲವು ಅಂಶಗಳು ಹೊಸದಾಗಿ ಮಹತ್ವ ಪಡೆಯುತ್ತಿವೆ.

ಪರೇಶ್ ಮೇಸ್ತ ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ: ಸಿಬಿಐ ವರದಿಯಲ್ಲಿ ಉಲ್ಲೇಖ
ಸಿಬಿಐ ಮತ್ತು ಪರೇಶ್ ಮೇಸ್ತಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 19, 2022 | 8:32 AM

Share

ಕಾರವಾರ: ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ದಿವಂಗತ ಪರೇಶ್ ಮೇಸ್ತ ಸಾವಿನ ಬಗ್ಗೆ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಹಲವು ಅಂಶಗಳು ಹೊಸದಾಗಿ ಮಹತ್ವ ಪಡೆಯುತ್ತಿವೆ. ಸಾಯುವ ಮೊದಲು ಮೇಸ್ತ ಅವರು ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಎಂಬ ಅಂಶವು ಸಿಬಿಐ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖವಾಗಿದೆ. ಕುಮಟಾದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮವಲ್ಲಿ ಮೇಸ್ತ ಸಹ ಭಾಗವಹಿಸಿದ್ದರು. ಇದಕ್ಕಾಗಿ 25 ಕಿಮೀ ಪ್ರಯಾಣಿಸಿದ್ದರು. ಕಾರ್ಯಕ್ರಮ ಮುಗಿಸಿ ಸಂಜೆ ಮನೆಗೆ ಬಂದಿದ್ದ ಪರೇಶ್ ಮೇಸ್ತ ನಂತರ ಸ್ನೇಹಿತರ ಭೇಟಿಗೆಂದು ಹೊರಗೆ ಹೋಗಿದ್ದರು ಎಂದು ಎಂದು ವರದಿಯು ಉಲ್ಲೇಖಿಸಿದೆ.

ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ಸಲ್ಲಿಸಿರುವ ವರದಿಯು ಇದೀಗ ಲಭ್ಯವಾಗಿದ್ದು, ವರದಿಯಲ್ಲಿ ಪರೇಶ ಮೇಸ್ತಾ ಒಡನಾಡಿಗಳು ಮತ್ತು ಸ್ನೇಹಿತರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳೂ ಸೇರಿದಂತೆ ಸಾಕಷ್ಟು ಸಾಕ್ಷ್ಯಗಳನ್ನು ಪೂರಕ ಪುರಾವೆಯಾಗಿ ಸಲ್ಲಿಸಲಾಗಿದೆ. ‘ಪರೇಶ ಮೇಸ್ತ ಯಾವ ಹುಡುಗಿಯನ್ನೂ ಪ್ರೀತಿಸುತ್ತಿರಲಿಲ್ಲ. ಶಬರಿಮಲೆಗೆ ಹೋಗಲು ಸಹ ತಂದೆ ಒಪ್ಪಿಗೆ ಪಡೆದಿದ್ದ. ಕೆಲವೊಮ್ಮೆ ಮದ್ಯ ಸೇವಿಸಿಯೂ ಮನೆಗೆ ಬಂದಿದ್ದ. ಆಗಾಗ ಸ್ನೇಹಿತರ ಮನೆಯಲ್ಲಿ ಇರುತ್ತಿದ್ದ’ ಎಂದು ವರದಿಯಲ್ಲಿ ಸಿಬಿಐ ತಿಳಿಸಿದೆ.

ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು ಸಾವು: ಸಿಬಿಐ

ಪರೇಶ್​​ ಮೇಸ್ತ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಹೇಳಿದೆ. ಸಿಬಿಐ ಅಧಿಕಾರಿಗಳು ಅ 18ರಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವಿಸ್ತೃತ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು ಕೊಲೆ ಮಡಿರುವ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷಮುಕ್ತಗೊಳಿಸಬಹುದು ಉಲ್ಲೇಖಿಸಲಾಗಿದೆ. ಈ ಹಿಂದೆ ಸಿಬಿಐ ಅಧಿಕಾರಿಗಳು ಅ​ 3 ರಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ಮೊದಲ ವರದಿ ಸಲ್ಲಿಸಿದ್ದರು. ಈ ವರದಿಯಲ್ಲಿ ಪರೇಶ್​​ ಮೇಸ್ತ ಸಾವು ಹತ್ಯೆಯಲ್ಲ, ಆಕಸ್ಮಿಕ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಬಿಐ ವರದಿಯು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು.

Published On - 8:32 am, Wed, 19 October 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ