AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ಗೋಕರ್ಣದಲ್ಲಿ ರಾಮ ತಪಸ್ಸು: ರಾಮತೀರ್ಥ ದೇವಸ್ಥಾನ ಜೀರ್ಣೋದ್ಧಾರ

ಗೋಕರ್ಣದಲ್ಲಿರುವ ಪುಷ್ಕರಣಿಯನ್ನು ರಾಮ ತನ್ನ ಬಾಣದಿಂದ ಸೃಷ್ಟಿಸಿದ ಎಂಬ ಕಥೆಯಿದೆ. ಸರ್ವಋತುವಿನಲ್ಲೂ ಸ್ಫಟಿಕದಂತೆ ಶುದ್ಧವಾಗಿ ಹರಿಯುತ್ತದೆ. ಅಯೋಧ್ಯೆಯಲ್ಲಿ ಬಾಲ ರಾಮನ ಪ್ರತಿಷ್ಠಾಪನೆ ದಿನ ತನ್ನ ಗತವೈಭವವನ್ನು ಮತ್ತೆ ಪಡೆಯುವ ಮೂಲಕ ರಾಮ ಭಕ್ತರಿಗೆ ಈ ಸ್ಥಳ ಕೈಬೀಸಿ ಕರೆಯುತ್ತಿದೆ.

ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ಗೋಕರ್ಣದಲ್ಲಿ ರಾಮ ತಪಸ್ಸು: ರಾಮತೀರ್ಥ ದೇವಸ್ಥಾನ ಜೀರ್ಣೋದ್ಧಾರ
ಬ್ರಹ್ಮಹತ್ಯೆ ದೋಷ ನಿವಾರಣೆಗೆ ಗೋಕರ್ಣದಲ್ಲಿ ತಪಸ್ಸು, ದೇಗುಲ ಜೀರ್ಣೋದ್ಧಾರ
ಸೂರಜ್​, ಮಹಾವೀರ್​ ಉತ್ತರೆ
| Updated By: ಸಾಧು ಶ್ರೀನಾಥ್​|

Updated on: Jan 19, 2024 | 1:59 PM

Share

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇತ್ತ ಪ್ರಧಾನಿ ಮೋದಿಯವರು ದೇವಸ್ಥಾನದ ಸ್ವಚ್ಛತೆ ಕಾರ್ಯ ಮಾಡುವ ಮೂಲಕ ದೇವಸ್ಥಾನಗಳ ಸ್ವಚ್ಛತೆಗೆ ಕರೆ ಕೊಟ್ಟಿದ್ದು, ಪುರಾಣ ಪ್ರಸಿದ್ಧ ಗೋಕರ್ಣದಲ್ಲಿ ಶ್ರೀ ರಾಮ ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ತಪಸ್ಸು ನಡೆಸಿದ ರಾಮ ತೀರ್ಥದಲ್ಲಿ ದೇವಸ್ಥಾನ ಜೀರ್ಣೋದ್ಧಾರದ ಜೊತೆ ಜೊತೆಗೆ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ.

ಒಂದೆಡೆ ಸುಂದರ ಕಡಲತೀರ, ಮತ್ತೊಂದೆಡೆ ಹಚ್ಚ ಹಸಿರಿನ ನಡುವೆ ರಾಮನ ಕಾಲದಲ್ಲೇ ತಲೆ ಎತ್ತಿ ನಿಂತಿರುವ ರಾಮಲಕ್ಷ್ಣರ ದೇಗುಲ. ಈ ದೇಗುಲದ ಮುಂದಿದೆ ಎಂದೂ ಬತ್ತದ ಶುದ್ಧ ತೀರ್ಥ. ಹೌದು ಈ ದೃಶ್ಯ ನೋಡಿದಾಗ ಎಂತವರಿಗೂ ಈ ಸೊಬಗನ್ನ ನೋಡಬೇಕು ಎಂದನಿಸುತ್ತದೆ. ಸುಂದರ ಶಾಂತತೆಯ ಪರಿಸರ ಹೊಂದಿರುವ ಈ ರಾಮತೀರ್ಥ ಕ್ಷೇತ್ರ ಹೆಚ್ಚು ಪ್ರಚಲಿತವಿಲ್ಲ. ಆದ್ರೆ ಇತಿಹಾಸದ ಪುಟದಲ್ಲಿ ದಾಖಲಾಗಿರುವ ಈ ಕ್ಷೇತ್ರ ರಾಮನ ಹೆಜ್ಜೆ ಗುರುತಿನ ಇತಿಹಾಸ ಹೇಳುತ್ತದೆ.

ಈ ಪುಷ್ಕರಣಿಯನ್ನು ರಾಮ ತನ್ನ ಬಾಣದಿಂದ ಸೃಷ್ಟಿಸಿದ ಎಂಬ ಪುರಾಣ ಕಥೆ ಇದ್ದು ಸರ್ವ ಋತುವಿನಲ್ಲೂ ಸ್ಫಟಿಕದಂತೆ ಶುದ್ಧವಾಗಿ ಹರಿಯುತ್ತದೆ. ಇನ್ನು ಬ್ರಾಹ್ಮಣನಾದ ರಾವಣನನ್ನು ರಾಮ ವಧಿಸಿದ ನಂತರ ಬ್ರಹ್ಮ ಹತ್ಯೆ ದೋಷ ನಿವಾರಣೆಗಾಗಿ ಇಲ್ಲಿಗೆ ಬಂದು ತಪಸ್ಸು ಆಚರಿಸಿದ ಎಂಬ ಪ್ರತೀತಿ ಇದೆ. ಇಲ್ಲಿನ ರಾಮನ ದೇವಸ್ಥಾನ ಇದಕ್ಕೆ ಸಹ ಸಾಕ್ಷಿ ಎನ್ನುವಂತಿದೆ. ಇನ್ನು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದ್ದು ಈ ವೇಳೆ ಈ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ರಾಮ ಮೂರ್ತಿಯ ಪಲ್ಲಕ್ಕಿ ಉತ್ಸವ, ದೀಪೋತ್ಸವ ಸೇರಿದಂತೆ ಅನೇಕ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಐತಿಹಾಸಿಕ ಸ್ಥಳವಾದ ಈ ರಾಮತೀರ್ಥ ದಲ್ಲಿ ಇರುವ ರಾಮನ ದೇವಸ್ಥಾನದ ಮೇಲ್ಭಾಗ ಅಲ್ಪ ಹಾಳಾಗಿದ್ದು ಇದೀಗ ರಾಮನನ್ನು ಕುಲದೈವ ಎಂದು ಆರಾಧಿಸುವ ಶಾಂಡಿಲ್ಯ ಮಹರಾಜ ಮುನಿಗಳ ಅನುಯಾಯಿಗಳು ಹಾಗೂ ಸ್ಥಳೀಯ ಭಕ್ತರು ಸ್ವ ಸೇವೆಯ ಮೂಲಕ ಮೇಲ್ಛಾವಣಿಯ ಹಂಚುಗಳು, ಪಕಾಶಿಗಳನ್ನು ಹೊಸದಾಗಿ ಹಾಕುತಿದ್ದು ಸ್ಪಚ್ಛತೆ ಕಾರ್ಯ ಸಹ ನಡೆದಿದೆ. ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯ ದಿನ ತನ್ನ ಗತವೈಭವವನ್ನು ಮತ್ತೆ ಪಡೆಯುವ ಮೂಲಕ ರಾಮ ಭಕ್ತರಿಗೆ ಈ ಸ್ಥಳ ಕೈಬೀಸಿ ಕರೆಯುತ್ತಿದೆ ಎಂದು ದೇವಸ್ಥಾನದ ಅರ್ಚಕರಾದ ಉದಯ ಮಾಹಿತಿ ನೀಡಿದ್ದಾರೆ.

ರಾಮ ರಾವಣನನ್ನು ವಧಿಸಿದ ದೋಷ ವಿಮೋಚನೆಗಾಗಿ ಈ ಸ್ಥಳಕ್ಕೆ ಬಂದರೆ, ರಾವಣ ಈಶ್ವರನ ಆತ್ಮ ಲಿಂಗ ತಂದ ಸ್ಥಳವೂ ಇಲ್ಲಿಯೇ ಇದ್ದು ಈಶ್ವರನ ಆತ್ಮಲಿಂಗ ಮಹಾಬಲೇಶ್ವರ ಎಂದು ಪ್ರಸಿದ್ಧಿ ಪಡೆದಿದ್ದು ದೈವ ಭಕ್ತರನ್ನು ತನ್ನತ್ತ ಸೆಳೆಯುತ್ತಿದೆ. ತಡವೇಕೆ ಪ್ರಕೃತಿ ಸೌಂದರ್ಯದ ಮಡಿಲಲ್ಲಿ ಇರುವ ಈ ಪುರಾಣ ಪ್ರಸಿದ್ಧ ಸ್ಥಳಕ್ಕೊಮ್ಮೆ ಆಗಮಿಸಿ ರಾಮನ ಕೃಪೆಗೆ ಪಾತ್ರರಾಗಿ.

ಆಧ್ಯಾತ್ಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ