AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂತ ಜಾಗದಲ್ಲೇ ಲಕ್ಷ ಲಕ್ಷ ಗಳಿಸೋ ಆಮಿಷ, ಟವರ್ ಟ್ರೇಡಿಂಗ್’ ಆ್ಯಪ್ ಮೂಲಕ ಜನರಿಗೆ ಮೋಸ

ಎಲ್ಲಿಯವರೆಗೆ ದುರಾಸೆಗೆ ಬಿದ್ದು ನಂಬುವವರು ಹೆಚ್ಚಿರುತ್ತಾರೋ ನಂಬಿಸಿ ಮೋಸ ಮಾಡುವವರ ಸಂಖ್ಯೆಯೂ ಅಷ್ಟೇ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಸಿಗುವ ಟವರ್ ಟ್ರೇಡಿಂಗ್ ಆ್ಯಪ್ ಮೂಲಕ ಹೆಚ್ಚಿನ ಹಣ ಗಳಿಸುವ ಆಮೇಶಕ್ಕೆ ಒಳಗಾಗಿ ಇದೀಗಾ ನೂರಾರು ಜನರು ಲಕ್ಷ ಗಟ್ಟಲೇ ವಂಚನೆಗೆ ಒಳಗಾಗಿದ್ದಾರೆ.

ಕೂತ ಜಾಗದಲ್ಲೇ ಲಕ್ಷ ಲಕ್ಷ ಗಳಿಸೋ ಆಮಿಷ, ಟವರ್ ಟ್ರೇಡಿಂಗ್’ ಆ್ಯಪ್ ಮೂಲಕ ಜನರಿಗೆ ಮೋಸ
ಜಿಲ್ಲಾ ಅಪರಾಧ ವಿಭಾಗ
TV9 Web
| Edited By: |

Updated on: Sep 21, 2021 | 7:24 AM

Share

ಕಾರವಾರ: ‘ಟವರ್ ಟ್ರೇಡಿಂಗ್… ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಸಿಗೋ ಒಂದು ಌಪ್. ಈ ಌಪ್ ಮೂಲಕ ಕ್ರಿಪ್ಟೋ ಕರೆನ್ಸಿಗಳಾದ ಬಿಟ್ ಕಾಯಿನ್, ಎಕ್ಸ್ ಆರ್ ಪಿ, ಇಥಿರಿಯಂ, ಡಾಗಿ ಕಾಯಿನ್ ಸೇರಿದಂತೆ ವಿವಿಧ ಕರೆನ್ಸಿಗಳ ಖರೀದಿ ಮಾಡಿ ಹಣ ಹೂಡಿಕೆ ಮಾಡಿದ್ರೆ ಲಕ್ಷ ಲಕ್ಷ ಗಳಿಸಿಬಹುದು ಎಂಬ ಆಮಿಷವೊಡ್ಡಲಾಗಿದೆ. ಇದನ್ನ ನಂಬಿದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಮಂದಿ ‘ಟವರ್ ಟ್ರೇಡಿಂಗ್ ಌಪ್ ಡೌನ್‌ಲೌಡ್ ಮಾಡ್ಕೊಂಡು ಆರಂಭದಲ್ಲಿ 5 ಸಾವಿರ ರೂಪಾಯಿ ಇನ್ವೆಸ್ಟ್ ಮಾಡಿದ್ದಾರೆ. ಹೀಗೆ 5 ಸಾವಿರ ಹೂಡಿಕೆ ಮಾಡಿದವರಿಗೆ ಪ್ರಾರಂಭದಲ್ಲೇ 8750 ರೂಪಾಯಿ ಅವರ ಖಾತೆಗೆ ಜಮಾ ಆಗಿದೆ. ಬಳಿಕ ವಾಟ್ಸಾಪ್ ಗ್ರೂಪ್ ಮಾಡ್ಕೊಂಡು ಅದು ಚೈನ್ ಲಿಂಕ್ ರೀತಿ ಬೆಳೆದುಕೊಂಡು ಹೋಗಿದೆ. ಬಹುತೇಕ ಮಂದಿ 1 ಲಕ್ಷ, 2 ಲಕ್ಷದಿಂದ ಹಿಡಿದು 10 ಲಕ್ಷ ರೂಪಾಯಿವರೆಗೂ ಇನ್ವೆಸ್ಟ್ ಮಾಡಿದ್ದಾರೆ. ಶಿರಸಿಯೊಂದರಲ್ಲೇ 29 ವಾಟ್ಸಾಪ್ ಗ್ರೂಪ್‌ಗಳಿದ್ದು, ಪ್ರತಿ ಗ್ರೂಪ್‌ಗಳು 250 ಮಂದಿಯಿಂದ ತುಂಬಿದ್ದವು. ಇದೀಗ ಆ್ಯಪ್ ಕೂಡ ವರ್ಕ್ ಆಗ್ತಿಲ್ಲ. ಹಾಕಿದ್ದ ಹಣವೂ ಇಲ್ಲದಂತಾಗಿದ್ದು ಎಲ್ಲರಿಗೂ ಹೋಲ್‌ಸೇಲ್ ಆಗಿ ಮಕ್ಮಲ್ ಟೋಪಿ ಹಾಕಲಾಗಿದೆ.

‘ಟವರ್ ಟ್ರೇಡಿಂಗ್’ ಆ್ಯಪ್ ಬಿಟ್ಟರೆ ತಾವು ಹಣ ಹಾಕಿದ್ದು ಯಾರ ಖಾತೆಗೆ ಎಂಬ ಅರಿವೂ ಹೂಡಿಕೆದಾರರಿಗೆ ಇಲ್ಲ. ವಾಟ್ಸಾಪ್ ಗ್ರೂಪ್‌ಗಳಲ್ಲಿಯೂ ಯಾವುದೇ ಉತ್ತರ ಬರುತ್ತಿಲ್ಲ. ಹೀಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಂಚಿಸಿದ ಹಣವೇ 16 ಕೋಟಿಗೂ ಮೀರಿದ್ದು ಎನ್ನಲಾಗ್ತಿದ್ದು, ಇದೀಗ ಕೆಲವರು ಶಿರಸಿ ಪೊಲೀಸರಲ್ಲಿ ತಾವು ಮೋಸ ಹೋಗಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಈ ಆ್ಯಪ್ ಈ ವರ್ಷದ ಜೂನ್‌ನಲ್ಲಿ ರಚನೆಯಾಗಿದೆ, ಚೀನಾದ ಅಲಿಬಾಬಾ ಗ್ರೂಪ್‌ನ ಸರ್ವರ್‌ನಿಂದ ಕಾರ್ಯನಿರ್ವಹಿಸುತ್ತಿರುವ ಇದರ ಮೂಲ ಹಾಂಕಾಂಗ್ ಅನ್ನೋದು ಗೊತ್ತಾಗಿದೆ. ಆದರೆ ಮುಂಬೈ ವಿಳಾಸವೊಂದರಲ್ಲೂ ಈ ಆ್ಯಪ್ ನೋಂದಣಿಯಾಗಿದೆ. ಸದ್ಯ ಈ ಆ್ಯಪ್ ಸ್ಥಗಿತಗೊಂಡಿದೆ. ಸೈಬರ್ ಕ್ರೈಂ ಪೊಲೀಸರು ತನಿಖೆ ಕೈಗೊಂಡಿದ್ದು.. ಆನ್‌ಲೈನ್ ವಂಚಕರಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Petrol Price Today: ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಂದು ಸಹ ಯಾವುದೇ ಬದಲಾವಣೆಗಳಿಲ್ಲ!

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ