AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂತ ಜಾಗದಲ್ಲೇ ಲಕ್ಷ ಲಕ್ಷ ಗಳಿಸೋ ಆಮಿಷ, ಟವರ್ ಟ್ರೇಡಿಂಗ್’ ಆ್ಯಪ್ ಮೂಲಕ ಜನರಿಗೆ ಮೋಸ

ಎಲ್ಲಿಯವರೆಗೆ ದುರಾಸೆಗೆ ಬಿದ್ದು ನಂಬುವವರು ಹೆಚ್ಚಿರುತ್ತಾರೋ ನಂಬಿಸಿ ಮೋಸ ಮಾಡುವವರ ಸಂಖ್ಯೆಯೂ ಅಷ್ಟೇ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಸಿಗುವ ಟವರ್ ಟ್ರೇಡಿಂಗ್ ಆ್ಯಪ್ ಮೂಲಕ ಹೆಚ್ಚಿನ ಹಣ ಗಳಿಸುವ ಆಮೇಶಕ್ಕೆ ಒಳಗಾಗಿ ಇದೀಗಾ ನೂರಾರು ಜನರು ಲಕ್ಷ ಗಟ್ಟಲೇ ವಂಚನೆಗೆ ಒಳಗಾಗಿದ್ದಾರೆ.

ಕೂತ ಜಾಗದಲ್ಲೇ ಲಕ್ಷ ಲಕ್ಷ ಗಳಿಸೋ ಆಮಿಷ, ಟವರ್ ಟ್ರೇಡಿಂಗ್’ ಆ್ಯಪ್ ಮೂಲಕ ಜನರಿಗೆ ಮೋಸ
ಜಿಲ್ಲಾ ಅಪರಾಧ ವಿಭಾಗ
TV9 Web
| Edited By: |

Updated on: Sep 21, 2021 | 7:24 AM

Share

ಕಾರವಾರ: ‘ಟವರ್ ಟ್ರೇಡಿಂಗ್… ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಸಿಗೋ ಒಂದು ಌಪ್. ಈ ಌಪ್ ಮೂಲಕ ಕ್ರಿಪ್ಟೋ ಕರೆನ್ಸಿಗಳಾದ ಬಿಟ್ ಕಾಯಿನ್, ಎಕ್ಸ್ ಆರ್ ಪಿ, ಇಥಿರಿಯಂ, ಡಾಗಿ ಕಾಯಿನ್ ಸೇರಿದಂತೆ ವಿವಿಧ ಕರೆನ್ಸಿಗಳ ಖರೀದಿ ಮಾಡಿ ಹಣ ಹೂಡಿಕೆ ಮಾಡಿದ್ರೆ ಲಕ್ಷ ಲಕ್ಷ ಗಳಿಸಿಬಹುದು ಎಂಬ ಆಮಿಷವೊಡ್ಡಲಾಗಿದೆ. ಇದನ್ನ ನಂಬಿದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಮಂದಿ ‘ಟವರ್ ಟ್ರೇಡಿಂಗ್ ಌಪ್ ಡೌನ್‌ಲೌಡ್ ಮಾಡ್ಕೊಂಡು ಆರಂಭದಲ್ಲಿ 5 ಸಾವಿರ ರೂಪಾಯಿ ಇನ್ವೆಸ್ಟ್ ಮಾಡಿದ್ದಾರೆ. ಹೀಗೆ 5 ಸಾವಿರ ಹೂಡಿಕೆ ಮಾಡಿದವರಿಗೆ ಪ್ರಾರಂಭದಲ್ಲೇ 8750 ರೂಪಾಯಿ ಅವರ ಖಾತೆಗೆ ಜಮಾ ಆಗಿದೆ. ಬಳಿಕ ವಾಟ್ಸಾಪ್ ಗ್ರೂಪ್ ಮಾಡ್ಕೊಂಡು ಅದು ಚೈನ್ ಲಿಂಕ್ ರೀತಿ ಬೆಳೆದುಕೊಂಡು ಹೋಗಿದೆ. ಬಹುತೇಕ ಮಂದಿ 1 ಲಕ್ಷ, 2 ಲಕ್ಷದಿಂದ ಹಿಡಿದು 10 ಲಕ್ಷ ರೂಪಾಯಿವರೆಗೂ ಇನ್ವೆಸ್ಟ್ ಮಾಡಿದ್ದಾರೆ. ಶಿರಸಿಯೊಂದರಲ್ಲೇ 29 ವಾಟ್ಸಾಪ್ ಗ್ರೂಪ್‌ಗಳಿದ್ದು, ಪ್ರತಿ ಗ್ರೂಪ್‌ಗಳು 250 ಮಂದಿಯಿಂದ ತುಂಬಿದ್ದವು. ಇದೀಗ ಆ್ಯಪ್ ಕೂಡ ವರ್ಕ್ ಆಗ್ತಿಲ್ಲ. ಹಾಕಿದ್ದ ಹಣವೂ ಇಲ್ಲದಂತಾಗಿದ್ದು ಎಲ್ಲರಿಗೂ ಹೋಲ್‌ಸೇಲ್ ಆಗಿ ಮಕ್ಮಲ್ ಟೋಪಿ ಹಾಕಲಾಗಿದೆ.

‘ಟವರ್ ಟ್ರೇಡಿಂಗ್’ ಆ್ಯಪ್ ಬಿಟ್ಟರೆ ತಾವು ಹಣ ಹಾಕಿದ್ದು ಯಾರ ಖಾತೆಗೆ ಎಂಬ ಅರಿವೂ ಹೂಡಿಕೆದಾರರಿಗೆ ಇಲ್ಲ. ವಾಟ್ಸಾಪ್ ಗ್ರೂಪ್‌ಗಳಲ್ಲಿಯೂ ಯಾವುದೇ ಉತ್ತರ ಬರುತ್ತಿಲ್ಲ. ಹೀಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಂಚಿಸಿದ ಹಣವೇ 16 ಕೋಟಿಗೂ ಮೀರಿದ್ದು ಎನ್ನಲಾಗ್ತಿದ್ದು, ಇದೀಗ ಕೆಲವರು ಶಿರಸಿ ಪೊಲೀಸರಲ್ಲಿ ತಾವು ಮೋಸ ಹೋಗಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಈ ಆ್ಯಪ್ ಈ ವರ್ಷದ ಜೂನ್‌ನಲ್ಲಿ ರಚನೆಯಾಗಿದೆ, ಚೀನಾದ ಅಲಿಬಾಬಾ ಗ್ರೂಪ್‌ನ ಸರ್ವರ್‌ನಿಂದ ಕಾರ್ಯನಿರ್ವಹಿಸುತ್ತಿರುವ ಇದರ ಮೂಲ ಹಾಂಕಾಂಗ್ ಅನ್ನೋದು ಗೊತ್ತಾಗಿದೆ. ಆದರೆ ಮುಂಬೈ ವಿಳಾಸವೊಂದರಲ್ಲೂ ಈ ಆ್ಯಪ್ ನೋಂದಣಿಯಾಗಿದೆ. ಸದ್ಯ ಈ ಆ್ಯಪ್ ಸ್ಥಗಿತಗೊಂಡಿದೆ. ಸೈಬರ್ ಕ್ರೈಂ ಪೊಲೀಸರು ತನಿಖೆ ಕೈಗೊಂಡಿದ್ದು.. ಆನ್‌ಲೈನ್ ವಂಚಕರಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Petrol Price Today: ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಂದು ಸಹ ಯಾವುದೇ ಬದಲಾವಣೆಗಳಿಲ್ಲ!

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು