AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಬಾಂಬ್​ ಸ್ಫೋಟಿಸಿ ಕಾಡುಹಂದಿ ಹತ್ಯೆ; ಕಾಂತಾರ ಸಿನಿಮಾ ನಂತರ ದೈವದ ಸ್ಥಾನ ಕೊಟ್ಟು ಸಾಕಿದ್ದ ಗ್ರಾಮಸ್ಥರ ಕಣ್ಣೀರು

ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಕಾಡುಹಂದಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ಚಂಡಿಯಾ ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಈ ಕಾಡು ಹಂದಿಗೆ, ಕಾಂತಾರ ಸಿನಿಮಾದ ನಂತರ ಪಂಜುರ್ಲಿ ದೈವದ ಸ್ಥಾನ ಕೊಟ್ಟು ಗ್ರಾಮಸ್ಥರು ಪೂಜೆ ಮಾಡುತ್ತಿದ್ದರು.

ನಾಡಬಾಂಬ್​ ಸ್ಫೋಟಿಸಿ ಕಾಡುಹಂದಿ ಹತ್ಯೆ; ಕಾಂತಾರ ಸಿನಿಮಾ ನಂತರ ದೈವದ ಸ್ಥಾನ ಕೊಟ್ಟು ಸಾಕಿದ್ದ ಗ್ರಾಮಸ್ಥರ ಕಣ್ಣೀರು
ಕಾರವಾರ
ವಿನಾಯಕ ಬಡಿಗೇರ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 06, 2023 | 9:45 AM

Share

ಉತ್ತರ ಕನ್ನಡ, ಆ.6: ಜಿಲ್ಲೆಯ ಕಾರವಾರ(Karwar)ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಕಾಡುಹಂದಿ(Pig)ಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ಚಂಡಿಯಾ ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಈ ಕಾಡು ಹಂದಿಗೆ, ಕಾಂತಾರ ಸಿನಿಮಾದ ನಂತರ ಪಂಜುರ್ಲಿ ದೈವದ ಸ್ಥಾನ ಕೊಟ್ಟು ಗ್ರಾಮಸ್ಥರು ಪೂಜೆ ಮಾಡುತ್ತಿದ್ದರು. ಅದರಂತೆ ಊರಿನಲ್ಲಿ ಜನ ನೀಡಿದ ಆಹಾರವನ್ನ ಸೇವಿಸುತ್ತ ಜನರ ಪ್ರೀತಿಯನ್ನ ಗಳಿಸಿದ್ದ ಕಾಡು ಹಂದಿಯನ್ನ, ನಿನ್ನೆ(ಆ.5) ರಾತ್ರಿ ಯಾರೋ ದುಷ್ಕರ್ಮಿಗಳು ಬಾಂಬ್​ ಇಟ್ಟು ಹತ್ಯೆ ಮಾಡಿದ್ದಾರೆ. ಈ ಕುರಿತು ಕಾರವಾರ ಅರಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವು ಕಡಿತದಿಂದ ಹೈಸ್ಕೂಲ್​ನ ಡಿ ದರ್ಜೆ ಸಿಬ್ಬಂದಿ ಸಾವು

ಉತ್ತರ ಕನ್ನಡ: ಹಾವು ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೈಸ್ಕೂಲ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದ ಘಟನೆ ಕಾರವಾರದಲ್ಲಿ ನಡೆದಿದೆ. ತಾಲ್ಲೂಕಿನ ಶಿರವಾಡದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಡಿ ದರ್ಜೆ ನೌಕರಳಾಗಿದ್ದ ಆನಂದಿ ಕಾಣಕೋಣಕರ(46) ಮೃತ ದುರ್ದೈವಿಯಾಗಿದ್ದಾರೆ. ಅಗಸ್ಟ್ 1 ರಂದು ಸಂಜೆ ವೇಳೆಗೆ ಶಾಲೆಯ ಜನರೇಟರ್ ಕೊಠಡಿಯ ಬಳಿ ತೆರಳಿದ್ದ ವೇಳೆ ಹಾವು ಕಚ್ಚಿತ್ತು. ಬಳಿಕ ಅವರನ್ನು ಕಾರವಾರದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿದ್ದ ಮಹಿಳೆ ನಿನ್ನೆ(ಆ.6)ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌‌.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ, ಕಾರವಾರದಲ್ಲಿ ವಿದ್ಯುತ್​ ಪ್ರವಹಿಸಿ ಎಂಟು ತಿಂಗಳ​ ಮಗು ಸಾವು

ತೆಂಗಿನ ಮರದಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು

ಆನೇಕಲ್: ತೆಂಗಿನ ಮರ ಏರಿದ್ದ ಯುವಕ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಆನೇಕಲ್ ತಾಲ್ಲೂಕಿನ ಚಿನ್ನಯ್ನ ಪಾಳ್ಯದಲ್ಲಿ ನಡೆದಿದೆ. ಮುನಿರಾಜು (25) ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇತ, ನಾಲ್ವರು ಸ್ನೇಹಿತರ ಜೊತೆಗೂಡಿ  ಜಮೀನಿನೊಂದರಲ್ಲಿನ ತೆಂಗಿನ ಕಾಯಿ ತೆಗೆಯಲು ಹೋಗಿದ್ದ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಕುತ್ತಿಗೆ, ಬೆನ್ನು, ಕಾಲು ಮುರಿದು ಹೋಗಿ ಸಾವನ್ನಪ್ಪಿದ್ದಾನೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ