ಖಾಸಗಿ ಬಸ್​ನಲ್ಲಿ ದಾಖಲೆ ಇಲ್ಲದ ಸಾಗಿಸುತ್ತಿದ್ದ ಕಂತೆ ಕಂತೆ ಹಣ ಕಾರವಾರದಲ್ಲಿ ಜಪ್ತಿ

Edited By:

Updated on: Oct 28, 2025 | 11:49 AM

ಯಾವುದೇ ದಾಖಲೆ ಇಲ್ಲದೆ ಖಾಸಗಿ ಬಸ್​ನಲ್ಲಿ ಸಾಗಾಟ ನಡೆಸುತ್ತಿದ್ದ ಕಂತೆ ಕಂತೆ ಹಣವನ್ನು ಕಾರವಾರದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ದುಡ್ಡನ್ನು ಗೋವಾದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಎಂಬುದು ಗೊತ್ತಾಗಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಿರುವ ಹಣವನ್ನ ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಕಾರವಾರ, ಅಕ್ಟೋಬರ್​ 28: ಖಾಸಗಿ ಬಸ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ಹಣವನ್ನ (Money) ಕಾರವಾರ ತಾಲೂಕಿನ ಮಾಜಾಳಿ ಚೆಕ್‌ಪೊಸ್ಟ್​​ನಲ್ಲಿ ಜಪ್ತಿ ಮಾಡಲಾಗಿದೆ. ಪೊಲೀಸರಿಂದ ಖಾಸಗಿ ಬಸ್​​​ ತಪಾಸಣೆ ವೇಳೆ ಕಲ್ಪೇಶಕುಮಾರ್​, ಬೊಂಬ್ರಾ ರಾಮ್ ಎಂಬುವರ ಬ್ಯಾಗ್‌ನಲ್ಲಿ ಹಣ ಪತ್ತೆಯಾಗಿದೆ. ಗೋವಾದಿಂದ ಬೆಂಗಳೂರಿಗೆ ಹಣವನ್ನ ಸಾಗಿಸಲು ಯತ್ನಿಸಿದ್ದು, ಇದು Mxon ಎಲೆಕ್ಟ್ರಿಕಲ್ ಹಾರ್ಡ್​ವೇರ್​​ ಕಂಪನಿಗೆ ಸೇರಿದ ದುಡ್ಡು ಎಂಬುದು ದೃಢಪಟ್ಟಿದೆ. ತೆರಿಗೆ ತಪ್ಪಿಸಲು ಬ್ಯಾಗ್​ನಲ್ಲಿ ಹಣವನ್ನು ಆರೋಪಿಗಳು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಿದ ಹಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More