AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಎಂದು ಸಿದ್ಧಾಪುರದಲ್ಲಿ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ
ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ
TV9 Web
| Edited By: ವಿವೇಕ ಬಿರಾದಾರ|

Updated on:Nov 28, 2022 | 10:26 PM

Share

ಉತ್ತರ ಕನ್ನಡ: ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas poojary) ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಎಂದು ಸಿದ್ಧಾಪುರದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ (Pranavananda Swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಶಿರಸಿ ತಾಲೂಕಿನ ಸಿದ್ಧಾಪೂರದಲ್ಲಿ ಮಾತನಾಡಿದ ಅವರು ಈಡಿಗ, ಬಿಲ್ಲವ ಸಮಾಜಕ್ಕೆ ರಿಸರ್ವೇಶನ್ ಒದಗಿಸಲು ಧ್ವನಿ ಎತ್ತುವಲ್ಲಿ ಸಮುದಾಯದ ಇಬರು ಸಚಿವರು ವಿಫಲರಾಗಿದ್ದಾರೆ. ಬಿಜೆಪಿ ಸರಕಾರದ ಯಾವ ಕೊಡುಗೆ ಕೂಡ ಈಡಿಗ ಮತ್ತು ಬಿಲ್ಲವ ಸಮುದಾಯದ ನೀಡಿಲ್ಲ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಲವೆಡೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಿದ್ದೇವೆ ಅಂತಾರೆ. ಆದರೆ, ಈ ವಸತಿ ಶಾಲೆಗಳಲ್ಲಿ ಈಡಿಗ ಸಮುದಾಯ ಮಕ್ಕಳಿಗೆ ರಿಸರ್ವೇಶನ್ ಇಲ್ಲ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅಂಕೋಲ: ಉಪ್ಪು ನೀರು ನುಗ್ಗಿ ಬಂಜರು ಭೂಮಿಯಂತಾದ ಫಲವತ್ತಾದ ಹಾರವಾಡ ಗ್ರಾಮದ ಜಮೀನು

ರಾಜ್ಯದಲ್ಲಿರುವ ಈಡಿಗ, ಬಿಲ್ಲವ ಸಮುದಾಯದ ಶಾಸಕರಿಂದ ಯಾವುದೇ ನ್ಯಾಯ ಸಿಗುತ್ತದೆಂಬ ನಂಬಿಕೆಯಿಲ್ಲ. ಈ ಸಮುದಾಯದ ಯುವಕರು, ಮಹಿಳೆಯರು ಬೀದಿಗೆ ಬರುತ್ತಿದ್ದಾರೆ. ನಮ್ಮ ಸಮುದಾಯದ ರಾಜಕಾರಣಿಗಳಿಂದಲೇ ನಮಗೆ ಅನ್ಯಾಯವಾಗಿದೆ. ನಾರಾಯಣ ಗುರು ನಿಗಮವನ್ನು ಘೋಷಣೆ ಮಾಡುವುದರಲ್ಲಿ ಸಮುದಾಯದ ಶಾಸಕರ ನಿಲುವೇನು? ಎಂದು ಪ್ರಶ್ನಿಸಿದ್ದಾರೆ.

ವರ ಸ್ವಾರ್ಥ ರಾಜಕಾರಣಕ್ಕಾಗಿ ಸಮುದಾಯವನ್ನು ಬಳಸುತ್ತಿದ್ದಾರೆ. ಗೌಡ ಸಮುದಾಯದ ರಾಜಕಾರಣಿಗಳು ಸರಕಾರಕ್ಕೆ ಸೌಲಭ್ಯಕ್ಕಾಗಿ ಒತ್ತಾಯಿಸಿದ್ದಾರೆ. ಈಡಿಗ, ಬಿಲ್ಲವ ಸಮುದಾಯದ ನಾಯಕರಿಗೆ ನಾಚಿಗೆಯಾಗಬೇಕು. 2023ರಲ್ಲಿ ನಡೆಯುವ ಚುನಾವಣೆ ವೇಳೆ ಸಮುದಾಯದ ಮತ‌‌ ನಿಮಗೆ ಬೇಡವೆಂದಲ್ಲಿ ಹೇಳಿಬಿಡಿ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಶಿರಸಿ ಪೊಲೀಸರ ಭರ್ಜರಿ ಬೇಟೆ: 9 ಅಂತರ್​ ಜಿಲ್ಲಾ ಕಳ್ಳರ ಬಂಧನ, 13,80,000 ರೂ. ನಗದು, 2 ಕಾರು, 12 ಮೊಬೈಲ್​ ಜಪ್ತಿ

ಜನೆವರಿ 6ರಂದು ಮಂಗಳೂರು-ಬೆಂಗಳೂರು ಪಾದಯಾತ್ರೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈಡಿಗ, ಬಿಲ್ಲವ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಎಂದು ಒತ್ತಾಯಿಸಿದರು.

 ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:18 pm, Mon, 28 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ