AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಎಂದು ಸಿದ್ಧಾಪುರದಲ್ಲಿ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ
ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 28, 2022 | 10:26 PM

ಉತ್ತರ ಕನ್ನಡ: ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas poojary) ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಎಂದು ಸಿದ್ಧಾಪುರದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ (Pranavananda Swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಶಿರಸಿ ತಾಲೂಕಿನ ಸಿದ್ಧಾಪೂರದಲ್ಲಿ ಮಾತನಾಡಿದ ಅವರು ಈಡಿಗ, ಬಿಲ್ಲವ ಸಮಾಜಕ್ಕೆ ರಿಸರ್ವೇಶನ್ ಒದಗಿಸಲು ಧ್ವನಿ ಎತ್ತುವಲ್ಲಿ ಸಮುದಾಯದ ಇಬರು ಸಚಿವರು ವಿಫಲರಾಗಿದ್ದಾರೆ. ಬಿಜೆಪಿ ಸರಕಾರದ ಯಾವ ಕೊಡುಗೆ ಕೂಡ ಈಡಿಗ ಮತ್ತು ಬಿಲ್ಲವ ಸಮುದಾಯದ ನೀಡಿಲ್ಲ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಲವೆಡೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಿದ್ದೇವೆ ಅಂತಾರೆ. ಆದರೆ, ಈ ವಸತಿ ಶಾಲೆಗಳಲ್ಲಿ ಈಡಿಗ ಸಮುದಾಯ ಮಕ್ಕಳಿಗೆ ರಿಸರ್ವೇಶನ್ ಇಲ್ಲ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅಂಕೋಲ: ಉಪ್ಪು ನೀರು ನುಗ್ಗಿ ಬಂಜರು ಭೂಮಿಯಂತಾದ ಫಲವತ್ತಾದ ಹಾರವಾಡ ಗ್ರಾಮದ ಜಮೀನು

ರಾಜ್ಯದಲ್ಲಿರುವ ಈಡಿಗ, ಬಿಲ್ಲವ ಸಮುದಾಯದ ಶಾಸಕರಿಂದ ಯಾವುದೇ ನ್ಯಾಯ ಸಿಗುತ್ತದೆಂಬ ನಂಬಿಕೆಯಿಲ್ಲ. ಈ ಸಮುದಾಯದ ಯುವಕರು, ಮಹಿಳೆಯರು ಬೀದಿಗೆ ಬರುತ್ತಿದ್ದಾರೆ. ನಮ್ಮ ಸಮುದಾಯದ ರಾಜಕಾರಣಿಗಳಿಂದಲೇ ನಮಗೆ ಅನ್ಯಾಯವಾಗಿದೆ. ನಾರಾಯಣ ಗುರು ನಿಗಮವನ್ನು ಘೋಷಣೆ ಮಾಡುವುದರಲ್ಲಿ ಸಮುದಾಯದ ಶಾಸಕರ ನಿಲುವೇನು? ಎಂದು ಪ್ರಶ್ನಿಸಿದ್ದಾರೆ.

ವರ ಸ್ವಾರ್ಥ ರಾಜಕಾರಣಕ್ಕಾಗಿ ಸಮುದಾಯವನ್ನು ಬಳಸುತ್ತಿದ್ದಾರೆ. ಗೌಡ ಸಮುದಾಯದ ರಾಜಕಾರಣಿಗಳು ಸರಕಾರಕ್ಕೆ ಸೌಲಭ್ಯಕ್ಕಾಗಿ ಒತ್ತಾಯಿಸಿದ್ದಾರೆ. ಈಡಿಗ, ಬಿಲ್ಲವ ಸಮುದಾಯದ ನಾಯಕರಿಗೆ ನಾಚಿಗೆಯಾಗಬೇಕು. 2023ರಲ್ಲಿ ನಡೆಯುವ ಚುನಾವಣೆ ವೇಳೆ ಸಮುದಾಯದ ಮತ‌‌ ನಿಮಗೆ ಬೇಡವೆಂದಲ್ಲಿ ಹೇಳಿಬಿಡಿ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಶಿರಸಿ ಪೊಲೀಸರ ಭರ್ಜರಿ ಬೇಟೆ: 9 ಅಂತರ್​ ಜಿಲ್ಲಾ ಕಳ್ಳರ ಬಂಧನ, 13,80,000 ರೂ. ನಗದು, 2 ಕಾರು, 12 ಮೊಬೈಲ್​ ಜಪ್ತಿ

ಜನೆವರಿ 6ರಂದು ಮಂಗಳೂರು-ಬೆಂಗಳೂರು ಪಾದಯಾತ್ರೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈಡಿಗ, ಬಿಲ್ಲವ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಎಂದು ಒತ್ತಾಯಿಸಿದರು.

 ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:18 pm, Mon, 28 November 22

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ