AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಎಂದು ಸಿದ್ಧಾಪುರದಲ್ಲಿ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ
ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ
TV9 Web
| Updated By: ವಿವೇಕ ಬಿರಾದಾರ|

Updated on:Nov 28, 2022 | 10:26 PM

Share

ಉತ್ತರ ಕನ್ನಡ: ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas poojary) ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಎಂದು ಸಿದ್ಧಾಪುರದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ (Pranavananda Swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಶಿರಸಿ ತಾಲೂಕಿನ ಸಿದ್ಧಾಪೂರದಲ್ಲಿ ಮಾತನಾಡಿದ ಅವರು ಈಡಿಗ, ಬಿಲ್ಲವ ಸಮಾಜಕ್ಕೆ ರಿಸರ್ವೇಶನ್ ಒದಗಿಸಲು ಧ್ವನಿ ಎತ್ತುವಲ್ಲಿ ಸಮುದಾಯದ ಇಬರು ಸಚಿವರು ವಿಫಲರಾಗಿದ್ದಾರೆ. ಬಿಜೆಪಿ ಸರಕಾರದ ಯಾವ ಕೊಡುಗೆ ಕೂಡ ಈಡಿಗ ಮತ್ತು ಬಿಲ್ಲವ ಸಮುದಾಯದ ನೀಡಿಲ್ಲ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಲವೆಡೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಿದ್ದೇವೆ ಅಂತಾರೆ. ಆದರೆ, ಈ ವಸತಿ ಶಾಲೆಗಳಲ್ಲಿ ಈಡಿಗ ಸಮುದಾಯ ಮಕ್ಕಳಿಗೆ ರಿಸರ್ವೇಶನ್ ಇಲ್ಲ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅಂಕೋಲ: ಉಪ್ಪು ನೀರು ನುಗ್ಗಿ ಬಂಜರು ಭೂಮಿಯಂತಾದ ಫಲವತ್ತಾದ ಹಾರವಾಡ ಗ್ರಾಮದ ಜಮೀನು

ರಾಜ್ಯದಲ್ಲಿರುವ ಈಡಿಗ, ಬಿಲ್ಲವ ಸಮುದಾಯದ ಶಾಸಕರಿಂದ ಯಾವುದೇ ನ್ಯಾಯ ಸಿಗುತ್ತದೆಂಬ ನಂಬಿಕೆಯಿಲ್ಲ. ಈ ಸಮುದಾಯದ ಯುವಕರು, ಮಹಿಳೆಯರು ಬೀದಿಗೆ ಬರುತ್ತಿದ್ದಾರೆ. ನಮ್ಮ ಸಮುದಾಯದ ರಾಜಕಾರಣಿಗಳಿಂದಲೇ ನಮಗೆ ಅನ್ಯಾಯವಾಗಿದೆ. ನಾರಾಯಣ ಗುರು ನಿಗಮವನ್ನು ಘೋಷಣೆ ಮಾಡುವುದರಲ್ಲಿ ಸಮುದಾಯದ ಶಾಸಕರ ನಿಲುವೇನು? ಎಂದು ಪ್ರಶ್ನಿಸಿದ್ದಾರೆ.

ವರ ಸ್ವಾರ್ಥ ರಾಜಕಾರಣಕ್ಕಾಗಿ ಸಮುದಾಯವನ್ನು ಬಳಸುತ್ತಿದ್ದಾರೆ. ಗೌಡ ಸಮುದಾಯದ ರಾಜಕಾರಣಿಗಳು ಸರಕಾರಕ್ಕೆ ಸೌಲಭ್ಯಕ್ಕಾಗಿ ಒತ್ತಾಯಿಸಿದ್ದಾರೆ. ಈಡಿಗ, ಬಿಲ್ಲವ ಸಮುದಾಯದ ನಾಯಕರಿಗೆ ನಾಚಿಗೆಯಾಗಬೇಕು. 2023ರಲ್ಲಿ ನಡೆಯುವ ಚುನಾವಣೆ ವೇಳೆ ಸಮುದಾಯದ ಮತ‌‌ ನಿಮಗೆ ಬೇಡವೆಂದಲ್ಲಿ ಹೇಳಿಬಿಡಿ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಶಿರಸಿ ಪೊಲೀಸರ ಭರ್ಜರಿ ಬೇಟೆ: 9 ಅಂತರ್​ ಜಿಲ್ಲಾ ಕಳ್ಳರ ಬಂಧನ, 13,80,000 ರೂ. ನಗದು, 2 ಕಾರು, 12 ಮೊಬೈಲ್​ ಜಪ್ತಿ

ಜನೆವರಿ 6ರಂದು ಮಂಗಳೂರು-ಬೆಂಗಳೂರು ಪಾದಯಾತ್ರೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈಡಿಗ, ಬಿಲ್ಲವ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಎಂದು ಒತ್ತಾಯಿಸಿದರು.

 ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:18 pm, Mon, 28 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ