ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿ; ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವು

ಮರಣೋತ್ತರ ಪರೀಕ್ಷೆಗೆ ಚಿರತೆ ಮೃತದೇಹ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಿರತೆ ಕಳೇಬರಹ ದಹನ ಮಾಡಲಾಗುತ್ತದೆ. ಘಟನೆ ಸಂಬಂಧ ಯಲ್ಲಾಪುರ ಅರಣ್ಯ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿ; ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವು
Follow us
| Updated By: ganapathi bhat

Updated on:Apr 06, 2022 | 11:43 AM

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಬಿಸಗೋಡ ಗ್ರಾಮದ ಹೊರವಲಯದಲ್ಲಿ ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿಯಾದ ದಾರುಣ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಿರತೆಯ ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವನ್ನಪ್ಪಿವೆ. ಚಿರತೆ ಮೃತದೇಹ ಕಂಡು ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಯಲ್ಲಾಪುರದ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಚಿರತೆ ಮೃತದೇಹ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಿರತೆ ಕಳೇಬರಹ ದಹನ ಮಾಡಲಾಗುತ್ತದೆ. ಘಟನೆ ಸಂಬಂಧ ಯಲ್ಲಾಪುರ ಅರಣ್ಯ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಇತ್ತ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತೂರು ಗ್ರಾಮದಲ್ಲಿ ಅಳಿವಿನಂಚಿನ ಚಿಪ್ಪು ಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ ಮಾಡಿದ ಘಟನೆ ನಡೆದಿದೆ. ಸಿಐಡಿ ಅರಣ್ಯ ಘಟಕದಿಂದ ರಾಜು (40), ಧರ್ಮ (35) ಬಂಧಿಸಲಾಗಿದೆ.

ಕುರಿ ಕಳ್ಳತನಕ್ಕೆ ಬಂದು ಕುರಿಗಾಹಿ ಹತ್ಯೆಗೈದ ಖದೀಮರು

ಕುರಿ ಕಳ್ಳತನಕ್ಕೆ ಬಂದ ಖದೀಮರು ಕುರಿಗಾಹಿ ಹತ್ಯೆಗೈದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗಂಗಾಪುರ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ವೆಂಕಟೇಶ್ ಮುತ್ತೂರು (50) ಕೊಲೆ ಮಾಡಲಾಗಿದೆ. ವೆಂಕಟೇಶ್ ಹತ್ಯೆಗೈದು 40 ಕುರಿಯನ್ನು ಹಂತಕರು ಹೊತ್ತೊಯ್ದಿದ್ದಾರೆ. ಕಂಬಕ್ಕೆ ಕಟ್ಟಿಹಾಕಿ ವೆಂಕಟೇಶ್‌ಗೆ ಕಳ್ಳರು ಥಳಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ವೆಂಕಟೇಶ್ ಮೃತಪಟ್ಟಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಯಚೂರು: ಕೆಲಸ ಕಳೆದುಕೊಂಡು ಮನನೊಂದಿದ್ದ ವ್ಯಕ್ತಿ ಆತ್ಮಹತ್ಯೆ

ಇತ್ತ ರಾಯಚೂರಿನಲ್ಲಿ ಕೆಲಸ ಕಳೆದುಕೊಂಡು ಮನನೊಂದಿದ್ದ ರವಿತೇಜ (25) ಎಂಬಾತ ನೇಣಿಗೆ ಶರಣಾದ ದುರ್ಘಟನೆ ಸಂಭವಿಸಿದೆ. ರವಿತೇಜ, ಮಸ್ಕಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆ ‌ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಬಸ್, ಕಾರು ಡಿಕ್ಕಿ; ಇಬ್ಬರು ದುರ್ಮರಣ

ಸರ್ಕಾರಿ ಬಸ್​, ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಶಿರುಗುಪ್ಪಿ ಬಳಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹಂಪಿ ಪ್ರವಾಸಕ್ಕೆ ಕಾರಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು, ಕಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರೀಶಿಲನೆ ನಡೆಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಚಿರತೆಯೊಂದಿಗೆ ಕಾದಾಡಿ ಗೆದ್ದ ಸಾಕು ನಾಯಿ; ವಿಡಿಯೋ ನೋಡಿ

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Published On - 10:15 am, Wed, 6 April 22

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್