AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿ; ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವು

ಮರಣೋತ್ತರ ಪರೀಕ್ಷೆಗೆ ಚಿರತೆ ಮೃತದೇಹ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಿರತೆ ಕಳೇಬರಹ ದಹನ ಮಾಡಲಾಗುತ್ತದೆ. ಘಟನೆ ಸಂಬಂಧ ಯಲ್ಲಾಪುರ ಅರಣ್ಯ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿ; ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವು
Follow us
TV9 Web
| Updated By: ganapathi bhat

Updated on:Apr 06, 2022 | 11:43 AM

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಬಿಸಗೋಡ ಗ್ರಾಮದ ಹೊರವಲಯದಲ್ಲಿ ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿಯಾದ ದಾರುಣ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಿರತೆಯ ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವನ್ನಪ್ಪಿವೆ. ಚಿರತೆ ಮೃತದೇಹ ಕಂಡು ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಯಲ್ಲಾಪುರದ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಚಿರತೆ ಮೃತದೇಹ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಿರತೆ ಕಳೇಬರಹ ದಹನ ಮಾಡಲಾಗುತ್ತದೆ. ಘಟನೆ ಸಂಬಂಧ ಯಲ್ಲಾಪುರ ಅರಣ್ಯ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಇತ್ತ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತೂರು ಗ್ರಾಮದಲ್ಲಿ ಅಳಿವಿನಂಚಿನ ಚಿಪ್ಪು ಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ ಮಾಡಿದ ಘಟನೆ ನಡೆದಿದೆ. ಸಿಐಡಿ ಅರಣ್ಯ ಘಟಕದಿಂದ ರಾಜು (40), ಧರ್ಮ (35) ಬಂಧಿಸಲಾಗಿದೆ.

ಕುರಿ ಕಳ್ಳತನಕ್ಕೆ ಬಂದು ಕುರಿಗಾಹಿ ಹತ್ಯೆಗೈದ ಖದೀಮರು

ಕುರಿ ಕಳ್ಳತನಕ್ಕೆ ಬಂದ ಖದೀಮರು ಕುರಿಗಾಹಿ ಹತ್ಯೆಗೈದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗಂಗಾಪುರ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ವೆಂಕಟೇಶ್ ಮುತ್ತೂರು (50) ಕೊಲೆ ಮಾಡಲಾಗಿದೆ. ವೆಂಕಟೇಶ್ ಹತ್ಯೆಗೈದು 40 ಕುರಿಯನ್ನು ಹಂತಕರು ಹೊತ್ತೊಯ್ದಿದ್ದಾರೆ. ಕಂಬಕ್ಕೆ ಕಟ್ಟಿಹಾಕಿ ವೆಂಕಟೇಶ್‌ಗೆ ಕಳ್ಳರು ಥಳಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ವೆಂಕಟೇಶ್ ಮೃತಪಟ್ಟಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಯಚೂರು: ಕೆಲಸ ಕಳೆದುಕೊಂಡು ಮನನೊಂದಿದ್ದ ವ್ಯಕ್ತಿ ಆತ್ಮಹತ್ಯೆ

ಇತ್ತ ರಾಯಚೂರಿನಲ್ಲಿ ಕೆಲಸ ಕಳೆದುಕೊಂಡು ಮನನೊಂದಿದ್ದ ರವಿತೇಜ (25) ಎಂಬಾತ ನೇಣಿಗೆ ಶರಣಾದ ದುರ್ಘಟನೆ ಸಂಭವಿಸಿದೆ. ರವಿತೇಜ, ಮಸ್ಕಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆ ‌ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಬಸ್, ಕಾರು ಡಿಕ್ಕಿ; ಇಬ್ಬರು ದುರ್ಮರಣ

ಸರ್ಕಾರಿ ಬಸ್​, ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಶಿರುಗುಪ್ಪಿ ಬಳಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹಂಪಿ ಪ್ರವಾಸಕ್ಕೆ ಕಾರಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು, ಕಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರೀಶಿಲನೆ ನಡೆಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಚಿರತೆಯೊಂದಿಗೆ ಕಾದಾಡಿ ಗೆದ್ದ ಸಾಕು ನಾಯಿ; ವಿಡಿಯೋ ನೋಡಿ

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Published On - 10:15 am, Wed, 6 April 22

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ