AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿ; ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವು

ಮರಣೋತ್ತರ ಪರೀಕ್ಷೆಗೆ ಚಿರತೆ ಮೃತದೇಹ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಿರತೆ ಕಳೇಬರಹ ದಹನ ಮಾಡಲಾಗುತ್ತದೆ. ಘಟನೆ ಸಂಬಂಧ ಯಲ್ಲಾಪುರ ಅರಣ್ಯ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿ; ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವು
TV9 Web
| Edited By: |

Updated on:Apr 06, 2022 | 11:43 AM

Share

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಬಿಸಗೋಡ ಗ್ರಾಮದ ಹೊರವಲಯದಲ್ಲಿ ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಬಲಿಯಾದ ದಾರುಣ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಿರತೆಯ ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸಾವನ್ನಪ್ಪಿವೆ. ಚಿರತೆ ಮೃತದೇಹ ಕಂಡು ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಯಲ್ಲಾಪುರದ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಚಿರತೆ ಮೃತದೇಹ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಿರತೆ ಕಳೇಬರಹ ದಹನ ಮಾಡಲಾಗುತ್ತದೆ. ಘಟನೆ ಸಂಬಂಧ ಯಲ್ಲಾಪುರ ಅರಣ್ಯ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಇತ್ತ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತೂರು ಗ್ರಾಮದಲ್ಲಿ ಅಳಿವಿನಂಚಿನ ಚಿಪ್ಪು ಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ ಮಾಡಿದ ಘಟನೆ ನಡೆದಿದೆ. ಸಿಐಡಿ ಅರಣ್ಯ ಘಟಕದಿಂದ ರಾಜು (40), ಧರ್ಮ (35) ಬಂಧಿಸಲಾಗಿದೆ.

ಕುರಿ ಕಳ್ಳತನಕ್ಕೆ ಬಂದು ಕುರಿಗಾಹಿ ಹತ್ಯೆಗೈದ ಖದೀಮರು

ಕುರಿ ಕಳ್ಳತನಕ್ಕೆ ಬಂದ ಖದೀಮರು ಕುರಿಗಾಹಿ ಹತ್ಯೆಗೈದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗಂಗಾಪುರ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ವೆಂಕಟೇಶ್ ಮುತ್ತೂರು (50) ಕೊಲೆ ಮಾಡಲಾಗಿದೆ. ವೆಂಕಟೇಶ್ ಹತ್ಯೆಗೈದು 40 ಕುರಿಯನ್ನು ಹಂತಕರು ಹೊತ್ತೊಯ್ದಿದ್ದಾರೆ. ಕಂಬಕ್ಕೆ ಕಟ್ಟಿಹಾಕಿ ವೆಂಕಟೇಶ್‌ಗೆ ಕಳ್ಳರು ಥಳಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ವೆಂಕಟೇಶ್ ಮೃತಪಟ್ಟಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಯಚೂರು: ಕೆಲಸ ಕಳೆದುಕೊಂಡು ಮನನೊಂದಿದ್ದ ವ್ಯಕ್ತಿ ಆತ್ಮಹತ್ಯೆ

ಇತ್ತ ರಾಯಚೂರಿನಲ್ಲಿ ಕೆಲಸ ಕಳೆದುಕೊಂಡು ಮನನೊಂದಿದ್ದ ರವಿತೇಜ (25) ಎಂಬಾತ ನೇಣಿಗೆ ಶರಣಾದ ದುರ್ಘಟನೆ ಸಂಭವಿಸಿದೆ. ರವಿತೇಜ, ಮಸ್ಕಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆ ‌ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಬಸ್, ಕಾರು ಡಿಕ್ಕಿ; ಇಬ್ಬರು ದುರ್ಮರಣ

ಸರ್ಕಾರಿ ಬಸ್​, ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಶಿರುಗುಪ್ಪಿ ಬಳಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹಂಪಿ ಪ್ರವಾಸಕ್ಕೆ ಕಾರಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು, ಕಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರೀಶಿಲನೆ ನಡೆಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಚಿರತೆಯೊಂದಿಗೆ ಕಾದಾಡಿ ಗೆದ್ದ ಸಾಕು ನಾಯಿ; ವಿಡಿಯೋ ನೋಡಿ

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Published On - 10:15 am, Wed, 6 April 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ