AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಲೆಸ್ಟೈನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಮುಸ್ಲಿಂ ಸಂಘಟನೆಗಳಿಂದ ಭಟ್ಕಳದಲ್ಲಿ ಪ್ರತಿಭಟನೆ

ಇಂದು(ನ.17) ಉತ್ತರ ಕನ್ನಡ ಜಿಲ್ಲೆಯ ಭಟ್ಕಳ(Bhatkal) ದಲ್ಲಿ ಪ್ಯಾಲೆಸ್ಟೈನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭಾರತದ ಧ್ವಜದೊಂದಿಗೆ ಪ್ಯಾಲೆಸ್ತೇನ್ ಧ್ವಜ ಪ್ರದರ್ಶಿಸಿ ಬೆಂಬಲ ವ್ಯಕ್ತಪಡಿಸಿದ್ದು, ವಿವಿಧ ಘೋಷಣೆಗಳ ನಾಮಫಲಕ ಹಿಡಿದು ಎಸಿ ಕಚೇರಿಯೆದುರು ಐನೂರಕ್ಕೂ ಅಧಿಕ ಮುಸ್ಲಿಮರು ಜಮಾಯಿಸಿದ್ದಾರೆ.

ಪ್ಯಾಲೆಸ್ಟೈನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಮುಸ್ಲಿಂ ಸಂಘಟನೆಗಳಿಂದ ಭಟ್ಕಳದಲ್ಲಿ ಪ್ರತಿಭಟನೆ
ಭಟ್ಕಳದಲ್ಲಿ ಮುಸ್ಲೀಂ ಪ್ರತಿಭಟನೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 17, 2023 | 2:54 PM

ಉತ್ತರ ಕನ್ನಡ, ನ.17: ಇಸ್ರೇಲ್ ಹಾಗೂ​ ಪ್ಯಾಲೆಸ್ಟೈನ್​ನ ಹಮಾಸ್(​Israel-Hamas) ಉಗ್ರರ ನಡುವೆ ಯುದ್ಧ ನಡೆದಿದೆ. ಈ ಹಿನ್ನಲೆ ಇಂದು(ನ.17) ಉತ್ತರ ಕನ್ನಡ ಜಿಲ್ಲೆಯ ಭಟ್ಕಳ(Bhatkal) ದಲ್ಲಿ ಪ್ಯಾಲೆಸ್ಟೈನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭಾರತದ ಧ್ವಜದೊಂದಿಗೆ ಪ್ಯಾಲೆಸ್ತೇನ್ ಧ್ವಜ ಪ್ರದರ್ಶಿಸಿ ಬೆಂಬಲ ವ್ಯಕ್ತಪಡಿಸಿದ್ದು, ವಿವಿಧ ಘೋಷಣೆಗಳ ನಾಮಫಲಕ ಹಿಡಿದು ಎಸಿ ಕಚೇರಿಯೆದುರು ಐನೂರಕ್ಕೂ ಅಧಿಕ ಮುಸ್ಲಿಮರು ಜಮಾಯಿಸಿದ್ದಾರೆ. ಪ್ಯಾಲೆಸ್ಟೈನ್ ವಿಷಯದಲ್ಲಿ ಭಾರತ ಸರ್ಕಾರದ ನಿಲುವಿಗೆ ಭಟ್ಕಳ ಮುಸ್ಲಿಂಮರು ಬೆಂಬಲ ಸೂಚಿಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಇನ್ನು ಇದೇ ತಿಂಗಳ 6 ರಂದು ವಿಜಯಪುರದ ಜುಮ್ಮಾ ಮಸೀದಿ  ರಸ್ತೆಯಲ್ಲಿ ಎಸ್​ಡಿಪಿಐ  ಕಾರ್ಯಕರ್ತರು ಪ್ಯಾಲೆಸ್ಟೈನ್ ಪರವಾಗಿ ಘೋಷಣೆ ಕೂಗಿ, ಪ್ರತಿಭಟನೆ ನಡೆಸಿದ್ದರು. ಜೊತೆಗೆ ಪ್ಯಾಲೆಸ್ಟೈನ್ ಪರ ಭಿತ್ತಿಪತ್ರ ಕೂಡ ಪ್ರದರ್ಶನ ಮಾಡಲಾಗಿತ್ತು. ಇನ್ನು ಈ ಪ್ರತಿಭಟನೆಯಲ್ಲಿ ಅಪ್ರಾಪ್ತ ಮಕ್ಕಳು ಸಹಿತ ಭಾಗಿಯಾಗಿದ್ದರು. ಈ ಹಿನ್ನಲೆ ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲ ಎಂಬುವವರ ವಿರುದ್ಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ನನ್ನ ಪತ್ನಿಗೆ ವಿದಾಯ ಹೇಳುತ್ತಿರುವೆ: ದೇಶಕ್ಕಾಗಿ ಹೋರಾಡಲು ಮುಂದಾದ ಇಸ್ರೇಲ್​ ಪತ್ರಕರ್ತ

ಇಷ್ಟೇ ಅಲ್ಲ, ಭಟ್ಕಳ ಕ್ರಿಕೆಟ್ ಲೀಗ್-5 ನವೆಂಬರ್​ 3 ರಿಂದ ಒಂದು ತಿಂಗಳಕಾಲ ಐಪಿಎಲ್ ಮಾದರಿಯಲ್ಲಿ ನಡೆಯಬೇಕಿತ್ತು. ಆದರೆ, ಪ್ಯಾಲೆಸ್ಟೈನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದನ್ನು ಖಂಡಿಸಿ, ಮುಸ್ಲಿಂ ಯೂಥ್ ಫೆಡರೇಶನ್ ನಡೆಸುವ ಭಟ್ಕಳದ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಕೂಡ ಅಂದು ರದ್ದು ಮಾಡಿತ್ತು. ಯುದ್ಧ ಮುಗಿಯುವವರೆಗೆ ಭಟ್ಕಳದ ಮುಸ್ಲಿಮರು ಮದುವೆ, ಮನರಂಜನೆಯನ್ನು ರದ್ದು ಮಾಡುವಂತೆ ಕರೆ ನೀಡಿತ್ತು. ಅವರು ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕಳೆದ ತಿಂಗಳು 200 ಆಟಗಾರರನ್ನು ಗುರುತಿಸಿ ಹರಾಜು ಹಾಕಿ 12 ತಂಡವನ್ನು ಆಯ್ಕೆ ಮಾಡಿತ್ತು. ಮುಸ್ಲಿಮರ ಹತ್ಯೆ ವಿರೋಧಿಸಿ ಕ್ರಿಕೇಟ್ ಪಂದ್ಯಾವಳಿಯನ್ನು ರದ್ದು ಮಾಡಲಾಗಿತ್ತು. ಇದೀಗ ಮೌನ ಪ್ರತಿಭಟನೆಯನ್ನು ಮಾಡುವ ಮೂಲಕ ತಹಶೀಲ್ದಾರ್​ಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್