AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ; ಕಾರವಾರದಲ್ಲಿ ಪುಣೆ ಉದ್ಯಮಿ ಬರ್ಬರ ಕೊಲೆ, ಕಲಬುರಗಿಯಲ್ಲಿ ಪದವಿ ವಿಧ್ಯಾರ್ಥಿಗೆ ಚಾಕು ಇರಿದು ಹತ್ಯೆ

ರಾಜ್ಯದಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಓರ್ವ ಉದ್ಯಮಿ ಹಾಗೂ ವಿದ್ಯಾರ್ಥಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಾತ್ರೆಗೆಂದು ಪುಣೆಯಿಂದ ಕಾರವಾರಕ್ಕೆ ಬಂದು ನೆಲೆಸಿದ್ದ ಉದ್ಯಮಿ ಹಾಗೂ ಆತನ ಪತ್ನಿ ಮೇಲೆ ಇಂದು ಬೆಳಗಿನ ಜಾವ ಊರಿಗೆ ತೆರಳುವಾಗ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮತ್ತೊಂದೆಡೆ ಮಹಾರಾಷ್ಟ್ರದ ಮುಂಬೈನಿಂದ ತಾಯಿಯ ಜೊತೆ ಕಾರವಾರಕ್ಕೆ ಬಂದಿದ್ದ ವಿದ್ಯಾರ್ಥಿಯನ್ನೂ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಪ್ರತ್ಯೇಕ ಘಟನೆ; ಕಾರವಾರದಲ್ಲಿ ಪುಣೆ ಉದ್ಯಮಿ ಬರ್ಬರ ಕೊಲೆ, ಕಲಬುರಗಿಯಲ್ಲಿ ಪದವಿ ವಿಧ್ಯಾರ್ಥಿಗೆ ಚಾಕು ಇರಿದು ಹತ್ಯೆ
ಉದ್ಯಮಿಯನ್ನು ಮನೆಯೊಳಗೆ ಕೊಚ್ಚಿ ಕೊಲೆ ಮಾಡಲಾದ ದೃಶ್ಯ ಹಾಗೂ ಕೊಲೆಯಾದ ವಿದ್ಯಾರ್ಥಿ ಸುಮೀತ್‌
TV9 Web
| Edited By: |

Updated on: Sep 22, 2024 | 8:45 AM

Share

ಕಾರವಾರ, ಸೆ.22: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ಬರ್ಬರ ಕೊಲೆಯಾಗಿದೆ(Murder). ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ(52) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು ಪತಿ ವಿನಾಯಕ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಗೆ ಗಂಭೀರ ಗಾಯಗಳಾಗಿವೆ.

ಮಹಿಳೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ರವಾನೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು ಎಂಬುವುದು ತಿಳಿದುಬಂದಿಲ್ಲ. ಚಿತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಸಮೇತ ಪುಣೆಯಲ್ಲಿ ವಾಸವಾಗಿದ್ದ ವಿನಾಯಕ್ ಅವರು ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಕಾರವಾರಕ್ಕೆ ಬಂದಿದ್ದರು. ಇಂದು ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಬೆಳಗಿನ ಜಾವ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌; ಮಳೆಗಾಲದಲ್ಲಿಯು 32 ಡಿಗ್ರಿ ಬಿಸಿಲು ದಾಖಲು

ಚಾಕುವಿನಿಂದ ಇರಿದು ಪದವಿ ವಿದ್ಯಾರ್ಥಿಯ ಬರ್ಬರ ಕೊಲೆ

ಇನ್ನು ಮತ್ತೊಂದೆಡೆ ಕಲಬುರಗಿ ಹೊರವಲಯದ ನಾಗನಹಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಪದವಿ ವಿದ್ಯಾರ್ಥಿಯ ಬರ್ಬರ ಕೊಲೆ ಮಾಡಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಪದವಿ ವ್ಯಾಸಂಗ ಮಾಡ್ತಿದ್ದ ಸುಮೀತ್ ಎಂಬ ಯುವಕ ನಾಲ್ಕೈದು ದಿನಗಳ ಹಿಂದೆಯಷ್ಟೇ ತಾಯಿಯೊಂದಿಗೆ ಊರಿಗೆ ಬಂದಿದ್ದ. ಯುವತಿಯೊಬ್ಬಳ ಜೊತೆ ಸುಮಿತ್‌ ಸೋದರ ಸಚಿನ್ ಸ್ನೇಹ ಹೊಂದಿದ್ದ. ಸಚಿನ್ ಮೇಲಿನ ಕೋಪಕ್ಕೆ ಸುಮಿತ್‌ ಜೊತೆ ಯುವತಿ ಕಡೆಯವರು ಗಲಾಟೆ ಮಾಡಿದ್ದಾರೆ. ಇದೇ ವಿಚಾರಕ್ಕೆ ಸುಮಿತ್‌ ತಾಯಿ ಜೊತೆ ನಾಲ್ಕೈದು ಜನರು ಗಲಾಟೆ ಮಾಡಿದ್ದರು. ಈ ಗಲಾಟೆ ವೇಳೆ ಸುಮೀತ್‌ ಮಲ್ಲಾಬಾದ್(19)ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಯುವತಿಯ ಕುಟುಂಬಸ್ಥರಿಂದ ಸಚಿನ್ ಸೋದರ ಸುಮೀತ್‌ ಹತ್ಯೆ ನಡೆದಿದೆ. ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!