AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar News: ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಮತ್ತು ತುಳಸಜ್ಜಿಯಿಂದ ರೈಲು ರೋಕೋ; ಕಾರಣ ಇಲ್ಲಿದೆ

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಾರವಾಡ ನಿಲ್ದಾಣ ನಡೆದ ರೈಲು ತಡೆ ಪ್ರತಿಘಟನೆಯಲ್ಲಿ ಪದ್ಮಶ್ರೀ ಪುರಸ್ಕೃತರಾದ ಸುಕ್ರಜ್ಜಿ, ತುಳಸಜ್ಜಿ ಭಾಗಿಯಾದರು.

Karwar News: ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಮತ್ತು ತುಳಸಜ್ಜಿಯಿಂದ ರೈಲು ರೋಕೋ; ಕಾರಣ ಇಲ್ಲಿದೆ
ಕಾರವಾರ: ರೈಲು ರೋಕೋ ಪ್ರತಿಭಟನೆಯಲ್ಲಿ ಭಾಗಿಯಾದ ಪದ್ಮಶ್ರೀ ಪುರಸ್ಕೃತರಾದ ಸುಕ್ರಜ್ಜಿ ಮತ್ತು ತುಳಸಜ್ಜಿ
TV9 Web
| Updated By: Rakesh Nayak Manchi|

Updated on:Jan 16, 2023 | 5:30 PM

Share

ಕಾರವಾರ: ರೈಲು ನಿಲುಗಡೆಗೆ ಆಗ್ರಹಿಸಿ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ನಿಲ್ದಾಣದಲ್ಲಿ (Harwada railway station) ರೈಲು ತಡೆ ಪ್ರತಿಭಟನೆ (Rail Roko Protest) ನಡೆಯಿತು. ಈ ಪ್ರತಿಭಟನೆಯಲ್ಲಿ ಪದ್ಮಶ್ರೀ ಪುರಸ್ಕೃತರಾದ ಸುಕ್ರಜ್ಜಿ (Sukrajji) ಮತ್ತು ತುಳಸಜ್ಜಿ (Tulasajji) ಪಾಲ್ಗೊಂಡರು. ಕೊಂಕಣ ಮಾರ್ಗದಲ್ಲಿ ಸಂಚರಿಸುವ ಗೋವಾದ ಮಡಗಾಂವ್​ನಿಂದ ಮಂಗಳೂರಿಗೆ ಮೆಮೊ ರೈಲು (Madgaon-Mangaluru Memo Train) ನಿಲುಗಡೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗಿದೆ.

ಮಹಾಮಾರಿ ಕೊರೋನಾ ಸೋಂಕು ರಾಜ್ಯಾದ್ಯಂತ ವ್ಯಾಪಿಸಿದ ಪರಿಣಾಮ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್ ಮಾಡಲಾಗಿತ್ತು. ಪರಿಣಾಮವಾಗಿ ಪ್ರತಿಯೊಂದು ಕ್ಷೇತ್ರಗಳ ಬುಡ ಅಲುಗಾಡಿತ್ತು. ಸಾರಿಗೆ ಬಸ್, ರೈಲು ಇತ್ಯಾದಿ ವಾಹನಗಳ ಸಂಚಾರ ರದ್ದುಗೊಳಿಸಿದ್ದರಿಂದ ಒಂದು ಕಡೆಯಿಂದ ಇನ್ನೊಂದು ಕಡೆಗೆ ಜನ ಸಂಚಾರ ಸ್ಥಗಿತಗೊಂಡಿತ್ತು. ಅಂದು ಸ್ಥಗಿತಗೊಂಡಿದ್ದ ಗೋವಾ ರಾಜ್ಯದ ಮಡಗಾಂವ್ ನಿಂದ ಮಂಗಳೂರು ನಡುವೆ ಸಂಚರಿಸುವ ಮೆಮೊ ರೈಲು ಇದೀಗ ಪುನರಾರಂಭವಾಗಿದೆ.

ಇದನ್ನೂ ಓದಿ: ಕಾರವಾರ: ಅವೈಜ್ಞಾನಿಕ ಮೀನುಗಾರಿಕೆಯಿಂದ ನಾಡದೋಣಿ ಮೀನುಗಾರರಿಗೆ ಸಂಕಷ್ಟ; ಅಸಾಂಪ್ರದಾಯಿಕ ಮೀನುಗಾರಿಕೆ ಬಂದ್​ ಮಾಡುವಂತೆ ಒತ್ತಾಯ

ಎರಡು ವರ್ಷಗಳ ನಂತರ ಸಂಚಾರ ಆರಂಭಿಸಿದ ಮೆಮೊ ರೈಲು ಲಾಕ್​ಡೌನ್​ಗೂ ಮುನ್ನ ಹಾರವಾಡ ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಯಾಗುತ್ತಿತ್ತು. ಆದರೆ ಈಗ ಮೆಮೊ ರೈಲು ನಿಲುಗಡೆಗೆ ಅವಕಾಶವನ್ನು ರೈಲ್ವೇ ಇಲಾಖೆ ನಿರಾಕಿರಿಸಿದೆ. ರೈಲ್ವೇ ಇಲಾಖೆಯ ನೀತಿಯನ್ನ ಖಂಡಿಸಿ ಇಂದು ಹಾರವಾಡ ಮತ್ತು‌ ಸುತ್ತಮುತ್ತಲಿನ ಗ್ರಾಮಸ್ಥರು ರೈಲು ರೋಕೋ ಪ್ರತಿಭಟನೆ ನಡೆಸಿ ರೈಲ್ವೇ ನಿಲುಗಡೆಗೆ ಆಗ್ರಹಿಸಿದರು.

ರೈಲು ತಡೆ ಪ್ರತಿಭಟನೆಯಲ್ಲಿ ಹಾರವಾಡ ಮತ್ತು‌ ಸುತ್ತಮುತ್ತಲಿನ ಹತ್ತಾರು ಜನರು ಪಾಲ್ಗೊಂಡು ರೈಲು ತಡೆ ಮಾಡಿದರು. ಸ್ಥಳದಲ್ಲಿ ಮುಂಜಾಗೃತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆಯ ಕೊನೆಯಲ್ಲಿ ರೈಲು ನಿಲುಗಡೆಗೆ ಅವಕಾಶ ನೀಡುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು. ನಂತರ ತಡೆ ಹಿಡಿದ ರೈಲಿನ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ರೈಲು ಹಳಿಯಿಂದ ದೂರಕ್ಕೆ ಕಳುಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Mon, 16 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ