AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ಮದುವೆಗೆ ಒಪ್ಪದ ಕಾರಣ ಮಹಿಳೆಯನ್ನು ನಡು ರಸ್ತೆಯಲ್ಲಿ ಇರಿದು ಕೊಂದಿದ್ದ ಆರೋಪಿ ಕೂಡ ಆತ್ಮಹತ್ಯೆಗ ಶರಣಾಗಿದ್ದಾನೆ. ಎಸ್ಕೇಪ್​​ ಆಗಿದ್ದ ಆತನಿಗೆ ಖಾಕಿ ಹುಡುಕಾಟ ನಡೆಸುವ ವೇಳೆ ಆತನ ಮೃತದೇಹ ಪತ್ತೆಯಾಗಿದ್ದ. ಮಹಿಳೆಯ ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್​​ಗೆ ವಿಎಚ್​​ಪಿ ಕರೆ ಕೊಟ್ಟಿತ್ತು. ಪಟ್ಟಣದ ಬಸವೇಶ್ವರ ಸರ್ಕಲ್​​ನಲ್ಲಿ ಪ್ರತಿಭಟನೆಗೂ ಸಿದ್ಧತೆ ನಡೆದಿತ್ತು. ಆದ್ರೆ ಅದಾಗಲೆ ಆರೋಪಿಯೂ ಮೃತಪಟ್ಟಿರೋ ವಿಷಯ ಬಹಿರಂಗವಾಗಿದೆ.

ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು
ಆತ್ಮಹತ್ಯೆಗೆ ಶರಣಾದ ರಂಜಿತಾಳ ಕೊಂದಿದ್ದ ರಫೀಕ್​​.
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jan 04, 2026 | 9:24 AM

Share

ಯಲ್ಲಾಪುರ, ಜನವರಿ 04: ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಎಸ್ಕೇಪ್​​ ಆಗಿದ್ದ ಆರೋಪಿಗಾಗಿ ಇಂದು ಶ್ವಾನದಳದಿಂದ ಹುಡುಕಾಟ ನಡೆಸುವಾಗ ಘಟನೆ ಬೆಳಕಿಗೆ ಬಂದಿದೆ.

ಸುಮಾರು ಹತ್ತು ವರ್ಷಗಳ ಹಿಂದೆ ಗಂಡಿನಿಂದ ವಿಚ್ಛೇದನ ಪಡೆದಿದ್ದ ಮಹಿಳೆ ರಂಜಿತಾಳನ್ನು ರಫೀಕ್​​ ಪ್ರೀತಿಸುತ್ತಿದ್ದ. ಇಬ್ಬರ ಕುಟುಂಬಗಳ ನಡುವೆ ಒಳ್ಳೆಯ ಬಾಂಧವ್ಯ ಸಹ ಇದ್ದು, ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಊಟ ಮಾಡಿ ಹೋಗುತ್ತಿದ್ದ. ಒಂದು ಮಗು ಕೂಡ ಹೊಂದಿದ್ದ ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದಳು. ಜೀವನೋಪಾಯಕ್ಕಾಗಿ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಈತ್ತೀಚೆಗೆ ಮದುವೆಯಾಗುವಂತೆ ರಂಜಿತಾಳನ್ನು ರಫೀಕ್​​ ಒತ್ತಾಯಿಸಿದ್ದ. ಆದರೆ ಇದಕ್ಕೆ ರಂಜಿತಾ ವಿರೋಧ ವ್ಯಕ್ತಪಡಿಸಿದ್ದಳು. ನಮ್ಮ ಸಂಬಂಧ ಹೀಗೆ ಇರಲಿ, ಆದರೆ ಮದುವೆ ಆಗುವುದಿಲ್ಲ ಎಂದು ಹೇಳಿದ್ದಳು ಎನ್ನಲಾಗಿದೆ.

ಇದನ್ನೂ ಓದಿ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ

ಇದರಿಂದ ಕೋಪಗೊಂಡಿದ್ದ ರಫೀಕ್​​ ಎಂದಿನಂತೆ ರಂಜಿತಾ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ಮಧ್ಯೆ ಆಕೆಯನ್ನು ಅಡ್ಡಗಟ್ಟಿ, ಮತ್ತೆ ಮದುವೆ ಪ್ರಸ್ತಾಪ ಮಾಡಿದ್ದ. ಆದರೆ ಆ ವೇಳೆಯೂ ರಂಜಿತಾ ನಿರಾಕರಿಸಿದ ಕಾರಣ ಆಕೆಗೆ ಚಾಕುವಿನಿಂದ ಇರಿದು ಎಸ್ಕೇಪ್​​ ಆಗಿದ್ದ. ಆರೋಪಿ ರಫೀಕ್​​ ಮತ್ತು ಮೃತ ರಂಜಿತಾಳ ಅಣ್ಣ ಸ್ನೇಹಿತರಾಗಿದ್ದು, ಘಟನೆ ನಡೆಯುವ ಮುನ್ನ ರಾತ್ರಿ ಇಬ್ಬರು ಪಾರ್ಟಿ ಕೂಡ ಮಾಡಿದ್ದರು ಎಂಬುದು ಪೊಲೀಸ್​​ ತನಿಖೆ ವೇಳೆ ಬಯಲಾಗಿತ್ತು.

ಹಿಂದೂ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರೋದನ್ನು ಖಂಡಿಸಿ ಇಂದು ಯಲ್ಲಾಪುರ ಬಂದ್​​ಗೆ ವಿಎಚ್​​ಪಿ ಕರೆ ಕೂಡ ಕೊಟ್ಟಿತ್ತು.ಅಂಗಡಿ ಮುಂಗಟ್ಟು ಮುಚ್ಚಿ ಬಂದ್​​ಗೆ ಸ್ಪಂದಿಸುವಂತೆ ಮನವಿ ಮಾಡಿತ್ತು. ಪಟ್ಟಣದ ಬಸವೇಶ್ವರ ಸರ್ಕಲ್​​ನಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು. ಜೊತೆಗ ಆರೋಪಿ ಬಂಧಿಸೋವರೆಗೂ ರಂಜಿತಾಳ ಅಂತ್ಯಕ್ರಿಯೆ ಮಾಡಲ್ಲೆಂದು ಹಿಂದೂ ಸಂಘಟನೆಗಳ ಪಟ್ಟು ಹಿಡಿದಿದ್ದವು. ಆದ್ರೆ ಈ ನಡುವೆ ರಫೀಕ್​​ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!