AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ಕಡಿತ; ಶೇ 100% ರಷ್ಟು ಮೀಸಲಾತಿ ನೀಡಿ ಎಂದು ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

RFO ಮತ್ತು ACF ಹುದ್ದೆ ಅರಣ್ಯ ಶಾಸ್ತ್ರ ಪದವೀಧರರಿಗೆ ಸಿಗಬೇಕು, ಅದೇ ಕನಿಷ್ಠ ವಿದ್ಯಾರ್ಹತೆ ಆಗಿರಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಮೀಸಲಾತಿ ಕಡಿತವನ್ನು ವಾಪಾಸ್ ತೆಗೆದುಕೊಳ್ಳುವವರೆಗೂ ಪ್ರತಿಭಟನೆ ಬಿಡಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. 

ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ಕಡಿತ; ಶೇ 100% ರಷ್ಟು ಮೀಸಲಾತಿ ನೀಡಿ ಎಂದು ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 08, 2022 | 3:58 PM

Share

ಕಾರವಾರ: ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ಕಡಿತಗೊಳಿಸಿದ್ದಕ್ಕೆ ಅರಣ್ಯ ಪದವೀಧರರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಎಸಿ ಕಚೇರಿ ಮುಂದೆ ಬಿ.ಎಸ್ಸಿ ವಿದ್ಯಾರ್ಥಿಗ (Students) ಳಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಶೇ.75ರಿಂದ ಶೇ.50ಕ್ಕೆ ಸರ್ಕಾರ ಮೀಸಲಾತಿಯನ್ನು ಕಡಿತಗೊಳಿಸಿದೆ. ಎಸಿ ಕಚೇರಿ ಮುಂದೆ ವಿದ್ಯಾರ್ಥಿಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದು, ಅರಣ್ಯಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆ ಮಾಡಲು ಆಗ್ರಹ ಮಾಡಲಾಗಿದೆ. ಸುಮಾರು 240 ವಿದ್ಯಾರ್ಥಿಗಳಿಂದ ಧರಣಿ ಮಾಡಲಾಗುತ್ತಿದ್ದು, ನಮಗೆ 100% ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ. RFO ಮತ್ತು ACF ಹುದ್ದೆ ನೇಮಕಾತಿಯಲ್ಲಿ ಅರಣ್ಯಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಬೇಕು. ರಾಜ್ಯ ಸರ್ಕಾರದ ಮೀಸಲಾತಿ ಕಡಿತದಿಂದ ಅರಣ್ಯ ಪದವೀಧರರ ಮರಣಶಾಸನ ಬರದಂತಾಗಿದೆ. ವಿದ್ಯಾರ್ಥಿಗಳು ನೇಣು ಹಾಕಿಕೊಂಡ ಪ್ರತಿಮೆ, ಮತ್ತು ಶವದ ಅಣಕು ಪ್ರತಿಮೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. RFO ಮತ್ತು ACF ಹುದ್ದೆ ಅರಣ್ಯ ಶಾಸ್ತ್ರ ಪದವೀಧರರಿಗೆ ಸಿಗಬೇಕು, ಅದೇ ಕನಿಷ್ಠ ವಿದ್ಯಾರ್ಹತೆ ಆಗಿರಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಮೀಸಲಾತಿ ಕಡಿತವನ್ನು ವಾಪಾಸ್ ತೆಗೆದುಕೊಳ್ಳುವವರೆಗೂ ಪ್ರತಿಭಟನೆ ಬಿಡಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ತಿಂಗಳ ಕೊನೆಗೆ ಶ್ರೀಲಂಕಾದಲ್ಲಿ ಇಂಧನಕ್ಕಾಗಿ ಹಾಹಾಕಾರ ಸಾಧ್ಯತೆ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿರುವ ದೇಶದಲ್ಲಿ ಆತಂಕ

ಏಪ್ರಿಲ್ 10 ರಿಂದ ಎಲ್ಲಾ ವಯಸ್ಕರಿಗೆ ಕೊವಿಡ್ ಬೂಸ್ಟರ್ ಡೋಸ್‌: ಆರೋಗ್ಯ ಸಚಿವಾಲಯ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ