AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು

ಜೆಡಿಎಸ್ ಮುಖಂಡೆಯ ಪುತ್ರ ಕಿರುಕುಳದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಕುಟುಂಬಗಳ ಮಧ್ಯೆ ನಡೆಯುತ್ತಿದ್ದ ತಿಕ್ಕಾಟ ಇದೀಗ ಎರಡು ಗ್ರಾಮಗಳ ಮಧ್ಯೆ ವೈಮನಸ್ಸಿಗೆ ಕಾರಣವಾಗಿದೆ. ಆರೋಪ, ಪ್ರತ್ಯಾರೋಪಗಳು ಜೋರಾಗಿದ್ದು, ಎಚ್ಚರಿಕೆ ಕೂಡ ನೀಡಲಾಗುತ್ತಿದೆ.

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು
ರೀಶೆಲ್ ಆತ್ಮಹತ್ಯೆ ಪ್ರಕರಣ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jan 16, 2026 | 3:55 PM

Share

ಕಾರವಾರ, ಜನವರಿ 16: ಜೆಡಿಎಸ್‌ (JDS) ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ (suicide) ಪ್ರಕರಣ ಇದೀಗ ಎರಡು ಗ್ರಾಮಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ. ಚಿರಾಗ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬರುತ್ತಿದ್ದು, ಗ್ರಾಮಸ್ಥರು ಪರಸ್ಪರ ಸುದ್ದಿಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡದಂತೆ  ಎಚ್ಚರಿಕೆ ಸಂದೇಶ ನೀಡಿದ್ದಾರೆ.

ದಿನಕ್ಕೊಂದು ತಿರುವು

ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜ್ ಆತ್ಮಹತ್ಯೆ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಎರಡು ಕುಟುಂಬಗಳ ನಡೆವೆ ಹೋರಾಟ ನಡೆದಿತ್ತು. ಆದರೆ ಇದೀಗ ಎರಡು ಗ್ರಾಮಗಳ ಮಧ್ಯೆ ವೈಮನಸ್ಸು ಮೂಡುವ ಹಂತಕ್ಕೆ ತಲುಪಿದೆ.

ಇದನ್ನೂ ಓದಿ: ಪ್ರೀತಿಸುವಂತೆ ಕಾಟ: ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ

ಜೆಡಿಎಸ್ ಮುಖಂಡೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಚೈತ್ರಾ ಕೋಠಾರಕರ ಪುತ್ರ ಚಿರಾಗ್ ಕೋಠಾರಕರ ಕಿರುಕುಳದಿಂದ ರಿಶೇಲ್ ಡಿಸೋಜ್ ಸಾವನಪ್ಪಿದ್ದಾಳೆ ಎಂದು ಸಾಕ್ಷಿ ಸಮೇತ ಸುದ್ದಿಗೊಷ್ಠಿ ಮಾಡಿದ್ದ ಕದ್ರಾ ಗ್ರಾಮಸ್ಥರು ಹಾಗೂ ಕ್ರಿಶ್ಚಿಯನ್ ಮುಖಂಡರು, ಯುವತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಚಿರಾಗ್ ಕೊಠಾರಕರ ಅತ್ಯಾಚಾರ ಮಾಡಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಆತನನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಸುಳ್ಳು ಆರೋಪ ಮಾಡುವವರೇ ನೇರ ಹೊಣೆ

ಇನ್ನು ಕದ್ರಾ ಗ್ರಾಮಸ್ಥರ ಎಚ್ಚರಿಕೆಗೆ ಕಿನ್ನರ ಗ್ರಾಮಸ್ಥರು ತಿರುಗೇಟು ನೀಡಿದ್ದಾರೆ. ಚಿರಾಗ್ ಮತ್ತು ರಿಶೇಲ್ ನಡುವೆ ಪವಿತ್ರ ಪ್ರೀತಿ ಇತ್ತು. ರಿಶೇಲ್ ಆಗಾಗ ಚಿರಾಗ ಮನೆಗೆ ಬಂದು ಹೋಗುತ್ತಿದ್ದಳು ಎಂಬುವುದಕ್ಕೆ ಫೋಟೋ, ವಿಡಿಯೋ ಸಾಕ್ಷಿ ಇದೆ ಆದರೆ, ಇದೀಗ ರಾಜಕೀಯ ದುರಿದ್ದೇಶದಿಂದ ಚಿರಾಗ ಮೇಲೆ ಇಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮಾನಸಿಕ ಒತ್ತಡದಲ್ಲಿರುವ ಚಿರಾಗ್ ಏನಾದರೂ ಮಾಡಿಕೊಂಡರೆ ಸುಳ್ಳು ಆರೋಪ ಮಾಡುತ್ತಿರುವವರೇ ನೇರ ಹೊಣೆ ಆಗುತ್ತಾರೆ. ಅಲ್ಲದೆ ಅವರ ಮೇಲೆ ಕಾನೂನು ಹೋರಾಟ ಮಾಡಲಾಗುವುದು ಎಂದು ಕಿನ್ನರ ಗ್ರಾಮಸ್ಥೆ ಸಿಮಾ ಕೋಠಾರಕರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಾರವಾರ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​

ಒಟ್ಟಾರೆಯಾಗಿ ಇಬ್ಬರ ನಡುವಿನ ಪ್ರೀತಿಯಲ್ಲಿನ ಚಿಕ್ಕ ವೈಮನಸ್ಸು, ಒಂದು ಜೀವ ಕಸಿದುಕೊಂಡರೆ, ಎರಡು ಗ್ರಾಮಗಳ ಜನರಲ್ಲಿ ವೈಮನಸ್ಸು ಮೂಡಲು ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಸನ್ಯಾಸಿ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ!
ಸನ್ಯಾಸಿ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ!
ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ
ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ
ಲಕ್ಷುರಿಯಾಗಿದೆ  ನೋಡಿ ಬೆಂಗಳೂರಿನ ಮಹೇಶ್ ಬಾಬು ಮಲ್ಟಿಪ್ಲೆಕ್ಸ್
ಲಕ್ಷುರಿಯಾಗಿದೆ  ನೋಡಿ ಬೆಂಗಳೂರಿನ ಮಹೇಶ್ ಬಾಬು ಮಲ್ಟಿಪ್ಲೆಕ್ಸ್
‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’
‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’