AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಉದ್ಯಮಿ ಜೊತೆ ಸಂಬಂಧ, ಗೋವಾ ಗುಹೆಯಲ್ಲಿ ಹೆರಿಗೆ; ಗೋಕರ್ಣ ಗುಹೆಯಲ್ಲಿದ್ದ ರಷ್ಯಾದ ಮಹಿಳೆಯ ಕತೆಯಿದು

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಗೋಕರ್ಣ ಬಳಿಯ ರಾಮತೀರ್ಥ ಗುಹೆಯೊಳಗೆ ಮಕ್ಕಳ ಜೊತೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ಇಸ್ರೇಲಿ ಉದ್ಯಮಿಯ ಜೊತೆ ಲಿವ್ ಇನ್ ರಿಲೇಷನ್​​ಶಿಪ್​ನಲ್ಲಿದ್ದರು. ಆಕೆ ಗೋವಾದ ಗುಹೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದರು ಎಂಬ ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ. ಕರ್ನಾಟಕದ ಗೋಕರ್ಣದ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾದ ಮಹಿಳೆ ನೈನಾ ಕುಟಿನಾ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಪತ್ತೆಯಾಗಿದ್ದರು. ಇದು ತೀವ್ರ ಅಚ್ಚರಿಗೆ ಕಾರಣವಾಗಿತ್ತು. ನೈಸರ್ಗಿಕ ಜೀವನ ನಡೆಸುವ ಸಲುವಾಗಿ ಗುಹೆಯಲ್ಲಿದ್ದೆವು ಎಂದು ಆಕೆ ಹೇಳಿಕೊಂಡಿದ್ದರು.

ಇಸ್ರೇಲ್ ಉದ್ಯಮಿ ಜೊತೆ ಸಂಬಂಧ, ಗೋವಾ ಗುಹೆಯಲ್ಲಿ ಹೆರಿಗೆ; ಗೋಕರ್ಣ ಗುಹೆಯಲ್ಲಿದ್ದ ರಷ್ಯಾದ ಮಹಿಳೆಯ ಕತೆಯಿದು
Nina Kutina
ಸುಷ್ಮಾ ಚಕ್ರೆ
|

Updated on: Jul 16, 2025 | 3:28 PM

Share

ಬೆಂಗಳೂರು, ಜುಲೈ 16: ಕಳೆದ ವಾರ ಕರ್ನಾಟಕದ ಉತ್ತರ ಕನ್ನಡದ ಗೋಕರ್ಣದ ಬಳಿಯ ರಾಮತೀರ್ಥ ಗುಹೆಯಲ್ಲಿ (Gokarna Cave) ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಪತ್ತೆಯಾದ ರಷ್ಯಾದ ಮಹಿಳೆ ನೈನಾ ಕುಟಿನಾ ಈ ಹಿಂದೆ ಗೋವಾದ ಗುಹೆಯಲ್ಲಿದ್ದಾಗ ತಾನು ಮಗಳಿಗೆ ಜನ್ಮ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಇಸ್ರೇಲಿ ಉದ್ಯಮಿಯೊಬ್ಬರು ತಮ್ಮ ಮಕ್ಕಳ ತಂದೆ ಎಂದು ಆಕೆ ತಿಳಿಸಿದ್ದಾರೆ. ಆಕೆಯ ಹೇಳಿಕೆಯ ನಂತರ ಆ ಇಸ್ರೇಲಿ ವ್ಯಕ್ತಿಯನ್ನು ಸಂಪರ್ಕಿಸಲಾಗಿದೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.

ಗುಹೆಯಲ್ಲಿ ವಾಸವಾಗಿದ್ದ ನೈನಾ ಮತ್ತು ಅವರ 6 ಹಾಗೂ 4 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಜುಲೈ 9ರಂದು ಪೊಲೀಸ್ ಗಸ್ತು ತಿರುಗುವಿಕೆಯ ಸಮಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಳಿಯ ಗುಹೆಯಿಂದ ರಕ್ಷಿಸಲಾಗಿತ್ತು. ಇದಾದ ನಂತರ ಈ ಘಟನೆಗೆ ಹೊಸ ತಿರುವು ಸಿಕ್ಕತೊಡಗಿದೆ. ಅವರ ವೀಸಾ ಅವಧಿ 2017ರಲ್ಲಿ ಮುಗಿದಿದೆ, ಅವರನ್ನು ತುಮಕೂರಿನ ಕೇಂದ್ರವೊಂದರಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಹಾವುಗಳು ನಮ್ಮ ಸ್ನೇಹಿತರಾಗಿದ್ದವು; ಕುಮಟಾದ ಗುಹೆಯಲ್ಲಿದ್ದ ರಷ್ಯನ್ ಮಹಿಳೆ ಸಮರ್ಥನೆ

ಇದನ್ನೂ ಓದಿ
Image
ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ
Image
ನೈಸರ್ಗಿಕ ಜೀವನ ಎಂಜಾಯ್ ಮಾಡುತ್ತಿದ್ದೆವು; ರಷ್ಯನ್ ಮಹಿಳೆ ಸಮರ್ಥನೆ
Image
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
Image
ಭಾರತದ ಈ ವಿಚಾರಗಳು ರಷ್ಯಾದ ಮಹಿಳೆಗೆ ಇಷ್ಟವಂತೆ

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ (FRRO) ಅಧಿಕಾರಿಯೊಬ್ಬರು ಈ ಬಗ್ಗೆ ತಿಳಿಸಿದ್ದು, ಅವರ ಮಕ್ಕಳ ತಂದೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದೇವೆ. ಅವರು ಇಸ್ರೇಲ್‌ನಿಂದ ಬಂದವರು ಮತ್ತು ಪ್ರಸ್ತುತ ಭಾರತದಲ್ಲಿ ವ್ಯಾಪಾರ ವೀಸಾದಲ್ಲಿದ್ದಾರೆ ಎಂದಿದ್ದಾರೆ. 40ರ ಹರೆಯದ ಇಸ್ರೇಲಿ ವ್ಯಕ್ತಿ ಬಹಳ ಹಿಂದೆಯೇ ನೈನಾ ಅವರನ್ನು ಭೇಟಿಯಾಗಿದ್ದರು. ಅದಾದ ನಂತರ ಇಬ್ಬರ ಮಧ್ಯೆ ಪ್ರೀತಿ ಉಂಟಾಗಿತ್ತು. ಅವರೇ ನೈನಾ ಜೊತೆಗಿದ್ದ ಮಕ್ಕಳ ತಂದೆ. ಅವರು ಬಟ್ಟೆ ಬ್ಯುಸಿನೆಸ್ ಮಾಡುತ್ತಿದ್ದಾರೆ. ನಾವು ಅವರನ್ನು ಭೇಟಿಯಾಗಿದ್ದೇವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ನೈನಾ ಸುದ್ದಿ ಸಂಸ್ಥೆ ANIಗೆ ನೀಡಿರುವ ಮಾಹಿತಿಯಲ್ಲಿ ತಮ್ಮ ಮೊದಲ ಮಗ ಬಹಳ ಹಿಂದೆಯೇ ಮೃತಪಟ್ಟಿದ್ದ. ಆತನ ಅಸ್ತಿಯನ್ನು ನಾನು ತೆಗೆದುಕೊಂಡು ಬಂದಿದ್ದೇನೆ. ನಾನು ಆಧ್ಯಾತ್ಮಿಕತೆಗಾಗಿ ಗೋಕರ್ಣಕ್ಕೆ ಬಂದಿಲ್ಲ, ಪ್ರಕೃತಿ ಉತ್ತಮ ಆರೋಗ್ಯವನ್ನು ನೀಡುತ್ತದೆ ಎಂಬ ಕಾರಣಕ್ಕೆ ಇಲ್ಲಿಗೆ ಬಂದಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕುಮಟಾ ಬಳಿಯ ಗುಹೆಯೊಳಗೆ ಇಬ್ಬರು ಮಕ್ಕಳ ಜೊತೆ ರಷ್ಯಾದ ಮಹಿಳೆಯ ನಿಗೂಢ ವಾಸ

ನೈನಾಗೆ ಆರಂಭದಲ್ಲಿ ತನ್ನ ಹೆಣ್ಣುಮಕ್ಕಳ ತಂದೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಲು ಇಷ್ಟವಿರಲಿಲ್ಲ. ಆದರೆ, ನಂತರ ಅವರು ಕೌನ್ಸಿಲಿಂಗ್ ವೇಳೆ ತಮ್ಮ ಭಾವನೆಗಳನ್ನು ತೆರೆದು, ತಾನು ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿರುವುದಾಗಿ ಹೇಳಿದ್ದು, ಆ ವ್ಯಕ್ತಿಯ ವಿವರಗಳನ್ನು ಬಹಿರಂಗಪಡಿಸಿದರು. “ನೈನಾ ಅವರಿಗೆ ರಷ್ಯಾದಲ್ಲಿ ಮತ್ತೊಂದು ಮಗುವಿದೆ. ನಾವು ಚೆನ್ನೈನಲ್ಲಿರುವ ರಷ್ಯಾದ ಕಾನ್ಸುಲ್ ಜನರಲ್‌ಗೆ ಮಾಹಿತಿ ನೀಡಿದ್ದೇವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ, ರಷ್ಯಾದ ಮಹಿಳೆ ನೈನಾ ಬಗ್ಗೆ ದಿನಕ್ಕೊಂದು ಹೊಸ ಮಾಹಿತಿಗಳು ಹೊರಬೀಳುತ್ತಿವೆ.

ಕರ್ನಾಟಕದ  ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?