AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದಲ್ಲಿ ಮನೆಯ ಮುಂದೆ ಇಟ್ಟಿದ್ದ ಅಡಕೆ ಮೂಟೆ ಕಳ್ಳತನ! ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಮನೆಯವರು ಗೇಟ್ ಬಳಿ ತೆರೆದಿದಾಗ ಅಡಕೆ ಮೂಟೆ ಕಾಣಲ್ಲ. ಈ ವೇಳೆ ಸಿಸಿ ಕ್ಯಾಮೆರಾವನ್ನು ಪರಿಶೀಲನೆ ಮಾಡುತ್ತಾರೆ. ರಾತ್ರಿ 9 ಗಂಟೆ ವೇಳೆಗೆ ನಡೆದ ಕಳ್ಳತನ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಕಾರವಾರದಲ್ಲಿ ಮನೆಯ ಮುಂದೆ ಇಟ್ಟಿದ್ದ ಅಡಕೆ ಮೂಟೆ ಕಳ್ಳತನ! ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಆರೋಪಿ ನಾರಾಯಣ ನಾಯ್ಕ್
TV9 Web
| Edited By: |

Updated on: Feb 25, 2022 | 11:12 AM

Share

ಕಾರವಾರ: ರಾಜ್ಯದಲ್ಲಿ ಅಡಕೆ (Arecanut ) ಬೆಳೆಗಾರರು ಸದ್ಯ ಆದಾಯದ ನಿರೀಕ್ಷೆಯಲ್ಲಿದ್ದಾರೆ. ತೋಟದಿಂದ ಅಡಕೆ ತಂದು ಅದನ್ನು ಸುಲಿದು, ನಂತರ ಬೇಯಿಸಿ, ಅದನ್ನು ಒಣಗಿಸುತ್ತಾರೆ. ಅಡಕೆ ಕೆಲಸ ಸಂಪೂರ್ಣವಾಗಿ ಮುಗಿಸಲು ರೈತರು ಪಡುವ ಕಷ್ಟ ಅಷ್ಟಿಷ್ಟಲ್ಲ. ಅಡಕೆಯಿಂದ ಬರುವ ಆದಾಯಕ್ಕೆ ರೈತರು ಇಡೀ ವರ್ಷ ಕಾದು ಕುಳಿತಿರುತ್ತಾರೆ. ಈ ವೇಳೆ ಬೆವರು ಸುರಿಸಿ ಬೆಳೆದ ಬೆಳೆ ಬೇರೆ ಅವರ ಪಾಲಾದರೆ ರೈತ ಆತಂಕಕ್ಕೆ ಒಳಗಾಗುತ್ತಾನೆ. ಇಂತಹದೊಂದು ಘಟನೆ ಸದ್ಯ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕು ಹೊಸಕುಳಿ ಗ್ರಾಮದಲ್ಲಿ ನಡೆದಿದೆ.

ಮನೆ ಮುಂದೆ ಇಟ್ಟಿದ್ದ ಅಡಕೆ ಮೂಟೆಯನ್ನ ವ್ಯಕ್ತಿಯೊಬ್ಬ ಕದ್ದು ಪರಾರಿ ಆಗಿದ್ದ. ಅಡಕೆ ಮೂಟೆ ಕಳ್ಳತನದ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೊನ್ನಾವರ ತಾಲೂಕು ಹೊಸಕುಳಿ ಗ್ರಾಮದಲ್ಲಿ ಸುರೇಶ್ ಶೆಟ್ಟಿ ಎಂಬ ರೈತನಿಗೆ ಸೇರಿದ ಅಡಕೆ ಮೂಟೆಯನ್ನು ಆರೋಪಿ ನಾರಾಯಣ ನಾಯ್ಕ್ ಕದ್ದು ಎಸ್ಕೇಪ್ ಆಗಿದ್ದ. ಆರೋಪಿ ರಾತ್ರಿ ಮನೆಯ ಹೊರಗೆ ಯಾರೂ ಇಲ್ಲದ್ದನ್ನ ಕಂಡು ಅಂಗಳ ಪ್ರವೇಶಿಸಿದ್ದ. ನಂತರ ಅಂಗಳದಲ್ಲಿದ್ದ ಅಡಕೆ ತುಂಬಿದ್ದ ಮೂಟೆ ಹೊತ್ತು ಹೋಗಿದ್ದ.

ಮನೆಯವರು ಗೇಟ್ ಬಳಿ ತೆರೆದಿದಾಗ ಅಡಕೆ ಮೂಟೆ ಕಾಣಲ್ಲ. ಈ ವೇಳೆ ಸಿಸಿ ಕ್ಯಾಮೆರಾವನ್ನು ಪರಿಶೀಲನೆ ಮಾಡುತ್ತಾರೆ. ರಾತ್ರಿ 9 ಗಂಟೆ ವೇಳೆಗೆ ನಡೆದ ಕಳ್ಳತನ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೂಡಲೇ ಅಕ್ಕಪಕ್ಕದವರಿಗೆ ಮಾಹಿತಿ ನೀಡಿ ಹುಡುಕಾಡಿದಾಗ ಕಳ್ಳ ಪತ್ತೆಯಾಗಿದ್ದಾನೆ. ಅಡಕೆ ಮೂಟೆಯೊಂದಿಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆರೋಪಿ ನಾರಾಯಣ ಮುಗ್ವಾ ಗ್ರಾಮದ ಬಂಕನಹಿತ್ತಲ್ ನಿವಾಸಿ. ಅಡಕೆ ಸಾಗಿಸಲು ಸಹಕರಿಸಿದ ಆಟೋ ಚಾಲಕ ಸೇರಿ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ವಿವಾದ; ಕಾಲೇಜು ನಡೆ ವಿರೋಧಿಸಿ ಸಿಎಂ ಬೊಮ್ಮಾಯಿಗೆ ಶಿರೋಮಣಿ ಗುರುದ್ವಾರ ಸಮಿತಿ ಪತ್ರ

Ravindra Jadeja: ಎರಡು ತಿಂಗಳ ಬಳಿಕ ಕಮ್​ಬ್ಯಾಕ್ ಮಾಡಿ ವಿಕೆಟ್ ಸಿಕ್ಕ ಖುಷಿಯಲ್ಲಿ ಜಡೇಜಾ ಮಾಡಿದ್ದೇನು ನೋಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?